ದೇಶ- ವಿದೇಶ

ಉಚಿತ ವಿದ್ಯುತ್‌ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಮೋದಿ

ಗಾಂಧಿನಗರ (ಗುಜರಾತ್):‌ ಪಿಎಂ ನರೇಂದ್ರ ಮೋದಿ ಅವರು ಇಂದು ( ಸೆಪ್ಟೆಂಬರ್‌ 18 ) ಬೆಳಿಗ್ಗೆ 10 ಗಂಟೆಗೆ ಗಾಂಧಿನಗರದ ವಾವೋಲ್‌ನಲ್ಲಿರುವ ಶಾಲಿನ್‌-2 ಸೊಸೈಟಿಯಲ್ಲಿ ʼಪಿಎಂ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆ’ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.

ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾದ ಪಿಎಂ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆಯನ್ನು 2024ರ ಫೆ.29 ರಂದು ಸುಮಾರು 75, 021 ಕೋಟಿ ರೂ.ಗಳ ಯೋಜನೆ ಅಡಿಯಲ್ಲಿ ಗುಜರಾತ್‌ ರಾಜ್ಯದ ಮನೆಗಳ ಮೇಲ್ಛಾವಣಿಯಲ್ಲಿ ಸೌರ ಫಲಕಗಳನ್ನು ಅಳವಡಿಸಲಾಗಿತ್ತು. ಇಂದು ಪ್ರಧಾನಿ ಮೋದಿ ಅವರು ಹಲವಾರು ನಿವಾಸಿಗಳೊಂದಿಗೆ ಸಂವಾದ ನಡೆಸಿದ್ದಾರೆ.

ಮೋದಿ ಅವರು ಸಂವಾದ ನಡೆಸುವ ಸಂದರ್ಭದಲ್ಲಿ ಫಲಾನುಭವಿಗಳಿಗೆ, ಕೇಂದ್ರ ಸರ್ಕಾರದ ಪ್ರಮುಖ ಉದ್ದೇಶ ಮನೆಗಳ ಮೇಲ್ಛಾವಣಿಯಲ್ಲಿ ಸೌರಫಲಕಗಳನ್ನು ಅಳವಡಿಸುವುದಾಗಿತ್ತು. ಏಕೆಂದರೆ ಇದರಿಂದ ತಮ್ಮ ವಸತಿ ಗೃಹಗಳಲ್ಲಿ ಸ್ವಂತ ವಿದ್ಯುತ್‌ ಉತ್ಪಾದಿಸಲು ಅವಕಾಶ ಮಾಡಿಕೊಡಲಾಗುತ್ತದೆ. ಒಟ್ಟು ವಿದ್ಯುತ್‌ ವೆಚ್ಚದಲ್ಲಿಯೂ ಸರ್ಕಾರಕ್ಕೆ ಉಳಿತಾಯವಾಗುವಂತೆ ಮಾಡುತ್ತದೆ. ಅಲ್ಲದೆ ನೂತವಾಗಿ ವಿದ್ಯುತ್‌ನ್ನು ನವೀಕರಿಸಬಹುದಾದ ಶಕ್ತಿಯ ಸದ್ಬಳಕೆ ಮಾಡಬಹುದು ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಚಾರದ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಈ ರೀತಿಯಾಗಿ ಬರೆದುಕೊಂಡಿದ್ದಾರೆ. ʼನಾನು ಇತ್ತೀಚೆಗೆ ಗುಜರಾತ್​ಗೆ ಭೇಟಿ ನೀಡಿದ್ದಾಗ ಶಗಶಿಭಾಯಿ ಸುತಾರ್ ಅವರ ಮನೆಗೆ ಹೋಗಿದ್ದೆ, ಅವರ ಕುಟುಂಬವು ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯಿಂದ ಪ್ರಯೋಜನ ಪಡೆದಿದೆ. ನಾನು ಇತರೆ ಫಲಾನುಭವಿಗಳನ್ನು ಕೂಡ ಭೇಟಿಯಾದೆʼ ಎಂದು ಅವರ ಹೈಲೈಟ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

1 hour ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

2 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

2 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago