ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿಟ್ಟಿದ್ದಾನೆ. ಅಲ್ಲದೇ, ಕೆಲವು ಭಾಗಗಳನ್ನು ಚೀಲದಲ್ಲಿ ತುಂಬಿ ನಿರ್ಜನ ಪ್ರದೇಶದಲ್ಲಿ ಎಸೆದಿರುವ ಆಘಾತಕಾರಿ ಘಟನೆಯೊಂದು ಆಂಧ್ರಪ್ರದೇಶದ ವಿಶಾಖಪಟ್ಟಣದ ಗಜುವಾಕ ಪ್ರದೇಶದಲ್ಲಿ ನಡೆದಿದೆ.
ಈ ಕುರಿತು ಮಾಹಿತಿ ನೀಡಿರುವ ಪೊಲೀಸರು, ಆರೋಪಿಯು ಕೃತ್ಯದ ಬಳಿಕ ಠಾಣೆಗೆ ಬಂದು ತಪ್ಪೊಪ್ಪಿಕೊಂಡಿದ್ದಾನೆ ಎಂದಿದ್ದಾರೆ. ಆರೋಪಿಯನ್ನು ಭಾರತೀಯ ಐಎನ್ಎಸ್ ದೇಗಾದಲ್ಲಿ ನಿಯೋಜಿತನಾಗಿದ್ದ ರವೀಂದ್ರ(35) ಎಂದು ಗುರುತಿಸಲಾಗಿದೆ. ಮೌನಿಕಾ ಹತ್ಯೆಗೀಡಾದ ಮಹಿಳೆಯಾಗಿದ್ದಾಳೆ.
ಆರೋಪಿ 2021ರಲ್ಲಿ ಡೇಟಿಂಗ್ ಅಪ್ ಮೂಲಕ ಪರಿಚಯವಾದ ಮೌನಿಕಾ ಜೊತೆ ಸಂಬಂಧ ಬೆಳೆಸಿದ್ದನು. ಆರೋಪಿಯ ಪತ್ನಿ ಕೆಲವು ವಾರಗಳ ಹಿಂದೆ ತನ್ನ ಸ್ವಗ್ರಾಮಕ್ಕೆ ಹೋಗಿದ್ದ ಕಾರಣ ರವೀಂದ್ರ ಒಬ್ಬನೇ ಮನೆಯಲ್ಲಿದ್ದನು. ಈ ವೇಳೆ ಆತ ಮೌನಿಕಾಳನ್ನು ತನ್ನ ಮನೆಗೆ ಕರೆಸಿಕೊಂಡಿದ್ದನು. ಇಬ್ಬರ ನಡುವೆ ಹಣ ಮತ್ತು ಸಂಬಂಧದ ವಿಚಾರದಲ್ಲಿ ಜಗಳವಾದ ನಂತರ ರವೀಂದ್ರ ಆಕೆಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ನಂತರ ಶವವನ್ನು ಹಲವು ತುಂಡುಗಳಾಗಿ ಕತ್ತರಿಸಿ, ಕೆಲವು ಭಾಗಗಳನ್ನು ಚೀಲದಲ್ಲಿ ತುಂಬಿ ನಿರ್ಜನ ಪ್ರದೇಶದಲ್ಲಿ ಎಸೆದಿದ್ದಾನೆ. ಉಳಿದ ಭಾಗಗಳನ್ನು ತನ್ನ ಮನೆಯ ಫ್ರಿಡ್ಜ್ನಲ್ಲಿಟ್ಟಿದ್ದ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ. ಹೆಚ್ಚಿನ ತನಿಖೆ ಮುಂದುವರೆಯುತ್ತಿದೆ.
ಈ ಘಟನೆಯು 2022ರಲ್ಲಿ ದೆಹಲಿಯಲ್ಲಿ ನಡೆದ ಶ್ರದ್ಧಾ ವಾಲ್ಕರ್ ಕೊಲೆ ಪ್ರಕರಣವನ್ನು ನೆನಪಿಸುತ್ತಿದೆ.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…