ದೇಶ- ವಿದೇಶ

22 ನಿಮಿಷದಲ್ಲಿ ಪಾಕ್‌ ವಿರುದ್ಧ ಸೇಡು ತೀರಿಸಿಕೊಂಡಿದ್ದೇವೆ: ಪ್ರಧಾನಿ ನರೇಂದ್ರ ಮೋದಿ

ಬಿಕನೇರ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‍ನಲ್ಲಿ ನಡೆದ ನರಮೇಧಕ್ಕೆ ಪ್ರತೀಕಾರವಾಗಿ ಭಾರತೀಯ ಸೇನಾ ಪಡೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಕೇವಲ 22 ನಿಮಿಷದಲ್ಲಿ ಸೇಡು ತೀರಿಸಿಕೊಂಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಕೊಂಡಾಡಿದ್ದಾರೆ.

ಪಾಕಿಸ್ತಾನ ಹಾಗೂ ಪಿಒಕೆ ಮೇಲೆ ನಡೆದ ಆಪರೇಷನ್ ಸಿಂಧೂರ್ ನಂತರ ರಾಜಸ್ಥಾನದ ಬಿಕನೇರ್‌ನಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಏಪ್ರಿಲ್.22ರ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತವು 22 ನಿಮಿಷದಲ್ಲೇ ಸೇಡು ತೀರಿಸಿಕೊಂಡಿದೆ. ಇದು ನಮ್ಮ ಸೇನಾ ಪಡೆಯ ತಾಕತ್ತು ಎಂದು ಬಣ್ಣಿಸಿದ್ದಾರೆ.

ಏ.22ರ ದಾಳಿಗೆ ಪ್ರತಿಯಾಗಿ ನಾವು ಭಯೋತ್ಪಾದಕರ 9 ಅಡಗುತಾಣಗಳನ್ನು 22 ನಿಮಿಷದಲ್ಲಿ ನಾಶಪಡಿಸಿದೆವು. ಸಿಂಧೂರವು ಪುಡಿಯಾಗಿ ಬದಲಾದರೆ ಏನಾಗುತ್ತದೆ ಎಂಬುದಕ್ಕೆ ವಿಶ್ವಕ್ಕೆ ಮತ್ತು ನಮ್ಮ ಶತ್ರುಗಳಿಗೆ ತೋರಿಸಿದ್ದೇವೆ ಎಂದು ಸೇನಾಪಡೆಯ ಕಾರ್ಯಾಚರಣೆ ಬಗ್ಗೆ ಕೊಂಡಾಡಿದರು.

ನನ್ನ ರಕ್ತನಾಳಗಳಲ್ಲಿ ಕುದಿಯುತ್ತಿರುವುದು ರಕ್ತವಲ್ಲ. ಅದು ಸಿಂಧೂರ ಎಂದು ಮೋದಿ ಹೇಳುತ್ತಿದ್ದಂತೆ ಜನಸ್ತೋಮದಿಂದ ಮೋದಿ.. ಮೋದಿ.. ಎಂಬ ಜೈಕಾರದ ಘೋಷಣೆಗಳು ಮೊಳಗಿದವು.

ಭಾರತದ ತಂಟೆಗೆ ಬರುವ ಮುನ್ನ ನೂರು ಬಾರಿ ಯೋಚಿಸಿ ಎಂದು ಪಾಕ್‍ಗೆ ಎಚ್ಚರಿಕೆ ಕೊಟ್ಟರು. ವಾಯುಸೇನೆ, ನೌಕಾಸೇನೆ ಮತ್ತು ಭೂಸೇನೆಗಳಿಗೆ ನಾವು ಮುಕ್ತ ಸ್ವಾತಂತ್ರ್ಯ ನೀಡಿದ್ದೇವೆ. ಸಿಂಧೂರವನ್ನು ಅಳಿಸಿ ಹಾಕಿದ ಪಾತಕಿಗಳನ್ನು ನೆಲದಲ್ಲೇ ಹೂತು ಹಾಕಿ ಎಂದು ಹೇಳಿದ್ದೆವು. ಅದರಂತೆ ಸಶಸ್ತ್ರ ಪಡೆಗಳು ಅದೇ ಕೆಲಸವನ್ನು ಮಾಡಿವೆ ಎಂದು ಪ್ರಸಂಶಿಸಿದರು.

ನಾವು ಯಾವುದೇ ರಾಷ್ಟ್ರದ ಪರಮಾಣುಗಳಿಗೆ ಹೆದರುವುದಿಲ್ಲ. ಹಾಗಂತ ಪರಿಸ್ಥಿತಿ ಕೈ ಮೀರಿದರೆ ಸುಮ್ಮನೆ ಕೂರುವುದಿಲ್ಲ. ಕ್ರಿಯೆಗೆ ಪ್ರತಿಕ್ರಿಯೆ ಇರುತ್ತದೆ ಎಂದು ಪರೋಕ್ಷವಾಗಿ ಶತ್ರು ರಾಷ್ಟ್ರಕ್ಕೆ ಎಚ್ಚರಿಕೆ ಕೊಟ್ಟರು.

ಆಂದೋಲನ ಡೆಸ್ಕ್

Recent Posts

ಗ್ರಾಮ ಪಂಚಾಯ್ತಿ ಚುನಾವಣೆ : ಸಿದ್ಧತೆಗೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಸರ್ಕಾರ

ಬೆಂಗಳೂರು : 2026-31ನೇ ಸಾಲಿನ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ…

19 mins ago

ಗ್ರಾಮ ಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ್ದು ಗಾಂಧಿಜೀ : ಸಿಎಂ

ಬೆಂಗಳೂರು : ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕಲ್ಪನೆಗೆ…

29 mins ago

ಮದುವೆ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ಚಾಕು ಇರಿತ ; ವಧು ಮಾಜಿ ಲವರ್‌ನಿಂದ ಕೃತ್ಯ ಶಂಕೆ

ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ…

2 hours ago

ಚಿರತೆ ದಾಳಿ : ರೈತನಿಗೆ ಗಾಯ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…

3 hours ago

ಮಹಾತ್ಮ ಗಾಂಧಿ ಪುಣ್ಯತಿಥಿ | ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ನಮನ

ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…

3 hours ago

ಡ್ರಗ್ಸ್‌ ಗುಮಾನಿ | ಎನ್‌ಸಿಬಿ ಅಧಿಕಾರಿಗಳ ದಾಳಿ ಫಾಲೋಅಪ್‌ ಅಷ್ಟೇ : ಗೃಹ ಸಚಿವ

ಮೈಸೂರು : ಮೈಸೂರಿನಲ್ಲಿ ಡ್ರಗ್ಸ್‌ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್‌.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್‌…

4 hours ago