ದೇಶ- ವಿದೇಶ

ಬಡತನದಲ್ಲಿ ಬೆಳೆದ ನನ್ನಂತ ವ್ಯಕ್ತಿ ರಾಷ್ಟ್ರಸೇವೆ ಮಾಡಲು ಸಾಧ್ಯವಾದದ್ದು ಸಂವಿಧಾನದಿಂದ ಮಾತ್ರ: ನರೇಂದ್ರ ಮೋದಿ!

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಪಕ್ಷವು 18ನೇ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರದ ಗದ್ದುಗೆ ಹಿಡಿದ ಬೆನ್ನಲ್ಲೇ ಇಂದು (ಜೂನ್‌.7) ಪ್ರಧಾನಿ ನರೇಂದ್ರ ಮೋದಿ ಅವರು ಸಂಸದೀಯ ಸಭೆ ಆರಂಭಕ್ಕೂ ಮುನ್ನಾ ಸಂವಿಧಾನಕ್ಕೆ ನಮಸ್ಕರಿಸಿದರು.

ಸಭೆಗೂ ಮುನ್ನಾ ಸದನದಲ್ಲಿದ್ದ ಸಂವಿಧಾನಕ್ಕೆ ನಮಸ್ಕರಿಸಿದ ಮೋದಿ, ತಮ್ಮ ಮಿತ್ರ ಪಕ್ಷಗಳ ನಾಯಕರಾದ ಎಚ್‌.ಡಿ ಕುಮಾರಸ್ವಾಮಿ, ಚಂದ್ರಬಾಬು ನಾಯ್ಡು, ನಿತೀಶ್‌ ಕುಮಾರ್‌ ಜತೆಯಲ್ಲಿ ಮಾತನಾಡಿದರು. ಬಳಿಕ ಸರ್ಕಾರ ನಡೆಸಲು ಬಹುಮತ ಅಗತ್ಯ, ದೇಶವನ್ನು ನಡೆಸಲು ಒಮ್ಮತ ಅಗತ್ಯ ಎಂದು ಮೋದಿ ಹೇಳಿದರು.

ಬಿಜೆಪಿ ಸರ್ಕಾರ ಸಂವಿಧಾನವನ್ನು ಬದಲಿಸಲು ಹೊರಟಿದೆ ಎಂದು ಇಂಡಿಯಾ ಮಿತ್ರ ಕೂಟ ಚುನಾವಣಾ ಪ್ರಚಾರದ ವೇಳೆ ಹೇಳಿದ್ದರು. ಈ ಸಭೆಯಲ್ಲಿ ಮೋದಿ ಸಂವಿಧಾನಕ್ಕೆ ನಮಸ್ಕರಿಸುವ ಮೂಲಕ ತಮ್ಮ ಮೇಲೆ ಈ ಹಿಂದೆ ಇದ್ದ ಆರೋಪವನ್ನು ಸಲೀಸಾಗಿ ತಳ್ಳಿಹಾಕುವ ರೀತಿಯಲ್ಲಿ ಮೋದಿ ಸಂವಿಧಾನಕ್ಕೆ ನಮಸ್ಕರಿಸಿದ್ದಾರೆ.

ಇನ್ನು ಈ ಸಂಬಂಧ ಟ್ವೀಟ್‌ ಮಾಡಿರುವ ಮೋದಿ, “ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ನಮಗೆ ನೀಡಿದ ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಉದಾತ್ತ ಮೌಲ್ಯಗಳನ್ನು ಎತ್ತಿಹಿಡಿಯಲು ನನ್ನ ಜೀವನದ ಪ್ರತಿ ಕ್ಷಣವೂ ಸಮರ್ಪಿತವಾಗಿದೆ. ಬಡತನದಲ್ಲಿ ಮತ್ತು ಹಿಂದುಳಿದ ಕುಟುಂಬದಲ್ಲಿ ಜನಿಸಿದ ನನ್ನಂತಹ ವ್ಯಕ್ತಿ ರಾಷ್ಟ್ರ ಸೇವೆ ಮಾಡಲು ಸಂವಿಧಾನದಿಂದ ಮಾತ್ರ ಸಾಧ್ಯ. ನಮ್ಮ ಸಂವಿಧಾನವು ಕೋಟ್ಯಂತರ ಜನರಿಗೆ ಭರವಸೆ, ಶಕ್ತಿ ಮತ್ತು ಘನತೆಯನ್ನು ನೀಡುತ್ತದೆ” ಎಂದು ಬರೆದುಕೊಂಡಿದ್ದಾರೆ.

ಅಡ್ವಾಣಿ ಭೇಟಿಯಾದ ಮೋದಿ:

ಸಂಸದೀಯ ನಾಯಕರಾಗಿ ನರೇಂದ್ರ ಮೋದಿ ಆಯ್ಕೆಯಾದ ಬಳಿಕ ಸತತ ಮೂರನೇ ಬಾರಿಗೆ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ರಾಷ್ಟ್ರಪತಿ ಭವನಕ್ಕೆ ತೆರಳುವ ಮುನ್ನಾ ತಮ್ಮ ರಾಜಕೀಯ ಗುರುಗಳಾದ ಎಲ್‌.ಕೆ ಅಡ್ವಾಣಿ ಅವರನ್ನು ಭೇಟಿಯಾಗಿದ್ದಾರೆ. ಇವರ ಭೇಟಿಯ ಬಳಿಕ ಮುರಳಿ ಮನೋಹರ ಜೋಷಿ ಹಾಗೂ ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಅವರನ್ನು ಸಹಾ ಮೋದಿ ಭೇಟಿಯಾದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

3 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

6 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

7 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಚಿತ್ರೋದ್ಯಮದತ್ತ ಕೇಂದ್ರದ ಗಮನ, ಅಧ್ಯಯನ ತಂಡ ರಚನೆ

ಭಾರತೀಯ ಚಿತ್ರೋದ್ಯಮದ ಉತ್ತೇಜನಕ್ಕಾಗಿ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮುಂದಾಗಿರುವ ಸುದ್ದಿ. ಚಿತ್ರರಂಗಕ್ಕೆ ಸಂಬಂಧಿಸಿದಂತೆ, ಚಿತ್ರಗಳನ್ನು ವರ್ಗೀಕರಿಸಿ, ಪ್ರಮಾಣಪತ್ರ…

7 hours ago

ಕೊಡಗು ಜಿಲ್ಲೆಯಲ್ಲಿ ನಮೂನೆ ವಿತರಣೆ ಕಾರ್ಯ ಪೂರ್ಣ

ನವೀನ್ ಡಿಸೋಜ ತ್ವರಿತಗತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ; ಒಟ್ಟು ೪,೬೮,೬೫೭ ನಮೂನೆ ವಿತರಣೆ ಮೂಲಕ ಶೇ.೧೦೦ ಪ್ರಗತಿ…

7 hours ago

ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ

ಹನೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡುವಿನದೊಡ್ಡಿ ಮತ್ತು ಅರ್ಧನಾರೀಪುರ ಗ್ರಾಮಗಳಿಗೆ ಗುರುವಾರ ಗ್ರಾಮ ಪಂಚಾಯಿತಿ ವತಿಯಿಂದ ಟ್ಯಾಂಕರ್…

7 hours ago