ದೇಶ- ವಿದೇಶ

ಉಚಿತ ವಿದ್ಯುತ್‌ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಮೋದಿ

ಗಾಂಧಿನಗರ (ಗುಜರಾತ್):‌ ಪಿಎಂ ನರೇಂದ್ರ ಮೋದಿ ಅವರು ಇಂದು ( ಸೆಪ್ಟೆಂಬರ್‌ 18 ) ಬೆಳಿಗ್ಗೆ 10 ಗಂಟೆಗೆ ಗಾಂಧಿನಗರದ ವಾವೋಲ್‌ನಲ್ಲಿರುವ ಶಾಲಿನ್‌-2 ಸೊಸೈಟಿಯಲ್ಲಿ ʼಪಿಎಂ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆ’ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.

ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾದ ಪಿಎಂ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆಯನ್ನು 2024ರ ಫೆ.29 ರಂದು ಸುಮಾರು 75, 021 ಕೋಟಿ ರೂ.ಗಳ ಯೋಜನೆ ಅಡಿಯಲ್ಲಿ ಗುಜರಾತ್‌ ರಾಜ್ಯದ ಮನೆಗಳ ಮೇಲ್ಛಾವಣಿಯಲ್ಲಿ ಸೌರ ಫಲಕಗಳನ್ನು ಅಳವಡಿಸಲಾಗಿತ್ತು. ಇಂದು ಪ್ರಧಾನಿ ಮೋದಿ ಅವರು ಹಲವಾರು ನಿವಾಸಿಗಳೊಂದಿಗೆ ಸಂವಾದ ನಡೆಸಿದ್ದಾರೆ.

ಮೋದಿ ಅವರು ಸಂವಾದ ನಡೆಸುವ ಸಂದರ್ಭದಲ್ಲಿ ಫಲಾನುಭವಿಗಳಿಗೆ, ಕೇಂದ್ರ ಸರ್ಕಾರದ ಪ್ರಮುಖ ಉದ್ದೇಶ ಮನೆಗಳ ಮೇಲ್ಛಾವಣಿಯಲ್ಲಿ ಸೌರಫಲಕಗಳನ್ನು ಅಳವಡಿಸುವುದಾಗಿತ್ತು. ಏಕೆಂದರೆ ಇದರಿಂದ ತಮ್ಮ ವಸತಿ ಗೃಹಗಳಲ್ಲಿ ಸ್ವಂತ ವಿದ್ಯುತ್‌ ಉತ್ಪಾದಿಸಲು ಅವಕಾಶ ಮಾಡಿಕೊಡಲಾಗುತ್ತದೆ. ಒಟ್ಟು ವಿದ್ಯುತ್‌ ವೆಚ್ಚದಲ್ಲಿಯೂ ಸರ್ಕಾರಕ್ಕೆ ಉಳಿತಾಯವಾಗುವಂತೆ ಮಾಡುತ್ತದೆ. ಅಲ್ಲದೆ ನೂತವಾಗಿ ವಿದ್ಯುತ್‌ನ್ನು ನವೀಕರಿಸಬಹುದಾದ ಶಕ್ತಿಯ ಸದ್ಬಳಕೆ ಮಾಡಬಹುದು ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಚಾರದ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಈ ರೀತಿಯಾಗಿ ಬರೆದುಕೊಂಡಿದ್ದಾರೆ. ʼನಾನು ಇತ್ತೀಚೆಗೆ ಗುಜರಾತ್​ಗೆ ಭೇಟಿ ನೀಡಿದ್ದಾಗ ಶಗಶಿಭಾಯಿ ಸುತಾರ್ ಅವರ ಮನೆಗೆ ಹೋಗಿದ್ದೆ, ಅವರ ಕುಟುಂಬವು ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯಿಂದ ಪ್ರಯೋಜನ ಪಡೆದಿದೆ. ನಾನು ಇತರೆ ಫಲಾನುಭವಿಗಳನ್ನು ಕೂಡ ಭೇಟಿಯಾದೆʼ ಎಂದು ಅವರ ಹೈಲೈಟ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

8 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

8 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

8 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

8 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

8 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

8 hours ago