ದೇಶ- ವಿದೇಶ

ಸುಪ್ರಿಂಕೋರ್ಟ್ ಸೂಚನೆ ಮೇರೆಗೆ NEET -UG ಫಲಿತಾಂಶ ಪ್ರಕಟಿಸಿದ NTA

ನವದೆಹಲಿ : ನೀಟ್‌ –ಯುಜಿ ೨೦೨೪ ಪರೀಕ್ಷೆ ಫಲಿತಾಂಶವನ್ನು  ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಇಂದು ಪ್ರಕಟ ಮಾಡಿದೆ. ಸುಪ್ರಿಂ ಕೋರ್ಟ್‌ ಸೂಚನೆ ಮೇರೆಗೆ ನಗರ ಮತ್ತು ಕೇಂದ್ರವಾರು ಫಲಿತಾಂಶ ಪ್ರಕಟಿಸಿದೆ.

ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು NTA NEET ನ ಅಧಿಕೃತ ವೆಬ್‌ ಸೈಟ್‌ exam.nta.ac.in/NEET/ ಮತ್ತು neet.ntaonline.in ನಲ್ಲಿ ಫಲಿತಾಂಶಗಳನ್ನು ಪರಿಶೀಲಸಬಹುದು. ನೀಟ್‌ ಯುಜಿ ಫಲಿತಾಂಶವನ್ನು ಜುಲೈ ೨೦ರಂದು ಮಧ್ಯಾಹ್ನ ಒಳಗೆ ಪ್ರಕಟಿಸಬೇಕು ಎಂದು ಎನ್‌ ಟಿಎಗೆ ಸುಪ್ರೀಂ ಕೋರ್ಟ್‌ ಗುರುವಾರ ನಿರ್ದೇಶನ ನೀಡಿತ್ತು. ವಿದ್ಯಾರ್ಥಿಗಳು ಪಡೆದ ಅಂಕಗಳನ್ನು ವೆನ್‌ ಸೈಟ್‌ ನಲ್ಲಿ ಪ್ರಕಟಿಸಿ ಆದರೆ ಹೆಸರನ್ನು ಬಹಿರಂಗಪಡಿಸಬಾರದು ಎಂದು ನ್ಯಾಯಾಲಯ ಆದೇಶ ಮಾಡಿತ್ತು.

ಮೇ ೫ ರಂದು ೧೪ ವಿದೇಶಿ ಸೇರಿದಂತೆ ೫೭೧ ನಗರಗಳ ೪೭೫೦ ಕೇಂದ್ರಗಳಲ್ಲಿ ನೀಟ್- ಯುಜಿ ಪರೀಕ್ಷೆ ನಡೆಸಲಾಗಿತ್ತು.  ೨೩.೩೩ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಸುಮಾರು ೧೫೬೩ ಅಭ್ಯರ್ಥಿಗಳು ಮರು ಪರೀಕ್ಷೆಗೆ ಹಾಜರಾಗಿದ್ದರು. ಆದರೆ ಪರೀಕ್ಷೆಗೂ ಮುನ್ನ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಕೇಳಿಬಂತು. ಬಳಿಕ ದೇಶದಾದ್ಯಂತ ಅಭ್ಯರ್ಥಿಗಳು ಕೂಡ ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಈಗಾಗಲೇ ಆರೋಪಿಗಳನ್ನ ಬಂಧಿಸಿ ವಿಚಾರಣೆಗೆ ಒಳಪಡಿಸಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

15 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

17 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

18 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

18 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

21 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

2 days ago