ಪಾಟ್ನಾ: ಯುಜಿಸಿ-ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಪ್ರಕರಣ ಸಂಬಂಧ ಮತ್ತೆ ಐವರನ್ನು ಬಿಹಾರ ಪೊಲೀಸರು ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.
ಜಾರ್ಖಾಂಡ್ನ ದಿಯೋಘಾರ್ ಹಾಗೂ ರಾಂಚಿಯಲ್ಲಿ ಐವರನ್ನು ಬಂಧಿಸಿದ್ದು, ಬಂಧಿತ ಐವರನ್ನು ಹೆಚ್ಚಿನ ವಿಚಾರಣೆಗಾಗಿ ಪಾಟ್ನಾ ಹೈಕೋರ್ಟ್ಗೆ ಕರೆತರಲಾಗಿದೆ.
ಬಂಧಿತರಲ್ಲಿ ಇಬ್ಬರಾದ ಅವದೇಶ್ ಹಾಗೂ ಅಭಿಷೇಕ್ ಅಪ್ಪ ಮಕ್ಕಳಾಗಿದ್ದು, ಇವರು ಪ್ರಕರಣದ ಪ್ರಮುಖ ಆರೋಪಿ ಸಿಖಂದರ್ ಯಾದವೆಂದು ಅವರ ಜೊತೆ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಅವದೇಶ್ ಪುತ್ರ ಅಭಿಷೇಕ್ ನೀಟ್ ಆಕಾಂಕ್ಷಿ, ಪ್ರಶ್ನೆ ಪತ್ರಿಕೆಗಾಗಿ ಸಿಕಂದರ್ ಯಾದವೆಂದು ಅವರಿಗೆ 40 ಲಕ್ಷ ರೂ.ಗಳನ್ನು ನೀಡಿರುವುದಾಗಿ ಅವದೇಶ್ ತಪ್ಪೊಪ್ಪಿಕೊಂಡಿದ್ದಾರೆ.
ಪ್ರಕರಣ ಸಂಬಂಧ ಈ ಮೊದಲು ಬಿಹಾರ ಪೊಲೀಸರು ಬಂಧಿಸಿರುವ 13 ಮಂದಿಯನ್ನು ಬಂಧಿಸಿದ್ದರು. ಬಂಧಿತ ಆರೋಪಿಗಳು ಪರೀಕ್ಷೆಗೂ ಮೊದಲು ಅಂದಾಜು 35 ಜನ ವಿದ್ಯಾರ್ಥಿಗಳೊಂದಿಗೆ ಪ್ರಶ್ನೆ ಪತ್ರಿಕೆಗಳನ್ನು ಹಂಚಿಕೊಂಡಿದ್ದಾರೆಂದು ಪೊಲೀಸರು ಶಂಕಿಸಿದ್ದಾರೆ.
ಬಂಧಿತ ಒಬ್ಬ ಆರೋಪಿ ಈ ಹಿಂದೆ ಬಿಹಾರ ಲೋಕಸೇವಾ ಆಯೋಗ ನಡೆಸಿದ್ದ ಶಿಕ್ಷಕರ ನೇಮಕಾತಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಎಲ್ಲಾ 18 ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದು, ಬಂಧಿತರಿಂದ ಪ್ರಕರಣ ಸಂಬಂಧಿಸಿದ ಸಾಕ್ಷ್ಯಗಳು ಮತ್ತು ಎಲೆಕ್ಟ್ರಾನಿಕ್ ಉಪಕರಣಗಳನ್ನು ವಶಕ್ಕೆ ಪಡೆಯಲಾಗಿದೆ.
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…