ದೇಶ- ವಿದೇಶ

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್ 21ರಂದು ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ತಿಳಿಸಿವೆ.

ಈ ಸಂಬಂಧ ಎನ್‌ಟಿಎ ಪ್ರಕಟಣೆ ಹೊರಡಿಸಿದ್ದು, ಮರು ಪರೀಕ್ಷೆಯನ್ನು 2026ರ ಜೂನ್‌ 21, ಭಾನುವಾರದಂದು ನಿಗದಿಪಡಿಸಲಾಗಿದೆ. ಅಧಿಕೃತ ಚಾನಲ್‌ಗಳ ಮೂಲಕವೇ ಅಭ್ಯರ್ಥಿಗಳು ಹಾಗೂ ಪೋಷಕರು ಮಾಹಿತಿ ಪಡೆದುಕೊಳ್ಳಬೇಕು ಎಂದು ವಿನಂತಿಸಿದೆ.

ಏನಿದು ಪ್ರಕರಣ?
ಮೇ 3ರಂದು ದೇಶಾದ್ಯಂತ ನಡೆದ ನೀಟ್-ಯುಜಿ 2026 ಪರೀಕ್ಷೆಗೂ ಮುನ್ನ ‘ಗೆಸ್ ಪೇಪರ್’ ಹೆಸರಿನಲ್ಲಿ ಕೆಲವು ಪ್ರಶ್ನೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಬಳಿಕ ಪರೀಕ್ಷೆಯನ್ನು ಎನ್‌ಟಿಎ ರದ್ದುಗೊಳಿಸಿತ್ತು. ಜೀವಶಾಸ್ತ್ರದ 90 ಹಾಗೂ ರಸಾಯನಶಾಸ್ತ್ರದ 30 ಪ್ರಶ್ನೆಗಳು ಮೂಲ ಪ್ರಶ್ನೆಪತ್ರಿಕೆಯೊಂದಿಗೆ ಹೊಂದಿಕೆಯಾಗಿವೆ ಎಂದು ತನಿಖೆಯಿಂದ ತಿಳಿದುಬಂದಿದೆ. ರಾಜಸ್ಥಾನ ಎಸ್‌ಒಜಿ ಮತ್ತು ಸಿಬಿಐ ಈಗ ಪ್ರಕರಣದ ತನಿಖೆ ನಡೆಸುತ್ತಿವೆ. ಈ ಬೆನ್ನಲ್ಲೇ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ದೇಶದಾದ್ಯಂತ ವ್ಯಾಪಕ ಆಕ್ರೋಶ ಹಾಗೂ ಪ್ರತಿಭಟನೆಗಳು ನಡೆದಿದ್ದವು.

ವಿದ್ಯಾರ್ಥಿಗಳ ಆಕ್ರೋಶ
‘2 ವರ್ಷ ತಯಾರಿ ನಡೆಸಿ ಪರೀಕ್ಷೆ ಬರೆದಿದ್ದೇವೆ. ಪ್ರಶ್ನೆಪತ್ರಿಕೆ ಸೋರಿಕೆಗೆ ನಾವೇನು ಮಾಡಿದೆವು? ಮತ್ತೆ ಪರೀಕ್ಷೆ ಬರೆಯುವುದು ಅನ್ಯಾಯ’ ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೋರಿಕೆ ಮಾಡಿದವರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಕೌನ್ಸೆಲಿಂಗ್ ವಿಳಂಬ
ಮರು ಪರೀಕ್ಷೆ ಜೂನ್‌ನಲ್ಲಿ ನಡೆದರೆ, ಫಲಿತಾಂಶ ಜುಲೈ ಮಧ್ಯಭಾಗದಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ. ಇದರಿಂದ ವೈದ್ಯಕೀಯ ಕೋರ್ಸ್‌ಗಳ ಕೌನ್ಸೆಲಿಂಗ್ ಆಗಸ್ಟ್‌ನಲ್ಲಿ ಆರಂಭವಾಗಿ, ಶೈಕ್ಷಣಿಕ ವರ್ಷ ಸುಮಾರು 2 ತಿಂಗಳು ವಿಳಂಬವಾಗಲಿದೆ ಎಂದು ಶಿಕ್ಷಣ ತಜ್ಞರು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

8 mins ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

33 mins ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

44 mins ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

2 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

5 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

6 hours ago