ದೇಶ- ವಿದೇಶ

ನಕ್ಸಲರ ಕಾರ್ಯಾಚರಣೆ: ಸಾವಿನ ಸಂಖ್ಯೆ 31ಕ್ಕೆ ಏರಿಕೆ

ಛತ್ತಿಸ್‌ಗಢ: ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲರ ಸಾವಿನ ಸಂಖ್ಯೆ ಸುಮಾರು 31ಕ್ಕೆ ಏರಿಕೆ ಆಗಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿರುವ ಘಟನೆ ಛತ್ತಿಸ್‌ಗಡದ ಬಿಜಾಪುರ ಜಿಲ್ಲೆಯಲ್ಲಿ ನಡೆದಿದೆ.

ಇಂದಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯ ಸಮೀಪ ನಕ್ಸಲರ ಕಾರ್ಯಾಚರಣೆ ವೇಳೆ ಗುಂಡಿನ ಚಕಮಕಿ ನಡೆದಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುಂಡಿನ ಚಕಮಕಿಯಲ್ಲಿ 31 ನಕ್ಸಲರು ಸಾವನ್ನಪ್ಪಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪ್ರಾಥಾಮಿಕ ವರದಿಯಿಂದ ತಿಳಿದುಬಂದಿದೆ.

ಘಟನಾ ಸ್ಥಳದಿಂದ ಶಸ್ತ್ರಾಸ್ತ್ರ ಮತ್ತು ಸ್ಪೋಟಕಗಳನ್ನು ವಶಪಡಿಸಿಕೊಂಡಿದ್ದು, ಕಾರ್ಯಾಚರಣೆಗಾಗಿ ಸ್ಥಳಕ್ಕೆ ಹೆಚ್ಚಿನ ಪಡೆಗಳನ್ನು ರವಾನಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

 

ಆಂದೋಲನ ಡೆಸ್ಕ್

Recent Posts

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

42 mins ago

ಗಣರಾಜ್ಯೋತ್ಸವ : ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ

ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…

52 mins ago

ಮೈಷುಗರ್ ಕಾರ್ಖಾನೆ ಖಾಸಗಿಯವರಿಗೆ ವಹಿಸಲ್ಲ : ಸಿ.ಡಿ.ಗಂಗಾಧರ ಸ್ಪಷ್ಟನೆ

ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…

59 mins ago

ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತ : ಕಾರಣ ಬಿಚ್ಚಿಟ್ಟ ಸಂಸದ ಯದುವೀರ್‌

ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…

1 hour ago

ಶಾರ್ಟ್‌ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಟಿವಿ ; ದಾಖಲಾತಿಗಳು ಭಸ್ಮ

ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…

2 hours ago

ಹನೂರು| ರಾಜ್ಯ ಸರ್ಕಾರದ ವಿರುದ್ಧ ಅಂಡೆ ಕುರುಬನದೊಡ್ಡಿ ಗ್ರಾಮಸ್ಥರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ  ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…

3 hours ago