ನವದೆಹಲಿ: ನೀಟ್-ಯುಜಿ ಪರೀಕ್ಷಾ ಅವ್ಯವಹಾರಗಳ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಗುಜರಾತ್ನ ಗೋಧ್ರಾದಲ್ಲಿರುವ ಜಯಬಲರಾಮ್ ಶಾಲೆಯ ಮುಖ್ಯಸ್ಥ ದೀಕ್ಷಿತ್ ಪಟೇಲ್ ಎಂಬುವರನ್ನು ಬಂಧಿಸಿದೆ.
ಈ ಮೂಲಕ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ ಆರಕ್ಕೆ ಏರಿದೆ. ದೀಕ್ಷಿತ್ ಪಟೇಲ್ ಪಂಚಮಹಲ್ ಜಿಲ್ಲೆಯ ಗೋಧ್ರಾ ಬಳಿ ಇರುವ ಜೈ ಬಲರಾಮ್ ಶಾಲೆಯ ಮಾಲೀಕರಾಗಿದ್ದಾರೆ. ಮೇ 5 ರಂದು ನಡೆದ ನೀಟ್-ಯುಜಿ ಪರೀಕ್ಷೆಗೆ ನಿಗದಿಯಾಗಿದ್ದ ಕೇಂದ್ರಗಳ ಪೈಕಿ ಜಯ ಬಲರಾಮ್ ಶಾಲೆಯೂ ಒಂದಾಗಿತ್ತು.
ಪಟೇಲ್ ಅವರನ್ನು ಅವರ ನಿವಾಸದಿಂದ ಬಂಧಿಸಲಾಯಿತು. ಆ ಬಳಿಕ ಅವರನ್ನು ಅಹಮದಾಬಾದ್ನ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ತಿಳಿಸಿದ್ದಾರೆ.
ದೀಕ್ಷಿತ್ ಪಟೇಲ್ ಅವರು ನಿಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು 10 ರಿಂದ 27 ಲಕ್ಷದವರೆಗೆ ಪಡೆಯುತ್ತಿದ್ದರು ಎಂಬ ಆರೋಪ ಇದೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…