ದೇಶ- ವಿದೇಶ

22 ನಿಮಿಷದಲ್ಲಿ ಪಾಕ್‌ ವಿರುದ್ಧ ಸೇಡು ತೀರಿಸಿಕೊಂಡಿದ್ದೇವೆ: ಪ್ರಧಾನಿ ನರೇಂದ್ರ ಮೋದಿ

ಬಿಕನೇರ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‍ನಲ್ಲಿ ನಡೆದ ನರಮೇಧಕ್ಕೆ ಪ್ರತೀಕಾರವಾಗಿ ಭಾರತೀಯ ಸೇನಾ ಪಡೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಕೇವಲ 22 ನಿಮಿಷದಲ್ಲಿ ಸೇಡು ತೀರಿಸಿಕೊಂಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಕೊಂಡಾಡಿದ್ದಾರೆ.

ಪಾಕಿಸ್ತಾನ ಹಾಗೂ ಪಿಒಕೆ ಮೇಲೆ ನಡೆದ ಆಪರೇಷನ್ ಸಿಂಧೂರ್ ನಂತರ ರಾಜಸ್ಥಾನದ ಬಿಕನೇರ್‌ನಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಏಪ್ರಿಲ್.22ರ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತವು 22 ನಿಮಿಷದಲ್ಲೇ ಸೇಡು ತೀರಿಸಿಕೊಂಡಿದೆ. ಇದು ನಮ್ಮ ಸೇನಾ ಪಡೆಯ ತಾಕತ್ತು ಎಂದು ಬಣ್ಣಿಸಿದ್ದಾರೆ.

ಏ.22ರ ದಾಳಿಗೆ ಪ್ರತಿಯಾಗಿ ನಾವು ಭಯೋತ್ಪಾದಕರ 9 ಅಡಗುತಾಣಗಳನ್ನು 22 ನಿಮಿಷದಲ್ಲಿ ನಾಶಪಡಿಸಿದೆವು. ಸಿಂಧೂರವು ಪುಡಿಯಾಗಿ ಬದಲಾದರೆ ಏನಾಗುತ್ತದೆ ಎಂಬುದಕ್ಕೆ ವಿಶ್ವಕ್ಕೆ ಮತ್ತು ನಮ್ಮ ಶತ್ರುಗಳಿಗೆ ತೋರಿಸಿದ್ದೇವೆ ಎಂದು ಸೇನಾಪಡೆಯ ಕಾರ್ಯಾಚರಣೆ ಬಗ್ಗೆ ಕೊಂಡಾಡಿದರು.

ನನ್ನ ರಕ್ತನಾಳಗಳಲ್ಲಿ ಕುದಿಯುತ್ತಿರುವುದು ರಕ್ತವಲ್ಲ. ಅದು ಸಿಂಧೂರ ಎಂದು ಮೋದಿ ಹೇಳುತ್ತಿದ್ದಂತೆ ಜನಸ್ತೋಮದಿಂದ ಮೋದಿ.. ಮೋದಿ.. ಎಂಬ ಜೈಕಾರದ ಘೋಷಣೆಗಳು ಮೊಳಗಿದವು.

ಭಾರತದ ತಂಟೆಗೆ ಬರುವ ಮುನ್ನ ನೂರು ಬಾರಿ ಯೋಚಿಸಿ ಎಂದು ಪಾಕ್‍ಗೆ ಎಚ್ಚರಿಕೆ ಕೊಟ್ಟರು. ವಾಯುಸೇನೆ, ನೌಕಾಸೇನೆ ಮತ್ತು ಭೂಸೇನೆಗಳಿಗೆ ನಾವು ಮುಕ್ತ ಸ್ವಾತಂತ್ರ್ಯ ನೀಡಿದ್ದೇವೆ. ಸಿಂಧೂರವನ್ನು ಅಳಿಸಿ ಹಾಕಿದ ಪಾತಕಿಗಳನ್ನು ನೆಲದಲ್ಲೇ ಹೂತು ಹಾಕಿ ಎಂದು ಹೇಳಿದ್ದೆವು. ಅದರಂತೆ ಸಶಸ್ತ್ರ ಪಡೆಗಳು ಅದೇ ಕೆಲಸವನ್ನು ಮಾಡಿವೆ ಎಂದು ಪ್ರಸಂಶಿಸಿದರು.

ನಾವು ಯಾವುದೇ ರಾಷ್ಟ್ರದ ಪರಮಾಣುಗಳಿಗೆ ಹೆದರುವುದಿಲ್ಲ. ಹಾಗಂತ ಪರಿಸ್ಥಿತಿ ಕೈ ಮೀರಿದರೆ ಸುಮ್ಮನೆ ಕೂರುವುದಿಲ್ಲ. ಕ್ರಿಯೆಗೆ ಪ್ರತಿಕ್ರಿಯೆ ಇರುತ್ತದೆ ಎಂದು ಪರೋಕ್ಷವಾಗಿ ಶತ್ರು ರಾಷ್ಟ್ರಕ್ಕೆ ಎಚ್ಚರಿಕೆ ಕೊಟ್ಟರು.

ಆಂದೋಲನ ಡೆಸ್ಕ್

Recent Posts

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

37 mins ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

4 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

4 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌| ಮೇ 31 ಭಾನುವಾರ

4 hours ago

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

17 hours ago