ದೇಶ- ವಿದೇಶ

ನೈಸರ್ಗಿಕ ವಿಕೋಪಗಳು ದೇಶವನ್ನೇ ಪರೀಕ್ಷೆ ಮಾಡುತ್ತಿವೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ನೈಸರ್ಗಿಕ ವಿಕೋಪಗಳು ದೇಶವನ್ನೇ ಪರೀಕ್ಷೆ ಮಾಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮನ್‌ ಕಿ ಬಾತ್‌ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕಳೆದ ಕೆಲವು ವಾರಗಳಲ್ಲಿ ನಾವು ಪ್ರವಾಹ ಮತ್ತು ಭೂಕುಸಿತಗಳಿಂದ ಭಾರೀ ವಿನಾಶವನ್ನು ಕಂಡಿದ್ದೇವೆ. ಮನೆಗಳು ನಾಶವಾದವು, ಜಮೀನುಗಳು ಜಲಾವೃತವಾಗಿದ್ದವು. ಇಡೀ ಕುಟುಂಬಗಳು ನಾಶವಾದವು. ನಿರಂತರ ನೀರಿನ ಹರಿವು ಸೇತುವೆಗಳು ಮತ್ತು ರಸ್ತೆಗಳನ್ನು ಕೊಚ್ಚಿಹಾಕಿತು. ಜನರ ಜೀವಗಳನ್ನು ಅಪಾಯಕ್ಕೆ ಸಿಲುಕಿಸಿತು. ಈ ಘಟನೆಗಳು ಪ್ರತಿಯೊಬ್ಬ ಭಾರತೀಯನನ್ನು ದುಃಖಿರನ್ನಾಗಿಸಿದೆ ಎಂದು ಹೇಳಿದರು.

ಪರಿಹಾರ ಸಾಮಗ್ರಿಗಳನ್ನು ಹೆಲಿಕಾಪ್ಟರ್‌ ಮೂಲಕ ತಲುಪಿಸಲಾಯಿತು. ಗಾಯಾಳುಗಳನ್ನು ವಿಮಾನದ ಮೂಲಕ ಸಾಗಿಸಲಾಯಿತು. ವಿಪತ್ತಿನ ಸಮಯದಲ್ಲಿ ಸಹಾಯ ಮಾಡಲು ಸೈನ್ಯ ಮುಂದೆ ಬಂದಿತು. ಸ್ಥಳೀಯ ಜನರು, ಸಾಮಾಜಿಕ ಕಾರ್ಯಕರ್ತರು, ವೈದ್ಯರು, ಆಡಳಿತ ಪ್ರತಿಯೊಬ್ಬರೂ ಈ ಬಿಕ್ಕಟ್ಟಿನ ಸಮಯದಲ್ಲಿ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡಿದರು.

ಪ್ರವಾಹ ಹಾಗೂ ಮಳೆಯಿಂದ ಉಂಟಾದ ಈ ವಿನಾಶದ ನಡುವೆಯೂ, ಜಮ್ಮು ಮತ್ತು ಕಾಶ್ಮೀರದ ಎರಡು ಸಾಧನೆಗಳನ್ನು ಸಾಧಿಸಿದೆ. ಅನೇಕ ಜನರು ಇವುಗಳನ್ನು ಗಮನಿಸಿರಲಿಲ್ಲ. ಆದರೆ ಆ ಸಾಧನೆಗಳ ಬಗ್ಗೆ ತಿಳಿದರೆ ನೀವು ಸಂತೋಷಪಡುತ್ತೀರಿ. ಪುಲ್ವಾಮಾದ ಕ್ರೀಡಾಂಗಣದಲ್ಲಿ ದಾಖಲೆಯ ಸಂಖ್ಯೆಯ ಜನರು ಜಮಾಯಿಸಿದ್ದರು.

ಪುಲ್ವಾಮಾದ ಮೊದಲ ಹಗಲು-ರಾತ್ರಿ ಕ್ರಿಕೆಟ್‌ ಪಂದ್ಯವನ್ನು ಇಲ್ಲಿ ಆಡಲಾಯಿತು. ಮೊದಲು ಅದು ಅಸಾಧ್ಯವಾಗಿತ್ತು. ಆದರೆ ಈಗ ನನ್ನ ದೇಶ ಬದಲಾಗುತ್ತಿದೆ. ಈ ಪಂದ್ಯವು ರಾಯಲ್‌ ಪ್ರೀಮಿಯರ್‌ ಲೀಗ್‌ನ ಒಂದು ಭಾಗವಾಗಿದ್ದು, ಇದರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿವಿಧ ತಂಡಗಳು ಭಾಗವಹಿಸುತ್ತಿವೆ ಎಂದು ಹೇಳಿದರು. ದೇಶದ ಮೊದಲ ಖೇಲೋ ಇಂಡಿಯಾ ಜಲಕ್ರೀಡಾ ಉತ್ಸವವಾಗಿದ್ದು, ಅದು ಕೂಡ ಶ್ರೀನಗರ ದಾಲ್‌ ಸರೋವರದಲ್ಲಿ ನಡೆಯಿತು.

ನಿಜಕ್ಕೂ ಇಂತಹ ಉತ್ಸವವನ್ನು ಆಯೋಜಿಸಲು ಇದು ವಿಶೇಷ ಸ್ಥಳವಾಗಿದೆ. ಜಮ್ಮು-ಕಾಶ್ಮೀರದಲ್ಲಿ ಜಲಕ್ರೀಡೆಗಳನ್ನು ಹೆಚ್ಚು ಜನಪ್ರಿಯಗೊಳಿಸುವುದು ಇದರ ಉದ್ದೇಶವಾಗಿದೆ. ಭಾರತದಾದ್ಯಂತ 800ಕ್ಕೂ ಹೆಚ್ಚು ಕ್ರೀಡಾಪಟುಗಳು ಇದರಲ್ಲಿ ಭಾಗವಹಿಸಿದ್ದರು. ಮಹಿಳಾ ಕ್ರೀಡಾಪಟುಗಳು ಸಹ ಹಿಂದೆ ಬಿದ್ದಿಲ್ಲ. ಅವರ ಭಾಗವಹಿಸುವಿಕೆಯು ಪುರುಷರಿಗೆ ಸಮಾನವಾಗಿತ್ತು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

24 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

24 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

24 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

24 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

24 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

24 hours ago