ದೇಶ- ವಿದೇಶ

ಕೇರಳ ಪೊಲೀಸರಿಗೆ ಶರಣಾದ ಕರ್ನಾಟಕದ ನಕ್ಸಲ್‌ ಸುರೇಶ್‌

ಕೇರಳ: ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ಕರ್ನಾಟಕದ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ನಕ್ಸಲ್‌ ಸುರೇಶ್‌ ಅಲಿಯಾಸ್‌ ಪ್ರದೀಪ್‌ ಭಾನುವಾರ ಕೇರಳದ ಕಣ್ಣೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದಾನೆ.

ಇತ್ತೀಚೆಗೆ ಕೇರಳ-ಕರ್ನಾಟಕ ಗಡಿಯ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರ ತಂಡದೊಂದಿಗೆ ಸಂಚರಿಸುತ್ತಿದ್ದಾಗ ಸುರೇಶ್ ಕಾಡಾನೆ ದಾಳಿಗೆ ತುತ್ತಾಗಿದ್ದರು. ಗಂಭೀರ ಗಾಯಗೊಂಡಿದ್ದ ಅವರನ್ನು ಆರು ಜನರಿದ್ದ ನಕ್ಸಲೀಯರ ತಂಡ ಗಡಿಭಾಗದ ಕಂಜಿರಕೊಲ್ಲಿ ಚಿತ್ತಾರಿ ಕಾಲನಿಯಲ್ಲಿ ಬಿಟ್ಟು ಹೋಗಿತ್ತು. ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಸುರೇಶ್ನನ್ನು ಕಣ್ಣೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಿದ್ದರು.

ಸುರೇಶ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡ ಬಳಿಕ ಪೊಲೀಸರಿಗೆ ಶರಣಾಗುವ ಸಂದರ್ಭ ಗಾಲಿ ಖುರ್ಚಿಯಲ್ಲಿ ಕುಳಿತು ಮಾಧ್ಯಮದವರೊಂದಿಗೆ ಮಾತನಾಡಿ, ತಾನು ಬಹು ಕಾಲದ ಹಿಂದೆಯೇ ಶರಣಾಗಲು ಬಯಸಿದ್ದೆ. ನಾನು ಕಳೆದ 23 ವರ್ಷಗಳಿಂದ ಮಾವೋವಾದಿಯಾಗಿದ್ದೆ, ಈಗ ಶರಣಾಗುತ್ತಿದ್ದೇನೆ. ಮಾವೋವಾದಿಯಾದ ಬಳಿಕವೂ ನನಗೆ ಏನೂ ಮಾಡಲು ಸಾಧ್ಯವಾಗಲಿಲ್ಲ. ಹಲವು ವರ್ಷಗಳ ಬಳಿಕವೂ ನಮಗೆ ಕೇರಳ, ತಮಿಳುನಾಡು ಅಥವಾ ಕರ್ನಾಟಕದಲ್ಲಿ ಯಾವುದೇ ಬದಲಾವಣೆ ತರಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ

ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…

35 mins ago

ಓದುಗರ ಪತ್ರ: ನ್ಯಾಯಾಂಗ ಬಡಾವಣೆಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…

37 mins ago

ಓದುಗರ ಪತ್ರ: ಮಹಾರಾಣಿ ಕಾಲೇಜು ಆವರಣದಲ್ಲಿನ ಕಸ ತೆರವುಗೊಳಿಸಿ

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…

39 mins ago

ಓದುಗರ ಪತ್ರ: ಭರಚುಕ್ಕಿ ಜಲಪಾತ ಸಂಪರ್ಕ ರಸ್ತೆ ದುರಸ್ತಿ ಮಾಡಿ

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…

41 mins ago

ರೋಮಾಂಚನಕಾರಿ ಜಲ ಸಾಹಸ ಕ್ರೀಡೋತ್ಸವ…

ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ…

43 mins ago

ಸಂಘರ್ಷದ ಸಮಯದಲ್ಲಿ ಭಾರತೀಯ ಸೇನೆ ಅನಾಥ..!

ಚೀನಿ ಸೈನಿಕರು ಫಿರಂಗಿಗಳೊಂದಿಗೆ ಮುನ್ನುಗ್ಗುತ್ತಲೇ ಇದ್ದರು... ಉದ್ವಿಗ್ನ ಸನ್ನಿವೇಶದಲ್ಲಿ ರಕ್ಷಣಾ ಸಚಿವರಿಂದ ಸಿಗದ ಸ್ಪಷ್ಟ ಸಂದೇಶ ೨ ಗಂಟೆಗಳ ಕಾಲ…

47 mins ago