ಕೇರಳ: ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ಕರ್ನಾಟಕದ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ನಕ್ಸಲ್ ಸುರೇಶ್ ಅಲಿಯಾಸ್ ಪ್ರದೀಪ್ ಭಾನುವಾರ ಕೇರಳದ ಕಣ್ಣೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದಾನೆ.
ಇತ್ತೀಚೆಗೆ ಕೇರಳ-ಕರ್ನಾಟಕ ಗಡಿಯ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರ ತಂಡದೊಂದಿಗೆ ಸಂಚರಿಸುತ್ತಿದ್ದಾಗ ಸುರೇಶ್ ಕಾಡಾನೆ ದಾಳಿಗೆ ತುತ್ತಾಗಿದ್ದರು. ಗಂಭೀರ ಗಾಯಗೊಂಡಿದ್ದ ಅವರನ್ನು ಆರು ಜನರಿದ್ದ ನಕ್ಸಲೀಯರ ತಂಡ ಗಡಿಭಾಗದ ಕಂಜಿರಕೊಲ್ಲಿ ಚಿತ್ತಾರಿ ಕಾಲನಿಯಲ್ಲಿ ಬಿಟ್ಟು ಹೋಗಿತ್ತು. ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಸುರೇಶ್ನನ್ನು ಕಣ್ಣೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಿದ್ದರು.
ಸುರೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡ ಬಳಿಕ ಪೊಲೀಸರಿಗೆ ಶರಣಾಗುವ ಸಂದರ್ಭ ಗಾಲಿ ಖುರ್ಚಿಯಲ್ಲಿ ಕುಳಿತು ಮಾಧ್ಯಮದವರೊಂದಿಗೆ ಮಾತನಾಡಿ, ತಾನು ಬಹು ಕಾಲದ ಹಿಂದೆಯೇ ಶರಣಾಗಲು ಬಯಸಿದ್ದೆ. ನಾನು ಕಳೆದ 23 ವರ್ಷಗಳಿಂದ ಮಾವೋವಾದಿಯಾಗಿದ್ದೆ, ಈಗ ಶರಣಾಗುತ್ತಿದ್ದೇನೆ. ಮಾವೋವಾದಿಯಾದ ಬಳಿಕವೂ ನನಗೆ ಏನೂ ಮಾಡಲು ಸಾಧ್ಯವಾಗಲಿಲ್ಲ. ಹಲವು ವರ್ಷಗಳ ಬಳಿಕವೂ ನಮಗೆ ಕೇರಳ, ತಮಿಳುನಾಡು ಅಥವಾ ಕರ್ನಾಟಕದಲ್ಲಿ ಯಾವುದೇ ಬದಲಾವಣೆ ತರಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…