ನವದೆಹಲಿ: ಕೇರಳದಲ್ಲಿ ಬೇರೆ ರಾಜ್ಯಗಳು ನಡೆಸುವ ಲಾಟರಿಗಳನ್ನು ನಿಯಂತ್ರಣಕ್ಕೆ ತರುವ ನಿಯಮಾವಳಿಗಳ ಸಿಂಧುತ್ವ ಪ್ರಶ್ನಿಸಿ ನಾಗಾಲ್ಯಾಂಡ್ ಸರ್ಕಾರ ಸಲ್ಲಿಸಿದ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇರಳ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ವಾದ ಆಲಿಸಿದ ನಂತರ ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್ ಮತ್ತು ಹೃಷಿಕೇಶ್ ರಾಯ್ ಅವರಿದ್ದ ಪೀಠ ಕೇರಳ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತು.
ಕೇರಳ ಕಾಗದ ಲಾಟರಿಗಳ (ನಿಯಂತ್ರಣ) ತಿದ್ದುಪಡಿ ನಿಯಮಾವಳಿ- 2018ರ ಸಿಂಧುತ್ವವನ್ನು ಇತ್ತೀಚೆಗೆ ಎತ್ತಿಹಿಡಿದಿದ್ದ ಕೇರಳ ಹೈಕೋರ್ಟ್ ತೀರ್ಪನ್ನು ಅರ್ಜಿ ಪ್ರಶ್ನಿಸಿದೆ. ಇತರೆ ರಾಜ್ಯಗಳು ನಡೆಸುವ ಲಾಟರಿಗಳ ಮೇಲ್ವಿಚಾರಣೆ ನಡೆಸಲು ಮತ್ತು ದಂಡ ವಿಧಿಸಲು ಕೇರಳ ಸರ್ಕಾರದ ನಿಯಮಾವಳಿಗಳು ಅನುವು ಮಾಡಿಕೊಡುತ್ತವೆ.
ಇದನ್ನು ಪ್ರಶ್ನಿಸಿರುವ ನಾಗಾಲ್ಯಾಂಡ್ ಸರ್ಕಾರ, “ನಿಯಮಗಳು ಸಂವಿಧಾನದಲ್ಲಿ ಕಲ್ಪಿಸಿರುವ ಒಕ್ಕೂಟ ಎಂಬ ಮೂಲಭೂತ ಪರಿಕಲ್ಪನೆಗೆ ವಿರುದ್ಧವಾಗಿದ್ದು ಲಾಟರಿ (ನಿಯಂತ್ರಣ) ಕಾಯಿದೆ ಮತ್ತು ನಿಯಮಗಳ ನೇರ ಉಲ್ಲಂಘನೆಯಾಗಿದೆ. ಹೈಕೋರ್ಟ್ ತೀರ್ಪು ರಾಜ್ಯದೊಳಗೆ ಕೇರಳ ಸರ್ಕಾರ ಲಾಟರಿ ಮಾರಾಟದ ಏಕಸ್ವಾಮ್ಯತೆ ಸಾಧಿಸಲು ಅವಕಾಶ ಮಾಡಿಕೊಟ್ಟಿದೆ. ಆದರೆ ಸುಪ್ರೀಂ ಕೋರ್ಟ್ ʼರಾಜ್ಯವೊಂದು ಲಾಟರಿ ಮುಕ್ತ ವಲಯವಾಗದ ಹೊರತು ಅದು ನೇರವಾಗಿ ಇಲ್ಲವೇ ಪರೋಕ್ಷವಾಗಿ ತನ್ನ ನೆಲದಲ್ಲಿ ಇತರೆ ರಾಜ್ಯಗಳು ನಡೆಸುವ ಲಾಟರಿಗಳನ್ನು ತಡೆಯುವ/ನಿರ್ಬಂಧಿಸುವ/ನಿಯಂತ್ರಿಸುವ/ಕಡಿವಾಣ ಹಾಕುವ ಕ್ರಮಗಳಿಗೆ ಮುಂದಾಗುವಂತಿಲ್ಲ ಎಂದು ಹೇಳಿರುವುದಾಗಿ ತಿಳಿಸಿದೆ.
ಬೆಂಗಳೂರು: ಬೆಂಗಳೂರಿನಲ್ಲಿ 1000 ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ನಿರ್ಮಿಸಬೇಕು ಎಂಬುದು ಡಾ. ಶಾಮನೂರು ಶಿವಶಂಕರಪ್ಪ ಆಶಯವಾಗಿತ್ತು, ಈ ಕನಸು ನನಸು ಮಾಡಲು…
ನವದೆಹಲಿ: ಪವರ್ ಶೇರಿಂಗ್ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವೈರಾಗ್ಯದ ಮಾತನ್ನು ಆಡಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ…
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಚಿತ್ರ ಬಿಡುಗಡೆಯಾಗಿ 14 ದಿನಗಳು ಕಳೆದಿದ್ದು, ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ…
ಬೆಂಗಳೂರು: ಸಚಿವ ಜಮೀರ್ ಅಹಮ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಮನೆ ಸೇರಿ 10 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು…
ನವದೆಹಲಿ: ಕೇಂದ್ರ ಸರ್ಕಾರದ ವತಿಯಿಂದ ಇತ್ತೀಚೆಗೆ ಜಾರಿಗೊಳಿಸಲಾದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ 2026ರ ಫೆಬ್ರವರಿ.12ರಂದು ದೇಶವ್ಯಾಪಿ…
ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದು, ಬ್ಲೂಬರ್ಡ್ ಬ್ಲಾಕ್-2 ವಿದೇಶಿ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ…