ಗಾಂಧಿನಗರ (ಗುಜರಾತ್): ಪಿಎಂ ನರೇಂದ್ರ ಮೋದಿ ಅವರು ಇಂದು ( ಸೆಪ್ಟೆಂಬರ್ 18 ) ಬೆಳಿಗ್ಗೆ 10 ಗಂಟೆಗೆ ಗಾಂಧಿನಗರದ ವಾವೋಲ್ನಲ್ಲಿರುವ ಶಾಲಿನ್-2 ಸೊಸೈಟಿಯಲ್ಲಿ ʼಪಿಎಂ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆ’ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.
ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾದ ಪಿಎಂ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆಯನ್ನು 2024ರ ಫೆ.29 ರಂದು ಸುಮಾರು 75, 021 ಕೋಟಿ ರೂ.ಗಳ ಯೋಜನೆ ಅಡಿಯಲ್ಲಿ ಗುಜರಾತ್ ರಾಜ್ಯದ ಮನೆಗಳ ಮೇಲ್ಛಾವಣಿಯಲ್ಲಿ ಸೌರ ಫಲಕಗಳನ್ನು ಅಳವಡಿಸಲಾಗಿತ್ತು. ಇಂದು ಪ್ರಧಾನಿ ಮೋದಿ ಅವರು ಹಲವಾರು ನಿವಾಸಿಗಳೊಂದಿಗೆ ಸಂವಾದ ನಡೆಸಿದ್ದಾರೆ.
ಮೋದಿ ಅವರು ಸಂವಾದ ನಡೆಸುವ ಸಂದರ್ಭದಲ್ಲಿ ಫಲಾನುಭವಿಗಳಿಗೆ, ಕೇಂದ್ರ ಸರ್ಕಾರದ ಪ್ರಮುಖ ಉದ್ದೇಶ ಮನೆಗಳ ಮೇಲ್ಛಾವಣಿಯಲ್ಲಿ ಸೌರಫಲಕಗಳನ್ನು ಅಳವಡಿಸುವುದಾಗಿತ್ತು. ಏಕೆಂದರೆ ಇದರಿಂದ ತಮ್ಮ ವಸತಿ ಗೃಹಗಳಲ್ಲಿ ಸ್ವಂತ ವಿದ್ಯುತ್ ಉತ್ಪಾದಿಸಲು ಅವಕಾಶ ಮಾಡಿಕೊಡಲಾಗುತ್ತದೆ. ಒಟ್ಟು ವಿದ್ಯುತ್ ವೆಚ್ಚದಲ್ಲಿಯೂ ಸರ್ಕಾರಕ್ಕೆ ಉಳಿತಾಯವಾಗುವಂತೆ ಮಾಡುತ್ತದೆ. ಅಲ್ಲದೆ ನೂತವಾಗಿ ವಿದ್ಯುತ್ನ್ನು ನವೀಕರಿಸಬಹುದಾದ ಶಕ್ತಿಯ ಸದ್ಬಳಕೆ ಮಾಡಬಹುದು ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಚಾರದ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿಯಾಗಿ ಬರೆದುಕೊಂಡಿದ್ದಾರೆ. ʼನಾನು ಇತ್ತೀಚೆಗೆ ಗುಜರಾತ್ಗೆ ಭೇಟಿ ನೀಡಿದ್ದಾಗ ಶಗಶಿಭಾಯಿ ಸುತಾರ್ ಅವರ ಮನೆಗೆ ಹೋಗಿದ್ದೆ, ಅವರ ಕುಟುಂಬವು ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯಿಂದ ಪ್ರಯೋಜನ ಪಡೆದಿದೆ. ನಾನು ಇತರೆ ಫಲಾನುಭವಿಗಳನ್ನು ಕೂಡ ಭೇಟಿಯಾದೆʼ ಎಂದು ಅವರ ಹೈಲೈಟ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…