ನವದೆಹಲಿ: ನೀಟ್-ಯುಜಿ ಹಾಗೂ ಯುಜಿಸಿ-ನೆಟ್ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮವನ್ನು ಖಂಡಿಸಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್ಎಸ್ಯುಐ)ಸದಸ್ಯರು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್ಟಿಎ) ವಿರುದ್ಧ ಪ್ರತಿಭಟನೆ ನಡೆಸಿದರು.
ಇಂದು(ಜೂ.27) ನವದೆಹಲಿಯ ಒಖ್ಲಾದಲ್ಲಿರುವ ಎನ್ಟಿಎ ಕಚೇರಿಗೆ ನುಗ್ಗಿದ ಎನ್ಎಸ್ಯುಐ ಪ್ರತಿಭಟನಾಕಾರರು ಎನ್ಟಿಎ ಕಚೇರಿಯನ್ನು ಮುಚ್ಚಿ ಘೋಷಣೆಗಳನ್ನು ಕೂಗಿದ್ದಾರೆ. ಇನ್ನೂ ಈ ಕುರಿತು ಎನ್ಟಿಎ ಅಧಿಕಾರಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ದೇಶದಾದ್ಯಂತ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ವೈಧ್ಯಕೀಯ ಕೋರ್ಸ್ಗಳ ಪ್ರವೇಶಾತಿಗಾಗಿ ನೀಟ್-ಯುಜಿ ಹಾಗೂ ಜೆಆರ್ಎಫ್, ಪ್ರಾಧ್ಯಾಪಕರ ಆಯ್ಕೆಯೆ ಯುಜಿಸಿ-ನೆಟ್ ಪರೀಕ್ಷೆಯನ್ನು ಎನ್ಟಿಎ ಸಂಸ್ಥೆ ನಡೆಸುತ್ತದೆ.
ಮೇ 5ರಂದು ನಡೆದ ಯುಜಿ-ನೀಟ್ ಹಾಗೂ ಜೂನ್ 18 ರಂದು ನಡೆದು ಯುಜಿಸಿ-ನೆಟ್ಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಇವೆ. ಈ ಸಂಬಂಧ ದೇಶದಾದ್ಯಂತ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಸಿಬಿಐ ತನಿಖೆಗೆ ಆಗ್ರಹಿಸಿದ್ದರು. ಪ್ರಕರಣವನ್ನು ಸಿಬಿಐಗೆ ವಹಿಸಿದ ಕೇಂದ್ರ, ಮರುದಿನವೇ ಮೊದಲ ದೂರು ದಾಖಲಿಸಿಕೊಂಡು ತನಿಖೆ ನಡೆಸಿ, ಇಂದು ಬಿಹಾರದ ಪಾಟ್ನಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ.
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…