ದೇಶ- ವಿದೇಶ

5 ಕೋಟಿ ರೂಪಾಯಿ ಮೌಲ್ಯದ ವಿವಿಧ ಮಾದಕವಸ್ತುಗಳನ್ನು ವಶಪಡಿಸಿಕೊಂಡ ಎನ್‌ಸಿಬಿ

ಮುಂಬೈ : ಮಹಾರಾಷ್ಟ್ರ ರಾಜಧಾನಿ  ಮುಂಬೈ ಮತ್ತು ನೆರೆಯ ರಾಯಗಢದಲ್ಲಿ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ 3 ಕಾರ್ಯಾಚರಣೆಗಳನ್ನು ನಡೆಸಿದ್ದು,  ಒಟ್ಟು 5 ಕೋಟಿ ರೂಪಾಯಿ ಮೌಲ್ಯದ ವಿವಿಧ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದೆ. ಅಲ್ಲದೆ, ಮೂವರು ಆರೋಪಿಗಳನ್ನು ಬಂಧಿಸಿದೆ ಎಂದು ಅಧಿಕಾರಿಯೊಬ್ಬರು  ಮಾಹಿತಿ ನೀಡಿದ್ದಾರೆ. 

ನಿರ್ದಿಷ್ಟ ಮಾಹಿತಿಯ ಮೇರೆಗೆ ಎನ್‌ಸಿಬಿಯ ಮುಂಬೈ ವಲಯ ಘಟಕವು ಕಳೆದ ಮಂಗಳವಾರ ಮುಂಬೈನ ವಿದೇಶಿ ಅಂಚೆ ಕಚೇರಿಯಿಂದ ಕೊರಿಯರ್ ಪಾರ್ಸೆಲ್‌ನಲ್ಲಿ 870 ಗ್ರಾಂ ಹೈಡ್ರೋಪೋನಿಕ್ ಗಾಂಜಾ ಅನ್ನು ವಶಪಡಿಸಿಕೊಂಡಿತ್ತು. ನಾಗ್ಪುರ ಮೂಲದವರಿಗಾಗಿ ಈ ಪಾರ್ಸೆಲ್ ಅನ್ನು ಅಮೆರಿಕದಿಂದ ಕಳುಹಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಇನ್ನು, ಈ ಪ್ರಕರಣದ ತನಿಖೆ ನಡೆಯುತ್ತಿರುವಾಗ, ಶುಕ್ರವಾರ ಮುಂಬೈನಲ್ಲಿ ಕೊರಿಯರ್ ಪಾರ್ಸೆಲ್‌ನಲ್ಲಿ ಸುಮಾರು 4.95 ಕೆಜಿ ಮೆಥಾಕ್ವಾಲೋನ್‌ ಅನ್ನು ಸಾಗಿಸಲಾಗುತ್ತಿರುವ ಬಗ್ಗೆ ಎನ್‌ಸಿಬಿ ಮಾಹಿತಿ ಪಡೆದುಕೊಂಡಿದೆ. ಬಳಿಕ, ಈ ಬಗ್ಗೆ ಹುಡುಕಾಟ ನಡೆಸಿದ ಎನ್‌ಸಿಬಿ ಈ ಪಾರ್ಸೆಲ್ ಅನ್ನು ವಶಪಡಿಸಿಕೊಂಡಿದ್ದು, ಅದನ್ನು ನಾಗ್ಪುರದಿಂದ ನ್ಯೂಜಿಲೆಂಡ್‌ಗೆ ಕಳುಹಿಸಲು ಬುಕ್ ಮಾಡಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಎರಡೂ ಕೊರಿಯರ್ ಪಾರ್ಸೆಲ್‌ಗಳಿಗೆ ನಾಗ್ಪುರ ಸಾಮಾನ್ಯ ಸ್ಥಳವಾಗಿರುವುದರಿಂದ, ಎರಡೂ ಪ್ರಕರಣಗಳ ಹೆಚ್ಚಿನ ತನಿಖೆಗಾಗಿ ಎನ್‌ಸಿಬಿ ತಂಡವವೊಂದನ್ನು ಮಹಾರಾಷ್ಟ್ರದ ನಾಗ್ಪುರ ನಗರಕ್ಕೆ ಕಳುಹಿಸಲಾಗಿದೆ ಎಂದೂ ಅಧಿಕಾರಿ ಹೇಳಿದ್ದಾರೆ. ಅಂತಾರಾಷ್ಟ್ರೀಯ ಮಾದಕವಸ್ತು ಕಳ್ಳಸಾಗಣೆಯಲ್ಲಿ ಭಾಗಿಯಾಗಿರುವ ಸಿಂಡಿಕೇಟ್‌ಗಳನ್ನು ಗುರುತಿಸಲು ವಿವಿಧ ಅಂಶಗಳನ್ನು ವಿಶ್ಲೇಷಿಸಲಾಗುತ್ತಿದೆ ಮತ್ತು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇನ್ನು, ಮೂರನೇ ಕಾರ್ಯಾಚರಣೆಯಲ್ಲಿ, ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಬಳಿಯ ರಾಯಗಢ ಜಿಲ್ಲೆಯ ಕರ್ಜತ್‌ನಲ್ಲಿ ಭಾನುವಾರ ಮಧ್ಯರಾತ್ರಿ ಎನ್‌ಸಿಬಿ ಅಂತರ-ರಾಜ್ಯ ಮಾದಕವಸ್ತು ಕಳ್ಳಸಾಗಣೆ ಸಿಂಡಿಕೇಟ್ ಅನ್ನು ಭೇದಿಸಿತು ಎಂದು ಅವರು ಹೇಳಿದರು. ಸಕ್ರಿಯ ಸಿಂಡಿಕೇಟ್‌ನಿಂದ ಬೃಹತ್ ಪ್ರಮಾಣದ ಡ್ರಗ್ಸ್‌ ಸಾಗಿಸುವ ಸಾಧ್ಯತೆಯ ಬಗ್ಗೆ ಏಜೆನ್ಸಿಯು ಮಾಹಿತಿಯನ್ನು ಹೊಂದಿದೆ ಎಂದೂ ಅವರು ಹೇಳಿದರು. ಅದರಂತೆ, ಎನ್‌ಸಿಬಿ ಕರ್ಜತ್ ಬಳಿ ವಾಹನವನ್ನು ಅಡ್ಡಗಟ್ಟಿದೆ. ಆ ವಾಹನದಲ್ಲಿ ಏನಿದೆ ಎಂದು ಕೇಳಿದಾಗ, ವಾಹನದ ಚಾಲಕ ತೃಪ್ತಿದಾಯಕ ಉತ್ತರವನ್ನು ನೀಡಲಿಲ್ಲವಾದ್ದರಿಂದ ಎನ್‌ಸಿಬಿ ಅಧಿಕಾರಿಗಳು ಆ ವಾಹನವನ್ನು ಪರಿಶೀಲಿಸಿದ್ದಾರೆ. ಆ ವೇಳೆ ವಾಹನದೊಳಗೆ ಸೃಷ್ಟಿಸಿದ್ದ ಸುಳ್ಳು ಕುಳಿಗಳಲ್ಲಿ 88 ಕೆಜಿ ಉತ್ತಮ ಗುಣಮಟ್ಟದ ಗಾಂಜಾವನ್ನು ಅವರು ವಶಪಡಿಸಿಕೊಂಡಿದ್ದಾರೆ ಎಂದೂ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ ಮಧ್ಯೆ, 88 ಕೆಜಿ ಗಾಂಜಾ ವಶಪಡಿಸಿಕೊಂಡ ವಾಹನದ ಚಾಲಕನನ್ನು ಎಲ್ಲಿಗೆ ಹೋಗಬೇಕೆಂದು ಮಾರ್ಗದರ್ಶನ ಮಾಡುವ ಕೆಲಸವನ್ನು ಹಾಗೂ ಆ ವಾಹನ ನಿಗದಿತ ಸ್ಥಳ ತಲುಪಿದ ಬಳಿಕ ಅದನ್ನ ಸ್ವೀಕರಿಸುವ ಕೆಲಸವನ್ನು ಇಬ್ಬರಿಗೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಆ ಇಬ್ಬರನ್ನು ಎನ್‌ಸಿಬಿ ತಂಡವು ಹೆದ್ದಾರಿ ಬದಿಯ ಉಪಾಹಾರ ಗೃಹದಿಂದ ಬಂಧಿಸಿದೆ ಎಂದು ಹೇಳಿದೆ. ಆಂಧ್ರಪ್ರದೇಶದಿಂದ ಬಂದ ಆ ಉತ್ತಮ ಗುಣಮಟ್ಟದ ಗಾಂಜಾವನ್ನು ಮುಂಬೈ ಮತ್ತು ಉಪನಗರ ಪ್ರದೇಶಗಳಲ್ಲಿನ ಡ್ರಗ್ ಪೆಡ್ಲರ್‌ಗಳಿಗೆ ಮತ್ತಷ್ಟು ವಿತರಿಸಲು ಉದ್ದೇಶಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ವ್ಯಕ್ತಿಗಳು ಅನುಭವಿ ದಂಧೆಕೋರರಾಗಿದ್ದು, 4 ವರ್ಷಗಳಿಂದ ಇವರು ಅಕ್ರಮ ಮಾದಕ ವ್ಯಸನ ಉದ್ಯೋಗದಲ್ಲಿದ್ದಾರೆ ಎಂದು ಅವರು ಹೇಳಿದರು. ಮಾಲ್‌ ಅನ್ನು ಅವರು ಡೆಲಿವರಿ ಮಾಡಲು ಪ್ಲ್ಯಾನ್‌ ಮಾಡುವಾಗ ತಮ್ಮ ಸಂಪರ್ಕ ಸಂಖ್ಯೆಗಳನ್ನು ಮಾತ್ರವಲ್ಲದೆ ವಾಹನದ ನಂಬರ್ ಪ್ಲೇಟ್‌ಗಳನ್ನು ಸಹ ಎನ್‌ಸಿಬಿಯಿಂದ ಭೌತಿಕ ಟ್ರ್ಯಾಕಿಂಗ್ ತಪ್ಪಿಸಲು ಬಳಸುತ್ತಿದ್ದರು ಎಂದು ಅಧಿಕಾರಿ ಹೇಳಿದ್ದಾರೆ. ಅಲ್ಲದೆ, ಉಳಿದ ಜಾಲವನ್ನು ಕೆಡವಲು ಇತರ ಡ್ರಗ್ ಪೆಡ್ಲರ್‌ಗಳು, ಪೂರೈಕೆ ಲಿಂಕ್‌ಗಳು ಮತ್ತು ಪ್ರಮುಖ ಸಹಚರರ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲು ಮೂವರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದೂ ಮುಂಬೈನಲ್ಲಿ ಮಾದಕ ವಸ್ತು ನಿಯಂತ್ರಣ ಬ್ಯೂರೋ ಅಧಿಕಾರಿಗಳು ತಿಳಿಸಿದ್ದಾರೆ.

andolana

Recent Posts

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…

7 hours ago

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

11 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

11 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

12 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

12 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

12 hours ago