ದೇಶ- ವಿದೇಶ

ಬಡತನದಲ್ಲಿ ಬೆಳೆದ ನನ್ನಂತ ವ್ಯಕ್ತಿ ರಾಷ್ಟ್ರಸೇವೆ ಮಾಡಲು ಸಾಧ್ಯವಾದದ್ದು ಸಂವಿಧಾನದಿಂದ ಮಾತ್ರ: ನರೇಂದ್ರ ಮೋದಿ!

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಪಕ್ಷವು 18ನೇ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರದ ಗದ್ದುಗೆ ಹಿಡಿದ ಬೆನ್ನಲ್ಲೇ ಇಂದು (ಜೂನ್‌.7) ಪ್ರಧಾನಿ ನರೇಂದ್ರ ಮೋದಿ ಅವರು ಸಂಸದೀಯ ಸಭೆ ಆರಂಭಕ್ಕೂ ಮುನ್ನಾ ಸಂವಿಧಾನಕ್ಕೆ ನಮಸ್ಕರಿಸಿದರು.

ಸಭೆಗೂ ಮುನ್ನಾ ಸದನದಲ್ಲಿದ್ದ ಸಂವಿಧಾನಕ್ಕೆ ನಮಸ್ಕರಿಸಿದ ಮೋದಿ, ತಮ್ಮ ಮಿತ್ರ ಪಕ್ಷಗಳ ನಾಯಕರಾದ ಎಚ್‌.ಡಿ ಕುಮಾರಸ್ವಾಮಿ, ಚಂದ್ರಬಾಬು ನಾಯ್ಡು, ನಿತೀಶ್‌ ಕುಮಾರ್‌ ಜತೆಯಲ್ಲಿ ಮಾತನಾಡಿದರು. ಬಳಿಕ ಸರ್ಕಾರ ನಡೆಸಲು ಬಹುಮತ ಅಗತ್ಯ, ದೇಶವನ್ನು ನಡೆಸಲು ಒಮ್ಮತ ಅಗತ್ಯ ಎಂದು ಮೋದಿ ಹೇಳಿದರು.

ಬಿಜೆಪಿ ಸರ್ಕಾರ ಸಂವಿಧಾನವನ್ನು ಬದಲಿಸಲು ಹೊರಟಿದೆ ಎಂದು ಇಂಡಿಯಾ ಮಿತ್ರ ಕೂಟ ಚುನಾವಣಾ ಪ್ರಚಾರದ ವೇಳೆ ಹೇಳಿದ್ದರು. ಈ ಸಭೆಯಲ್ಲಿ ಮೋದಿ ಸಂವಿಧಾನಕ್ಕೆ ನಮಸ್ಕರಿಸುವ ಮೂಲಕ ತಮ್ಮ ಮೇಲೆ ಈ ಹಿಂದೆ ಇದ್ದ ಆರೋಪವನ್ನು ಸಲೀಸಾಗಿ ತಳ್ಳಿಹಾಕುವ ರೀತಿಯಲ್ಲಿ ಮೋದಿ ಸಂವಿಧಾನಕ್ಕೆ ನಮಸ್ಕರಿಸಿದ್ದಾರೆ.

ಇನ್ನು ಈ ಸಂಬಂಧ ಟ್ವೀಟ್‌ ಮಾಡಿರುವ ಮೋದಿ, “ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ನಮಗೆ ನೀಡಿದ ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಉದಾತ್ತ ಮೌಲ್ಯಗಳನ್ನು ಎತ್ತಿಹಿಡಿಯಲು ನನ್ನ ಜೀವನದ ಪ್ರತಿ ಕ್ಷಣವೂ ಸಮರ್ಪಿತವಾಗಿದೆ. ಬಡತನದಲ್ಲಿ ಮತ್ತು ಹಿಂದುಳಿದ ಕುಟುಂಬದಲ್ಲಿ ಜನಿಸಿದ ನನ್ನಂತಹ ವ್ಯಕ್ತಿ ರಾಷ್ಟ್ರ ಸೇವೆ ಮಾಡಲು ಸಂವಿಧಾನದಿಂದ ಮಾತ್ರ ಸಾಧ್ಯ. ನಮ್ಮ ಸಂವಿಧಾನವು ಕೋಟ್ಯಂತರ ಜನರಿಗೆ ಭರವಸೆ, ಶಕ್ತಿ ಮತ್ತು ಘನತೆಯನ್ನು ನೀಡುತ್ತದೆ” ಎಂದು ಬರೆದುಕೊಂಡಿದ್ದಾರೆ.

ಅಡ್ವಾಣಿ ಭೇಟಿಯಾದ ಮೋದಿ:

ಸಂಸದೀಯ ನಾಯಕರಾಗಿ ನರೇಂದ್ರ ಮೋದಿ ಆಯ್ಕೆಯಾದ ಬಳಿಕ ಸತತ ಮೂರನೇ ಬಾರಿಗೆ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ರಾಷ್ಟ್ರಪತಿ ಭವನಕ್ಕೆ ತೆರಳುವ ಮುನ್ನಾ ತಮ್ಮ ರಾಜಕೀಯ ಗುರುಗಳಾದ ಎಲ್‌.ಕೆ ಅಡ್ವಾಣಿ ಅವರನ್ನು ಭೇಟಿಯಾಗಿದ್ದಾರೆ. ಇವರ ಭೇಟಿಯ ಬಳಿಕ ಮುರಳಿ ಮನೋಹರ ಜೋಷಿ ಹಾಗೂ ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಅವರನ್ನು ಸಹಾ ಮೋದಿ ಭೇಟಿಯಾದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

5 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

5 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

5 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

5 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

5 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

5 hours ago