ಉತ್ತರ ಪ್ರದೇಶ: ವಿದ್ಯಾರ್ಥಿಗಳ ಜೀವನದಲ್ಲಿ ಆಟವಾಡುವ ಕಳ್ಳರ ಮೇಲೆ ಉತ್ತರ ಪ್ರದೇಶ ರಾಜ್ಯದ ಸಿಎಂ ಯೋಗಿ ಆದಿತ್ಯನಾಥ್ ಕಠಿಣ ಕ್ರಮ ತೆಗೆದುಕೊಂಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಮತ್ತೆ ಬುಲ್ಡೋಜರ್ ಬಾಬಾ ಸದ್ದು ಮಾಡಲಿದ್ದಾರೆ. ಯೋಗಿ ಆದಿತ್ಯನಾಥ್ ಅವರ ಸರ್ಕಾರ ನೀಟ್ ಮತ್ತು ಯುಜಿಸಿ ನೆಟ್ನಲ್ಲಿ ನಡೆದ ಅಕ್ರಮದ ನಂತರ ಈ ಪರೀಕ್ಷಾ ಪ್ರಶ್ನೆ ಪತ್ರಿಕೆ ಬಗ್ಗೆ ಸೂಕ್ತ ಕ್ರಮ ತೆಗೆದುಕೊಂಡಿದೆ.
ಈ ಹೊಸ ಕಾನೂನಿನ ಪ್ರಕಾರ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಪತ್ರಿಕೆಗಳನ್ನು ಹಂಚುವ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇಂತಹ ಕೃತ್ಯದಲ್ಲಿ ಭಾಗಿಯಾದವರ ಮೇಲೆ ಭಾರೀ ದಂಡ, ಬುಲ್ಡೋಜರ್ ಕ್ರಮ ಹಾಗೂ ಕಠಿಣ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಖಡಕ್ ಸೂಚನೆ ನೀಡಿದೆ.
ಈ ಎಲ್ಲಾ ಖಡಕ್ ಸೂಚನೆಗಳ ಜೊತೆಗೆ ಪ್ರಶ್ನೆ ಪತ್ರಿಕೆ ಎಣಿಕೆಯನ್ನು ನಿಲ್ಲಿಸಲು ಸರ್ಕಾರ ಹೊಸ ನೀತಿಯನ್ನು ಜಾರಿಗೆ ತಂದಿದೆ. ಪ್ರತಿ ಪರೀಕ್ಷೆಯ ಶಿಫ್ಟ್ ಕನಿಷ್ಠ ಎರಡು ಸೆಟ್ ಪೇಪರ್ಗಳನ್ನು ಹೊಂದಿರುತ್ತದೆ. ಪ್ರತ್ಯೇಕ ಏಜೆನ್ಸಿಗಳಿಂದ ಇವುಗಳನ್ನು ಮುದ್ರಿಸಲು ಕ್ರಮ ಕೈಗೊಳ್ಳಲಾಗಿದೆ.
ಇನ್ನೂ ಪರೀಕ್ಷೆ ಬರೆಯಲು 4 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳಿದ್ದರೆ ಎರಡು ಹಂತಗಳಲ್ಲಿ ಪರೀಕ್ಷೆ ನಡೆಯಲಿದೆ. ಮುದ್ರಣಾಲಯಗಳ ಆಯ್ಕೆಯನ್ನು ಕೂಡ ಅತ್ಯಂತ ಗೌಪ್ಯವಾಗಿ ನಡೆಸಲಾಗುವುದು. ಮುದ್ರಣಾಲಯಕ್ಕೆ ಭೇಟಿ ನೀಡುವವರನ್ನು ಕೂಡ ಪರೀಕ್ಷಿಸಲಾಗುವುದು. ಜೊತೆಗೆ ಅಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಗುರುತಿನ ಚೀಟಿ ಕಡ್ಡಾಯವಾಗಿರುತ್ತದೆ ಎಂದು ಮಾಹಿತಿ ನೀಡಿದೆ.
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…