ದೇಶ- ವಿದೇಶ

ರಾಷ್ಟ್ರೀಯ ವಿಜ್ಞಾನ ದಿನ| ವಿಜ್ಞಾನವನ್ನು ವಿಕಸಿತ ಭಾರತ ನಿರ್ಮಾಣಕ್ಕೆ ಬಳಸಿ: ಪ್ರಧಾನಿ ಮೋದಿ

ನವದೆಹಲಿ: ರಾಷ್ಟ್ರೀಯ ವಿಜ್ಞಾನ ದಿನದ ಹಿನ್ನೆಲೆಯಲ್ಲಿ ದೇಶದ ಜನತೆಗೆ ಶುಭಾಶಯ ಕೋರಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತ ನಿರ್ಮಾಣಕ್ಕೆ ವಿಜ್ಞಾನವನ್ನು ಬಳಸಿಕೊಳ್ಳುವಂತೆ ಕರೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ವಿಜ್ಞಾನದ ಬಗ್ಗೆ ಆಸಕ್ತಿ ಹೊಂದಿರುವವರಿಗೆ, ವಿಶೇಷವಾಗಿ ನಮ್ಮ ಯುವ ಅವಿಷ್ಕಾರರಿಗೆ ರಾಷ್ಟ್ರೀಯ ವಿಜ್ಞಾನ ದಿನದ ಶುಭಾಶಯಗಳು. ವಿಜ್ಞಾನ ಹಾಗೂ ನಾವೀನ್ಯತೆಗಳನ್ನು ಜನಪ್ರಿಯಗೊಳಿಸೋಣ. ವಿಕಸಿತ ಭಾರತವನ್ನು ನಿರ್ಮಿಸಲು ವಿಜ್ಞಾನವನ್ನು ಬಳಸಕೊಳ್ಳೋಣ ಎಂದು ತಿಳಿಸಿದ್ದಾರೆ.

ನಮ್ಮ ವಿದ್ಯಾರ್ಥಿಗಳು ಹಾಗೂ ಯುವಕರು ವಿಜ್ಞಾನದಲ್ಲಿ ಆಸಕ್ತಿ ಮತ್ತು ಉತ್ಸಾಹ ಹೊಂದಿರುವುದು ಬಹಳ ಮುಖ್ಯವಾಗಿದೆ. ಮುಂದಿನ ದಿನಗಳಲ್ಲಿ ನಾವು ರಾಷ್ಟ್ರೀಯ ವಿಜ್ಞಾನ ದಿನವನ್ನು ಇದಕ್ಕೆ ನನ್ನ ಬಳಿ ಒಂದು ಯೋಜನೆ ಇದೆ. ಇದನ್ನು ನೀವು ವಿಜ್ಞಾನಿಯಾಗಿ ಒಂದು ದಿನ ಎಂದು ಕರೆಯಬಹುದು. ಅಂದರೆ ನೀವು ಒಂದು ದಿನವನ್ನು ವಿಜ್ಞಾನಿಯಾಗಿ ಕಳೆಯಲು ಪ್ರಯತ್ನಿಸಬೇಕು. ನೀವು ಯಾವುದೇ ದಿನವನ್ನು ನಿಮ್ಮ ಅನುಕೂಲ ಹಾಗೂ ಉಪಯೋಗಕ್ಕೆ ತಕ್ಕಂತೆ ಆಯ್ಕೆ ಮಾಡಿಕೊಳ್ಳಬಹುದು. ಹೀಗಾಗಿ ಮುಂದಿನ ದಿನಗಳಲ್ಲಿ ನಾವು ರಾಷ್ಟ್ರೀಯ ವಿಜ್ಞಾನ ದಿನವನ್ನು ಸಂಭ್ರಮಿಸುತ್ತೇವೆ ಎಂದು ಹೇಳಿದ್ದಾರೆ.

ಇನ್ನು ಫೆಬ್ರವರಿ.23 ರ ಮನ್‌ ಕಿ ಬಾತ್‌ನ 119ನೇ ಸಂಚಿಕೆಯಲ್ಲಿ, ವಿದ್ಯಾರ್ಥಿಗಳು ಹಾಗೂ ಯುವಕರಲ್ಲಿ ವಿಜ್ಞಾನದ ಬಗ್ಗೆ ಕುತೂಹಲವನ್ನು ಬೆಳೆಸುವುದಾಗಿ ಹೇಳಿದ್ದರು. ಅಂತೆಯೇ ಒಂದು ದಿನ ವಿಜ್ಞಾನಿಗಳಾಗಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸುವಂತೆ ಕರೆ ನೀಡಿದ್ದರು. ಅದನ್ನು ಇಂದು ಸ್ಮರಿಸಿಕೊಂಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ನಾನು ರಾಜೀನಾಮೆ ನೀಡಲು ಮುಂದಾಗಿಲ್ಲ: ಸಚಿವ ಕೆ.ಜೆ.ಜಾರ್ಜ್‌ ಸ್ಪಷ್ಟನೆ

ಬೆಂಗಳೂರು: ಇಂದಿನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬೇಸರಗೊಂಡು ಸಚಿವ ಕೆ.ಜೆ.ಜಾರ್ಜ್‌ ಸಿಎಂ ಸಿದ್ದರಾಮಯ್ಯ…

2 mins ago

ನಟ ಮಯೂರ್‌ ಪಟೇಲ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಕುಡಿದು ವಾಹನ ಚಾಲನೆ ಮಾಡಿ ಕಾರ್‌ಗಳಿಗೆ ಸರಣಿ ಅಪಘಾತ ಉಂಟು ಮಾಡಿದ ನಟ ಮಯೂರ್‌ ಪಟೇಲ್‌ ವಿರುದ್ಧ ಎಫ್‌ಐಆರ್‌…

25 mins ago

ಮೈಸೂರಿನಲ್ಲಿ ಮುಂದುವರೆದ ಕಾಡು ಪ್ರಾಣಿಗಳ ಹಾವಳಿ

ಮೈಸೂರು: ಜಿಲ್ಲೆಯಲ್ಲಿ ಕಾದು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಗ್ರಾಮದ ಕೃಷ್ಣ ಎಂಬುವವರ ಜಮೀನಿನಲ್ಲಿ ಚಿರತೆ…

38 mins ago

ನಂಜನಗೂಡು: ಗುಜರಿಗೆ ಆಕಸ್ಮಿಕ ಬೆಂಕಿ: ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಕರಕಲು

ನಂಜನಗೂಡು: ಗುಜರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಕರಕಲಾಗಿರುವ ಘಟನೆ ನಂಜನಗೂಡಿನ ಶಂಕರಪುರ ಬಡಾವಣೆಯಲ್ಲಿ…

51 mins ago

ಮೈಸೂರಿನಲ್ಲಿ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ: ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಸ್ಪಷ್ಟನೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎನ್‌ಸಿಬಿ ದಾಳಿ ವೇಳೆ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸ್‌ ಕಮಿಷನರ್‌ ಸೀಮಾ…

1 hour ago

ಮೈಸೂರು: ಕೆಮಿಕಲ್‌ ಘಟಕದ ಮೇಲೆ ದೆಹಲಿ ಪೊಲೀಸರ ದಾಳಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್‌ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್‌ಗಳನ್ನು…

2 hours ago