narrendra modi
ಬಿಕನೇರ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ನರಮೇಧಕ್ಕೆ ಪ್ರತೀಕಾರವಾಗಿ ಭಾರತೀಯ ಸೇನಾ ಪಡೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಕೇವಲ 22 ನಿಮಿಷದಲ್ಲಿ ಸೇಡು ತೀರಿಸಿಕೊಂಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಕೊಂಡಾಡಿದ್ದಾರೆ.
ಪಾಕಿಸ್ತಾನ ಹಾಗೂ ಪಿಒಕೆ ಮೇಲೆ ನಡೆದ ಆಪರೇಷನ್ ಸಿಂಧೂರ್ ನಂತರ ರಾಜಸ್ಥಾನದ ಬಿಕನೇರ್ನಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಏಪ್ರಿಲ್.22ರ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತವು 22 ನಿಮಿಷದಲ್ಲೇ ಸೇಡು ತೀರಿಸಿಕೊಂಡಿದೆ. ಇದು ನಮ್ಮ ಸೇನಾ ಪಡೆಯ ತಾಕತ್ತು ಎಂದು ಬಣ್ಣಿಸಿದ್ದಾರೆ.
ಏ.22ರ ದಾಳಿಗೆ ಪ್ರತಿಯಾಗಿ ನಾವು ಭಯೋತ್ಪಾದಕರ 9 ಅಡಗುತಾಣಗಳನ್ನು 22 ನಿಮಿಷದಲ್ಲಿ ನಾಶಪಡಿಸಿದೆವು. ಸಿಂಧೂರವು ಪುಡಿಯಾಗಿ ಬದಲಾದರೆ ಏನಾಗುತ್ತದೆ ಎಂಬುದಕ್ಕೆ ವಿಶ್ವಕ್ಕೆ ಮತ್ತು ನಮ್ಮ ಶತ್ರುಗಳಿಗೆ ತೋರಿಸಿದ್ದೇವೆ ಎಂದು ಸೇನಾಪಡೆಯ ಕಾರ್ಯಾಚರಣೆ ಬಗ್ಗೆ ಕೊಂಡಾಡಿದರು.
ನನ್ನ ರಕ್ತನಾಳಗಳಲ್ಲಿ ಕುದಿಯುತ್ತಿರುವುದು ರಕ್ತವಲ್ಲ. ಅದು ಸಿಂಧೂರ ಎಂದು ಮೋದಿ ಹೇಳುತ್ತಿದ್ದಂತೆ ಜನಸ್ತೋಮದಿಂದ ಮೋದಿ.. ಮೋದಿ.. ಎಂಬ ಜೈಕಾರದ ಘೋಷಣೆಗಳು ಮೊಳಗಿದವು.
ಭಾರತದ ತಂಟೆಗೆ ಬರುವ ಮುನ್ನ ನೂರು ಬಾರಿ ಯೋಚಿಸಿ ಎಂದು ಪಾಕ್ಗೆ ಎಚ್ಚರಿಕೆ ಕೊಟ್ಟರು. ವಾಯುಸೇನೆ, ನೌಕಾಸೇನೆ ಮತ್ತು ಭೂಸೇನೆಗಳಿಗೆ ನಾವು ಮುಕ್ತ ಸ್ವಾತಂತ್ರ್ಯ ನೀಡಿದ್ದೇವೆ. ಸಿಂಧೂರವನ್ನು ಅಳಿಸಿ ಹಾಕಿದ ಪಾತಕಿಗಳನ್ನು ನೆಲದಲ್ಲೇ ಹೂತು ಹಾಕಿ ಎಂದು ಹೇಳಿದ್ದೆವು. ಅದರಂತೆ ಸಶಸ್ತ್ರ ಪಡೆಗಳು ಅದೇ ಕೆಲಸವನ್ನು ಮಾಡಿವೆ ಎಂದು ಪ್ರಸಂಶಿಸಿದರು.
ನಾವು ಯಾವುದೇ ರಾಷ್ಟ್ರದ ಪರಮಾಣುಗಳಿಗೆ ಹೆದರುವುದಿಲ್ಲ. ಹಾಗಂತ ಪರಿಸ್ಥಿತಿ ಕೈ ಮೀರಿದರೆ ಸುಮ್ಮನೆ ಕೂರುವುದಿಲ್ಲ. ಕ್ರಿಯೆಗೆ ಪ್ರತಿಕ್ರಿಯೆ ಇರುತ್ತದೆ ಎಂದು ಪರೋಕ್ಷವಾಗಿ ಶತ್ರು ರಾಷ್ಟ್ರಕ್ಕೆ ಎಚ್ಚರಿಕೆ ಕೊಟ್ಟರು.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…