ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗದಿಂದ ನೋಟಿಸ್ ನೀಡಲಾಗಿದೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣದಲ್ಲಿ ಇ.ಡಿ ನೀಡಿರುವ ದೂರಿನ ಮೇರೆಗೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ ಎಫ್ಐಆರ್ ದಾಖಲಿಸಿತ್ತು. ಅ.3ರಂದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಮೇಲೆ ಪ್ರಕರಣ ದಾಖಲಿಸಿಕೊಂಡಿತ್ತು. ಅದೇ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ಗೂ ನೋಟಿಸ್ ಜಾರಿಯಾಗಿತ್ತು. ಸದ್ಯ ಡಿಕೆಶಿ ಆಪ್ತ ಇನಾಯತ್ ಅಲಿಗೂ ದೆಹಲಿ ಪೊಲೀಸರು ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಇದನ್ನು ಓದಿ: ಇಂಡಿಗೋ ಬಿಕ್ಕಟ್ಟು : ತುರ್ತು ವಿಚಾರಣೆಗೆ ಸುಪ್ರೀಂ ನಕಾರ
ಒಂದು ವಾರದಲ್ಲಿ ಹಾಜರಾಗುವಂತೆ ಮಂಗಳೂರಿನ ಮನೆಗೆ ಬಂದು ದೆಹಲಿ ಪೊಲೀಸರು ನೊಟೀಸ್ ನೀಡಿ ತೆರಳಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇ.ಡಿ ಸಂಸ್ಥೆಯಿಂದ ಕಳೆದ ಹಲವು ವರ್ಷಗಳಿಂದ ಇನಾಯತ್ ಅಲಿಯ ತನಿಖೆಯಾಗಿತ್ತು. ಅದರ ಮುಂದುವರಿದ ಭಾಗವಾಗಿ ಇದೀಗ ದೆಹಲಿ ಪೊಲೀಸರಿಂದ ನೋಟಿಸ್ ಜಾರಿಯಾಗಿದೆ. ನ್ಯಾಷನಲ್ ಹೆರಾಲ್ಡ್ ಸಂಸ್ಥೆಗೆ ಇನಾಯತ್ ಅಲಿ ಕೂಡಾ ಆರ್ಥಿಕ ಸಹಾಯ ಒದಗಿಸಿದ್ದರು ಎಂಬ ಮಾಹಿತಿ ಇದೆ. ವೈಯಕ್ತಿಕ ಹಿನ್ನೆಲೆ, ಕಾಂಗ್ರೆಸ್ ಪಕ್ಷದೊಂದಿಗಿನ ಸಂಬಂಧ, ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ನೀಡಿದ ದೇಣಿಗೆ ಪ್ರಮಾಣ, ಯಾವ ರೀತಿಯಲ್ಲಿ ದೇಣಿಗೆ ಕೊಡಲಾಗಿದೆ ಎಂಬುದರ ಮಾಹಿತಿ, ಈ ಹಣ ಯಾವುದಕ್ಕೆ ಬಳಕೆಯಾಗಿದೆ ಎಂಬುದು ಗೊತ್ತಿದೆಯೇ ಎಂಬ ವಿವರಗಳನ್ನು ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. ಸದ್ಯ ಈ ಪ್ರಕರಣ ಸಂಬಂಧ ಡಿ.ಕೆ.ಶಿವಕುಮಾರ್ ಹಾಗೂ ಸಹೋದರ ಡಿ.ಕೆ.ಸುರೇಶ್ಗೂ ದೆಹಲಿ ಪೊಲೀಸರು ನೋಟಿಸ್ ನೀಡಿದ್ದಾರೆ.
ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…
ಎಸ್ಸಿಪಿ-ಟಿಎಸ್ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…
ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…
ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…
ಎಂಎಲ್ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…
ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…