ದೇಶ- ವಿದೇಶ

ಪ್ರೇಯಸಿಯ ಕೊಂದು, ಶವವನ್ನು ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟ ನೌಕಾಪಡೆ ಅಧಿಕಾರಿ!

ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಾನೆ. ಅಲ್ಲದೇ, ಕೆಲವು ಭಾಗಗಳನ್ನು ಚೀಲದಲ್ಲಿ ತುಂಬಿ ನಿರ್ಜನ ಪ್ರದೇಶದಲ್ಲಿ ಎಸೆದಿರುವ ಆಘಾತಕಾರಿ ಘಟನೆಯೊಂದು ಆಂಧ್ರಪ್ರದೇಶದ ವಿಶಾಖಪಟ್ಟಣದ ಗಜುವಾಕ ಪ್ರದೇಶದಲ್ಲಿ ನಡೆದಿದೆ.

ಈ ಕುರಿತು ಮಾಹಿತಿ ನೀಡಿರುವ ಪೊಲೀಸರು, ಆರೋಪಿಯು ಕೃತ್ಯದ ಬಳಿಕ ಠಾಣೆಗೆ ಬಂದು ತಪ್ಪೊಪ್ಪಿಕೊಂಡಿದ್ದಾನೆ ಎಂದಿದ್ದಾರೆ. ಆರೋಪಿಯನ್ನು ಭಾರತೀಯ ಐಎನ್‌ಎಸ್‌ ದೇಗಾದಲ್ಲಿ ನಿಯೋಜಿತನಾಗಿದ್ದ ರವೀಂದ್ರ(35) ಎಂದು ಗುರುತಿಸಲಾಗಿದೆ. ಮೌನಿಕಾ ಹತ್ಯೆಗೀಡಾದ ಮಹಿಳೆಯಾಗಿದ್ದಾಳೆ.

ಆರೋಪಿ 2021ರಲ್ಲಿ ಡೇಟಿಂಗ್ ಅಪ್‌ ಮೂಲಕ ಪರಿಚಯವಾದ ಮೌನಿಕಾ ಜೊತೆ ಸಂಬಂಧ ಬೆಳೆಸಿದ್ದನು. ಆರೋಪಿಯ ಪತ್ನಿ ಕೆಲವು ವಾರಗಳ ಹಿಂದೆ ತನ್ನ ಸ್ವಗ್ರಾಮಕ್ಕೆ ಹೋಗಿದ್ದ ಕಾರಣ ರವೀಂದ್ರ ಒಬ್ಬನೇ ಮನೆಯಲ್ಲಿದ್ದನು. ಈ ವೇಳೆ ಆತ ಮೌನಿಕಾಳನ್ನು ತನ್ನ ಮನೆಗೆ ಕರೆಸಿಕೊಂಡಿದ್ದನು. ಇಬ್ಬರ ನಡುವೆ ಹಣ ಮತ್ತು ಸಂಬಂಧದ ವಿಚಾರದಲ್ಲಿ ಜಗಳವಾದ ನಂತರ ರವೀಂದ್ರ ಆಕೆಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ನಂತರ ಶವವನ್ನು ಹಲವು ತುಂಡುಗಳಾಗಿ ಕತ್ತರಿಸಿ, ಕೆಲವು ಭಾಗಗಳನ್ನು ಚೀಲದಲ್ಲಿ ತುಂಬಿ ನಿರ್ಜನ ಪ್ರದೇಶದಲ್ಲಿ ಎಸೆದಿದ್ದಾನೆ. ಉಳಿದ ಭಾಗಗಳನ್ನು ತನ್ನ ಮನೆಯ ಫ್ರಿಡ್ಜ್‌ನಲ್ಲಿಟ್ಟಿದ್ದ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ. ಹೆಚ್ಚಿನ ತನಿಖೆ ಮುಂದುವರೆಯುತ್ತಿದೆ.

ಈ ಘಟನೆಯು 2022ರಲ್ಲಿ ದೆಹಲಿಯಲ್ಲಿ ನಡೆದ ಶ್ರದ್ಧಾ ವಾಲ್ಕರ್ ಕೊಲೆ ಪ್ರಕರಣವನ್ನು ನೆನಪಿಸುತ್ತಿದೆ.

ಆಂದೋಲನ ಡೆಸ್ಕ್

Recent Posts

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

7 mins ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

1 hour ago

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

4 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

4 hours ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

4 hours ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

7 hours ago