ದೇಶ- ವಿದೇಶ

ನ್ಯಾಷನಲ್ ಹೆರಾಲ್ಡ್‌ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌ ದಾಖಲು

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ, ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಪಿತೂರಿ ಆರೋಪ ಹೊರಿಸಲಾಗಿದೆ.

ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು ಗಾಂಧಿ ಕುಟುಂಬ ಸೇರಿದಂತೆ ಆರು ಜನರ ವಿರುದ್ಧ ದಾಖಲಿಸಿದ ಹೊಸ ಪ್ರಥಮ ಮಾಹಿತಿ ವರದಿಯ (ಎಫ್‍ಐಆರ್) ಭಾಗವಾಗಿ ಈ ಆರೋಪಗಳು ದಾಖಲಾಗಿವೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ತನ್ನ ತೀರ್ಪಿನ ಘೋಷಣೆಯನ್ನು ಡಿಸೆಂಬರ್.16ಕ್ಕೆ ಮುಂದೂಡಿದ ಒಂದು ದಿನದ ನಂತರ ಎಫ್‍ಐಆರ್ ದಾಖಲು ಮಾಡಲಾಗಿದೆ.

ಹೊಸ ಎಫ್‍ಐಆರ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಇಂಡಿಯನ್ ಓವರ್‍ಸೀಸ್ ಕಾಂಗ್ರೆಸ್ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಮತ್ತು ಇತರ ಮೂವರ ಹೆಸರಿದೆ. ಮೂರು ಕಂಪನಿಗಳ ಮೇಲೆ ಕೂಡ ಆರೋಪಗಳು ದಾಖಲಾಗಿವೆ.

ಜಾರಿ ನಿರ್ದೇಶನಾಲಯ (ಇಡಿ) ತನ್ನ ತನಿಖಾ ವರದಿಯನ್ನು ದೆಹಲಿ ಪೊಲೀಸರಿಗೆ ಸಲ್ಲಿಸಿದ ನಂತರ, ಅಕ್ಟೋಬರ್.3ರಂದು ಇಬ್ಬರ ವಿರುದ್ಧ ಸೇರಿದಂತೆ ಒಟ್ಟು ಎಂಟು ಮಂದಿಯ ಮೇಲೂ ಹೊಸ ಎಫ್‍ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಮೂರು ಕಂಪನಿಗಳ ಆರೋಪಗಳು ಹೊರಬಿದ್ದಿವೆ.

ಎಫ್‍ಐಆರ್ ಪ್ರಕಾರ, 2,000 ಕೋಟಿಯ ಆಸ್ತಿಯನ್ನು ಹೊಂದಿರುವ ಕಾಂಗ್ರೆಸ್ ಒಡೆತನದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಅನ್ನು ವಂಚನೆಯ ಮೂಲಕ ಗಾಂಧಿ ಕುಟುಂಬವು ತಮ್ಮ ಪಾಲಾಗಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಯಂಗ್ ಇಂಡಿಯನ್ ಎಂಬ ಕಂಪನಿಯ ಮೂಲಕ ಈ ಸ್ವಾಧೀನ ನಡೆದಿದೆ ಎಂದು ಎಫ್‍ಐಆರ್ ಹೇಳಿದೆ. ಗಾಂಧಿ ಕುಟುಂಬದವರು ಯಂಗ್ ಇಂಡಿಯನ್‍ನಲ್ಲಿ ಶೇ.76 ರಷ್ಟು ಪಾಲನ್ನು ಹೊಂದಿರುವುದರಿಂದ, ಏಕಪಕ್ಷೀಯ ಸ್ವಾಧೀನದ ಆರೋಪಗಳು ಗಂಭೀರವಾಗಿವೆ.

ಆಂದೋಲನ ಡೆಸ್ಕ್

Recent Posts

ಖಾದಿ ಕೇಂದ್ರಗಳಿಗೆ ಚೈತನ್ಯ ನೀಡುವ ನಿಟ್ಟಿನಲ್ಲಿ ಸರ್ಕಾರದ ಹೆಜ್ಜೆ

ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…

3 hours ago

ಮೌನ ಸಾಧಕ ಎಂ.ಶ್ರೀನಿವಾಸ್ @ 75

ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…

4 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಜುಂಜುಂ ಫ್ಯಾಕ್ಟರಿ ಮಾಲೀಕನ ಸಾವಿನ ವೃತ್ತಾಂತ

ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…

4 hours ago

ಉದ್ಯಮಿಯ ಪರಿಶ್ರಮದಿಂದ ಕಾಯಕಲ್ಪ ಪಡೆದ ಉದ್ಯಾನ

ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…

4 hours ago

ಶತಮಾನದ ದೇವರಾಜ ಶಾಲೆಯ ಶೋಕಗೀತೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…

4 hours ago

ಅಭದ್ರತೆ ಹಾದಿಯಲಿ ವಿಕಸಿತ ಭಾರತದತ್ತ ‘ಆನಿ (ಆಮೆ) ನಡಿಗೆ’

ರಾಜಾರಾಂ ತಲ್ಲೂರು ಆರ್ಥಿಕ ಶಿಸ್ತಿನ ಚೌಕಟ್ಟಿನ ಒಂದೊಂದೇ ಅಂಶಗಳನ್ನು ಮುಂದಿಟ್ಟುಕೊಂಡು - ‘ನೋಡಿ, ನಾವು ಆರ್ಥಿಕವಾಗಿ ಸ್ಥಿರವಾಗಿದ್ದು, ವಿಕಸಿತ ಭಾರತದತ್ತ…

4 hours ago