ದೇಶ- ವಿದೇಶ

ಬಡತನದಲ್ಲಿ ಬೆಳೆದ ನನ್ನಂತ ವ್ಯಕ್ತಿ ರಾಷ್ಟ್ರಸೇವೆ ಮಾಡಲು ಸಾಧ್ಯವಾದದ್ದು ಸಂವಿಧಾನದಿಂದ ಮಾತ್ರ: ನರೇಂದ್ರ ಮೋದಿ!

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಪಕ್ಷವು 18ನೇ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರದ ಗದ್ದುಗೆ ಹಿಡಿದ ಬೆನ್ನಲ್ಲೇ ಇಂದು (ಜೂನ್‌.7) ಪ್ರಧಾನಿ ನರೇಂದ್ರ ಮೋದಿ ಅವರು ಸಂಸದೀಯ ಸಭೆ ಆರಂಭಕ್ಕೂ ಮುನ್ನಾ ಸಂವಿಧಾನಕ್ಕೆ ನಮಸ್ಕರಿಸಿದರು.

ಸಭೆಗೂ ಮುನ್ನಾ ಸದನದಲ್ಲಿದ್ದ ಸಂವಿಧಾನಕ್ಕೆ ನಮಸ್ಕರಿಸಿದ ಮೋದಿ, ತಮ್ಮ ಮಿತ್ರ ಪಕ್ಷಗಳ ನಾಯಕರಾದ ಎಚ್‌.ಡಿ ಕುಮಾರಸ್ವಾಮಿ, ಚಂದ್ರಬಾಬು ನಾಯ್ಡು, ನಿತೀಶ್‌ ಕುಮಾರ್‌ ಜತೆಯಲ್ಲಿ ಮಾತನಾಡಿದರು. ಬಳಿಕ ಸರ್ಕಾರ ನಡೆಸಲು ಬಹುಮತ ಅಗತ್ಯ, ದೇಶವನ್ನು ನಡೆಸಲು ಒಮ್ಮತ ಅಗತ್ಯ ಎಂದು ಮೋದಿ ಹೇಳಿದರು.

ಬಿಜೆಪಿ ಸರ್ಕಾರ ಸಂವಿಧಾನವನ್ನು ಬದಲಿಸಲು ಹೊರಟಿದೆ ಎಂದು ಇಂಡಿಯಾ ಮಿತ್ರ ಕೂಟ ಚುನಾವಣಾ ಪ್ರಚಾರದ ವೇಳೆ ಹೇಳಿದ್ದರು. ಈ ಸಭೆಯಲ್ಲಿ ಮೋದಿ ಸಂವಿಧಾನಕ್ಕೆ ನಮಸ್ಕರಿಸುವ ಮೂಲಕ ತಮ್ಮ ಮೇಲೆ ಈ ಹಿಂದೆ ಇದ್ದ ಆರೋಪವನ್ನು ಸಲೀಸಾಗಿ ತಳ್ಳಿಹಾಕುವ ರೀತಿಯಲ್ಲಿ ಮೋದಿ ಸಂವಿಧಾನಕ್ಕೆ ನಮಸ್ಕರಿಸಿದ್ದಾರೆ.

ಇನ್ನು ಈ ಸಂಬಂಧ ಟ್ವೀಟ್‌ ಮಾಡಿರುವ ಮೋದಿ, “ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ನಮಗೆ ನೀಡಿದ ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಉದಾತ್ತ ಮೌಲ್ಯಗಳನ್ನು ಎತ್ತಿಹಿಡಿಯಲು ನನ್ನ ಜೀವನದ ಪ್ರತಿ ಕ್ಷಣವೂ ಸಮರ್ಪಿತವಾಗಿದೆ. ಬಡತನದಲ್ಲಿ ಮತ್ತು ಹಿಂದುಳಿದ ಕುಟುಂಬದಲ್ಲಿ ಜನಿಸಿದ ನನ್ನಂತಹ ವ್ಯಕ್ತಿ ರಾಷ್ಟ್ರ ಸೇವೆ ಮಾಡಲು ಸಂವಿಧಾನದಿಂದ ಮಾತ್ರ ಸಾಧ್ಯ. ನಮ್ಮ ಸಂವಿಧಾನವು ಕೋಟ್ಯಂತರ ಜನರಿಗೆ ಭರವಸೆ, ಶಕ್ತಿ ಮತ್ತು ಘನತೆಯನ್ನು ನೀಡುತ್ತದೆ” ಎಂದು ಬರೆದುಕೊಂಡಿದ್ದಾರೆ.

ಅಡ್ವಾಣಿ ಭೇಟಿಯಾದ ಮೋದಿ:

ಸಂಸದೀಯ ನಾಯಕರಾಗಿ ನರೇಂದ್ರ ಮೋದಿ ಆಯ್ಕೆಯಾದ ಬಳಿಕ ಸತತ ಮೂರನೇ ಬಾರಿಗೆ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ರಾಷ್ಟ್ರಪತಿ ಭವನಕ್ಕೆ ತೆರಳುವ ಮುನ್ನಾ ತಮ್ಮ ರಾಜಕೀಯ ಗುರುಗಳಾದ ಎಲ್‌.ಕೆ ಅಡ್ವಾಣಿ ಅವರನ್ನು ಭೇಟಿಯಾಗಿದ್ದಾರೆ. ಇವರ ಭೇಟಿಯ ಬಳಿಕ ಮುರಳಿ ಮನೋಹರ ಜೋಷಿ ಹಾಗೂ ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಅವರನ್ನು ಸಹಾ ಮೋದಿ ಭೇಟಿಯಾದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

13 mins ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

3 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

6 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

9 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

9 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

9 hours ago