ದೇಶ- ವಿದೇಶ

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್ 21ರಂದು ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ತಿಳಿಸಿವೆ.

ಈ ಸಂಬಂಧ ಎನ್‌ಟಿಎ ಪ್ರಕಟಣೆ ಹೊರಡಿಸಿದ್ದು, ಮರು ಪರೀಕ್ಷೆಯನ್ನು 2026ರ ಜೂನ್‌ 21, ಭಾನುವಾರದಂದು ನಿಗದಿಪಡಿಸಲಾಗಿದೆ. ಅಧಿಕೃತ ಚಾನಲ್‌ಗಳ ಮೂಲಕವೇ ಅಭ್ಯರ್ಥಿಗಳು ಹಾಗೂ ಪೋಷಕರು ಮಾಹಿತಿ ಪಡೆದುಕೊಳ್ಳಬೇಕು ಎಂದು ವಿನಂತಿಸಿದೆ.

ಏನಿದು ಪ್ರಕರಣ?
ಮೇ 3ರಂದು ದೇಶಾದ್ಯಂತ ನಡೆದ ನೀಟ್-ಯುಜಿ 2026 ಪರೀಕ್ಷೆಗೂ ಮುನ್ನ ‘ಗೆಸ್ ಪೇಪರ್’ ಹೆಸರಿನಲ್ಲಿ ಕೆಲವು ಪ್ರಶ್ನೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಬಳಿಕ ಪರೀಕ್ಷೆಯನ್ನು ಎನ್‌ಟಿಎ ರದ್ದುಗೊಳಿಸಿತ್ತು. ಜೀವಶಾಸ್ತ್ರದ 90 ಹಾಗೂ ರಸಾಯನಶಾಸ್ತ್ರದ 30 ಪ್ರಶ್ನೆಗಳು ಮೂಲ ಪ್ರಶ್ನೆಪತ್ರಿಕೆಯೊಂದಿಗೆ ಹೊಂದಿಕೆಯಾಗಿವೆ ಎಂದು ತನಿಖೆಯಿಂದ ತಿಳಿದುಬಂದಿದೆ. ರಾಜಸ್ಥಾನ ಎಸ್‌ಒಜಿ ಮತ್ತು ಸಿಬಿಐ ಈಗ ಪ್ರಕರಣದ ತನಿಖೆ ನಡೆಸುತ್ತಿವೆ. ಈ ಬೆನ್ನಲ್ಲೇ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ದೇಶದಾದ್ಯಂತ ವ್ಯಾಪಕ ಆಕ್ರೋಶ ಹಾಗೂ ಪ್ರತಿಭಟನೆಗಳು ನಡೆದಿದ್ದವು.

ವಿದ್ಯಾರ್ಥಿಗಳ ಆಕ್ರೋಶ
‘2 ವರ್ಷ ತಯಾರಿ ನಡೆಸಿ ಪರೀಕ್ಷೆ ಬರೆದಿದ್ದೇವೆ. ಪ್ರಶ್ನೆಪತ್ರಿಕೆ ಸೋರಿಕೆಗೆ ನಾವೇನು ಮಾಡಿದೆವು? ಮತ್ತೆ ಪರೀಕ್ಷೆ ಬರೆಯುವುದು ಅನ್ಯಾಯ’ ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೋರಿಕೆ ಮಾಡಿದವರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಕೌನ್ಸೆಲಿಂಗ್ ವಿಳಂಬ
ಮರು ಪರೀಕ್ಷೆ ಜೂನ್‌ನಲ್ಲಿ ನಡೆದರೆ, ಫಲಿತಾಂಶ ಜುಲೈ ಮಧ್ಯಭಾಗದಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ. ಇದರಿಂದ ವೈದ್ಯಕೀಯ ಕೋರ್ಸ್‌ಗಳ ಕೌನ್ಸೆಲಿಂಗ್ ಆಗಸ್ಟ್‌ನಲ್ಲಿ ಆರಂಭವಾಗಿ, ಶೈಕ್ಷಣಿಕ ವರ್ಷ ಸುಮಾರು 2 ತಿಂಗಳು ವಿಳಂಬವಾಗಲಿದೆ ಎಂದು ಶಿಕ್ಷಣ ತಜ್ಞರು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

54 mins ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

2 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

4 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

16 hours ago