ಗಾಂಧಿನಗರ (ಗುಜರಾತ್): ಪಿಎಂ ನರೇಂದ್ರ ಮೋದಿ ಅವರು ಇಂದು ( ಸೆಪ್ಟೆಂಬರ್ 18 ) ಬೆಳಿಗ್ಗೆ 10 ಗಂಟೆಗೆ ಗಾಂಧಿನಗರದ ವಾವೋಲ್ನಲ್ಲಿರುವ ಶಾಲಿನ್-2 ಸೊಸೈಟಿಯಲ್ಲಿ ʼಪಿಎಂ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆ’ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.
ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾದ ಪಿಎಂ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆಯನ್ನು 2024ರ ಫೆ.29 ರಂದು ಸುಮಾರು 75, 021 ಕೋಟಿ ರೂ.ಗಳ ಯೋಜನೆ ಅಡಿಯಲ್ಲಿ ಗುಜರಾತ್ ರಾಜ್ಯದ ಮನೆಗಳ ಮೇಲ್ಛಾವಣಿಯಲ್ಲಿ ಸೌರ ಫಲಕಗಳನ್ನು ಅಳವಡಿಸಲಾಗಿತ್ತು. ಇಂದು ಪ್ರಧಾನಿ ಮೋದಿ ಅವರು ಹಲವಾರು ನಿವಾಸಿಗಳೊಂದಿಗೆ ಸಂವಾದ ನಡೆಸಿದ್ದಾರೆ.
ಮೋದಿ ಅವರು ಸಂವಾದ ನಡೆಸುವ ಸಂದರ್ಭದಲ್ಲಿ ಫಲಾನುಭವಿಗಳಿಗೆ, ಕೇಂದ್ರ ಸರ್ಕಾರದ ಪ್ರಮುಖ ಉದ್ದೇಶ ಮನೆಗಳ ಮೇಲ್ಛಾವಣಿಯಲ್ಲಿ ಸೌರಫಲಕಗಳನ್ನು ಅಳವಡಿಸುವುದಾಗಿತ್ತು. ಏಕೆಂದರೆ ಇದರಿಂದ ತಮ್ಮ ವಸತಿ ಗೃಹಗಳಲ್ಲಿ ಸ್ವಂತ ವಿದ್ಯುತ್ ಉತ್ಪಾದಿಸಲು ಅವಕಾಶ ಮಾಡಿಕೊಡಲಾಗುತ್ತದೆ. ಒಟ್ಟು ವಿದ್ಯುತ್ ವೆಚ್ಚದಲ್ಲಿಯೂ ಸರ್ಕಾರಕ್ಕೆ ಉಳಿತಾಯವಾಗುವಂತೆ ಮಾಡುತ್ತದೆ. ಅಲ್ಲದೆ ನೂತವಾಗಿ ವಿದ್ಯುತ್ನ್ನು ನವೀಕರಿಸಬಹುದಾದ ಶಕ್ತಿಯ ಸದ್ಬಳಕೆ ಮಾಡಬಹುದು ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಚಾರದ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿಯಾಗಿ ಬರೆದುಕೊಂಡಿದ್ದಾರೆ. ʼನಾನು ಇತ್ತೀಚೆಗೆ ಗುಜರಾತ್ಗೆ ಭೇಟಿ ನೀಡಿದ್ದಾಗ ಶಗಶಿಭಾಯಿ ಸುತಾರ್ ಅವರ ಮನೆಗೆ ಹೋಗಿದ್ದೆ, ಅವರ ಕುಟುಂಬವು ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯಿಂದ ಪ್ರಯೋಜನ ಪಡೆದಿದೆ. ನಾನು ಇತರೆ ಫಲಾನುಭವಿಗಳನ್ನು ಕೂಡ ಭೇಟಿಯಾದೆʼ ಎಂದು ಅವರ ಹೈಲೈಟ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…
ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…