ದೇಶ- ವಿದೇಶ

ನೀಟ್‌ ಹಗರಣ: ಮತ್ತೆ ಐವರ ಬಂಧನ; ಬಂಧಿತರ ಸಂಖ್ಯೆ 18ಕ್ಕೆ ಏರಿಕೆ

ಪಾಟ್ನಾ: ಯುಜಿಸಿ-ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಪ್ರಕರಣ ಸಂಬಂಧ ಮತ್ತೆ ಐವರನ್ನು ಬಿಹಾರ ಪೊಲೀಸರು ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.

ಜಾರ್ಖಾಂಡ್‌ನ ದಿಯೋಘಾರ್‌ ಹಾಗೂ ರಾಂಚಿಯಲ್ಲಿ ಐವರನ್ನು ಬಂಧಿಸಿದ್ದು, ಬಂಧಿತ ಐವರನ್ನು ಹೆಚ್ಚಿನ ವಿಚಾರಣೆಗಾಗಿ ಪಾಟ್ನಾ ಹೈಕೋರ್ಟ್‌ಗೆ ಕರೆತರಲಾಗಿದೆ.

ಬಂಧಿತರಲ್ಲಿ ಇಬ್ಬರಾದ ಅವದೇಶ್‌ ಹಾಗೂ ಅಭಿಷೇಕ್‌ ಅಪ್ಪ ಮಕ್ಕಳಾಗಿದ್ದು, ಇವರು ಪ್ರಕರಣದ ಪ್ರಮುಖ ಆರೋಪಿ ಸಿಖಂದರ್‌ ಯಾದವೆಂದು ಅವರ ಜೊತೆ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಅವದೇಶ್‌ ಪುತ್ರ ಅಭಿಷೇಕ್‌ ನೀಟ್‌ ಆಕಾಂಕ್ಷಿ, ಪ್ರಶ್ನೆ ಪತ್ರಿಕೆಗಾಗಿ ಸಿಕಂದರ್‌ ಯಾದವೆಂದು ಅವರಿಗೆ 40 ಲಕ್ಷ ರೂ.ಗಳನ್ನು ನೀಡಿರುವುದಾಗಿ ಅವದೇಶ್‌ ತಪ್ಪೊಪ್ಪಿಕೊಂಡಿದ್ದಾರೆ.

ಪ್ರಕರಣ ಸಂಬಂಧ ಈ ಮೊದಲು ಬಿಹಾರ ಪೊಲೀಸರು ಬಂಧಿಸಿರುವ 13 ಮಂದಿಯನ್ನು ಬಂಧಿಸಿದ್ದರು. ಬಂಧಿತ ಆರೋಪಿಗಳು ಪರೀಕ್ಷೆಗೂ ಮೊದಲು ಅಂದಾಜು 35 ಜನ ವಿದ್ಯಾರ್ಥಿಗಳೊಂದಿಗೆ ಪ್ರಶ್ನೆ ಪತ್ರಿಕೆಗಳನ್ನು ಹಂಚಿಕೊಂಡಿದ್ದಾರೆಂದು ಪೊಲೀಸರು ಶಂಕಿಸಿದ್ದಾರೆ.

ಬಂಧಿತ ಒಬ್ಬ ಆರೋಪಿ ಈ ಹಿಂದೆ ಬಿಹಾರ ಲೋಕಸೇವಾ ಆಯೋಗ ನಡೆಸಿದ್ದ ಶಿಕ್ಷಕರ ನೇಮಕಾತಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಎಲ್ಲಾ 18 ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದು, ಬಂಧಿತರಿಂದ ಪ್ರಕರಣ ಸಂಬಂಧಿಸಿದ ಸಾಕ್ಷ್ಯಗಳು ಮತ್ತು ಎಲೆಕ್ಟ್ರಾನಿಕ್‌ ಉಪಕರಣಗಳನ್ನು ವಶಕ್ಕೆ ಪಡೆಯಲಾಗಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

14 mins ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

25 mins ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

29 mins ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

33 mins ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

57 mins ago

ರೇಸ್‌ಕ್ಲಬ್‌ ಸುತ್ತಮುತ್ತ ಕುದುರೆ ಚಟುವಟಿಕೆಗಳಿಗೆ ನಿರ್ಬಂಧ

ಮೈಸೂರು : ಮೈಸೂರಿನ ರೇಸ್‌ಕ್ಲಬ್‌ನ ಪ್ರದೇಶದ ಸುತ್ತಲಿನ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವಲನ, ಕುದುರೆಗಳನ್ನು…

2 hours ago