ದೇಶ- ವಿದೇಶ

ರಾಜ್ಯಸಭೆಯಲ್ಲಿ12 ಸದಸ್ಯರು ಅವಿರೋಧ ಆಯ್ಕೆ: ಎನ್‌ಡಿಗೆ ಸ್ಪಷ್ಟ ಬಹುಮತ

ನವದೆಹಲಿ: 2014ರ ನಂತರ ಮೊದಲ ಬಾರಿಗೆ ರಾಜ್ಯಸಭೆಯಲ್ಲಿ ಎನ್‌ಡಿಎಗೆ ಸ್ಪಷ್ಟ ಬಹುಮತ ಸಿಕ್ಕಿದೆ.

ರಾಜ್ಯಸಭೆಗೆ 12 ಸದಸ್ಯರು ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮೇಲ್ಮನೆಯಲ್ಲಿ 2014ರ ನಂತರ ಸ್ಪಷ್ಟ ಬಹುಮತವನ್ನು ಪಡೆದಿದೆ.

ಉಪಚುನಾವಣೆಯಲ್ಲಿ ಬಿಜೆಪಿ 9 ಸ್ಥಾನ ಗೆದ್ದರೆ ಮಿತ್ರ ಪಕ್ಷಗಳಾದ ಎನ್‌ಸಿಪಿ ಮತ್ತು ರಾಷ್ಟ್ರೀಯ ಲೋಕ ಮಂಚ್‌ನ ತಲಾ ಒಬ್ಬರು ಆಯ್ಕೆಯಾಗಿದ್ದಾರೆ. ಇನ್ನೊಂದು ಸ್ಥಾನವನ್ನು ಕಾಂಗ್ರೆಸ್‌ ಪಕ್ಷ ತೆಲಂಗಾಣದಿಂದ ಗೆದ್ದುಕೊಂಡಿದೆ.

ಹಿರಿಯ ವಕೀಲ ಅಭಿಷೇಕ್‌ ಸಿಂಘ್ವಿ ಅವರು ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದಾರೆ. ರಾಜ್ಯಸಭೆಯ 10 ಸದಸ್ಯರು ಲೋಕಸಭೆಗೆ ಆಯ್ಕೆಯಾಗಿದ್ದರು. ಬಿಆರ್‌ಎಸ್‌ನ ಕೇಶವ ರಾವ್‌ ಹಾಗೂ ಬಿಜೆಡಿಯ ಮಮತಾ ಮೊಹಾಂತ ಅವರು ಕ್ರಮವಾಗಿ ಕಾಂಗ್ರೆಸ್‌ ಹಾಗೂ ಬಿಜೆಪಿ ಸೇರುವ ಮುನ್ನ ರಾಜೀನಾಮೆ ನೀಡಿದ್ದರಿಂದ 12 ಸ್ಥಾನಗಳಿಗೆ ಉಪಚುನಾವಣೆ ನಡೆದಿತ್ತು.

ಮೋದಿ ಸರ್ಕಾರ ಎರಡೂ ಅವಧಿಯಲ್ಲಿ ಎನ್‌ಡಿಎ ಮತ್ತು ಯುಪಿಎ ಹೊರತಾದ ಪಕ್ಷಗಳ ಸದಸ್ಯರ ಬಲದಿಂದ ರಾಜ್ಯಸಭೆಯಲ್ಲಿ ಮಸೂದೆಗಳನ್ನು ಪಾಸ್‌ ಮಾಡುತ್ತಿತ್ತು. ಈಗ ರಾಜ್ಯಸಭೆಯಲ್ಲಿ ಸ್ಪಷ್ಟ ಬಹುಮತ ಸಿಕ್ಕಿರುವ ಹಿನ್ನೆಲೆಯಲ್ಲಿ ಇನ್ನು ಹಲವು ಮಸೂದೆಗಳನು ಪಾಸ್‌ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

9 mins ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

5 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

12 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

12 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

12 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

12 hours ago