ದೇಶ- ವಿದೇಶ

ರಾಷ್ಟ್ರೀಯ ವಿಜ್ಞಾನ ದಿನ| ವಿಜ್ಞಾನವನ್ನು ವಿಕಸಿತ ಭಾರತ ನಿರ್ಮಾಣಕ್ಕೆ ಬಳಸಿ: ಪ್ರಧಾನಿ ಮೋದಿ

ನವದೆಹಲಿ: ರಾಷ್ಟ್ರೀಯ ವಿಜ್ಞಾನ ದಿನದ ಹಿನ್ನೆಲೆಯಲ್ಲಿ ದೇಶದ ಜನತೆಗೆ ಶುಭಾಶಯ ಕೋರಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತ ನಿರ್ಮಾಣಕ್ಕೆ ವಿಜ್ಞಾನವನ್ನು ಬಳಸಿಕೊಳ್ಳುವಂತೆ ಕರೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ವಿಜ್ಞಾನದ ಬಗ್ಗೆ ಆಸಕ್ತಿ ಹೊಂದಿರುವವರಿಗೆ, ವಿಶೇಷವಾಗಿ ನಮ್ಮ ಯುವ ಅವಿಷ್ಕಾರರಿಗೆ ರಾಷ್ಟ್ರೀಯ ವಿಜ್ಞಾನ ದಿನದ ಶುಭಾಶಯಗಳು. ವಿಜ್ಞಾನ ಹಾಗೂ ನಾವೀನ್ಯತೆಗಳನ್ನು ಜನಪ್ರಿಯಗೊಳಿಸೋಣ. ವಿಕಸಿತ ಭಾರತವನ್ನು ನಿರ್ಮಿಸಲು ವಿಜ್ಞಾನವನ್ನು ಬಳಸಕೊಳ್ಳೋಣ ಎಂದು ತಿಳಿಸಿದ್ದಾರೆ.

ನಮ್ಮ ವಿದ್ಯಾರ್ಥಿಗಳು ಹಾಗೂ ಯುವಕರು ವಿಜ್ಞಾನದಲ್ಲಿ ಆಸಕ್ತಿ ಮತ್ತು ಉತ್ಸಾಹ ಹೊಂದಿರುವುದು ಬಹಳ ಮುಖ್ಯವಾಗಿದೆ. ಮುಂದಿನ ದಿನಗಳಲ್ಲಿ ನಾವು ರಾಷ್ಟ್ರೀಯ ವಿಜ್ಞಾನ ದಿನವನ್ನು ಇದಕ್ಕೆ ನನ್ನ ಬಳಿ ಒಂದು ಯೋಜನೆ ಇದೆ. ಇದನ್ನು ನೀವು ವಿಜ್ಞಾನಿಯಾಗಿ ಒಂದು ದಿನ ಎಂದು ಕರೆಯಬಹುದು. ಅಂದರೆ ನೀವು ಒಂದು ದಿನವನ್ನು ವಿಜ್ಞಾನಿಯಾಗಿ ಕಳೆಯಲು ಪ್ರಯತ್ನಿಸಬೇಕು. ನೀವು ಯಾವುದೇ ದಿನವನ್ನು ನಿಮ್ಮ ಅನುಕೂಲ ಹಾಗೂ ಉಪಯೋಗಕ್ಕೆ ತಕ್ಕಂತೆ ಆಯ್ಕೆ ಮಾಡಿಕೊಳ್ಳಬಹುದು. ಹೀಗಾಗಿ ಮುಂದಿನ ದಿನಗಳಲ್ಲಿ ನಾವು ರಾಷ್ಟ್ರೀಯ ವಿಜ್ಞಾನ ದಿನವನ್ನು ಸಂಭ್ರಮಿಸುತ್ತೇವೆ ಎಂದು ಹೇಳಿದ್ದಾರೆ.

ಇನ್ನು ಫೆಬ್ರವರಿ.23 ರ ಮನ್‌ ಕಿ ಬಾತ್‌ನ 119ನೇ ಸಂಚಿಕೆಯಲ್ಲಿ, ವಿದ್ಯಾರ್ಥಿಗಳು ಹಾಗೂ ಯುವಕರಲ್ಲಿ ವಿಜ್ಞಾನದ ಬಗ್ಗೆ ಕುತೂಹಲವನ್ನು ಬೆಳೆಸುವುದಾಗಿ ಹೇಳಿದ್ದರು. ಅಂತೆಯೇ ಒಂದು ದಿನ ವಿಜ್ಞಾನಿಗಳಾಗಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸುವಂತೆ ಕರೆ ನೀಡಿದ್ದರು. ಅದನ್ನು ಇಂದು ಸ್ಮರಿಸಿಕೊಂಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

8 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

8 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

8 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

8 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

8 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

8 hours ago