ನವದೆಹಲಿ: ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಕಿಂಗ್ಪಿನ್ ರಾಕಿ ಅಲಿಯಾಸ್ ರಾಕೇಶ್ ರಂಜನ್ನನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ನಳಂದ ಮೂಲದ ರಾಕಿ ಅಲಿಯಾಸ್ ರಾಕೇಶ್ ರಂಜನ್, ಪ್ರಕರಣದ ಮಾಸ್ಟರ್ ಮೈಂಡ್ ಸಂಜೀವ್ ಮುಖಿಯಾ ಅವರ ಸಂಬಂಧಿ ಎಂದು ಹೇಳಲಾಗಿದ್ದು, ಪಾಟ್ನಾದ ಹೊರವಲಯದಲ್ಲಿ ಸಿಬಿಐ ಆತನನ್ನು ಬಂಧಿಸಿದೆ.
ಪೇಪರ್ ಸೋರಿಕೆ ಪ್ರಕರಣ ಬೆಳಕಿಗೆ ಬಂದ ನಂತರ ನಾಪತ್ತೆಯಾಗಿದ್ದ ರಾಕೇಶ್ ರಂಜನ್ಗಾಗಿ ಸಿಬಿಐ ತೀವ್ರ ಶೋಧ ನಡೆಸಿತ್ತು. ಅಂತಿಮವಾಗಿ ಇಂದು ಬೆಳಿಗ್ಗೆಯೇ ಸಿಬಿಐ ಕಿಂಗ್ಪಿನ್ ರಾಕಿಯನ್ನು ಬಂಧಿಸಿದೆ.
ಬಂಧಿತ ಆರೋಪಿಯನ್ನು ಪಾಟ್ನಾದ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ಕೋರ್ಟ್ ರಾಕೇಶ್ ರಂಜನ್ನನ್ನು ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿದೆ.
ರಾಕೇಶ್ ರಂಜನ್ ಬಂಧನದ ನಂತರ ಸಿಬಿಐ ಪಾಟ್ನಾ ಮತ್ತು ಹತ್ತಿರದ ಪ್ರದೇಶಗಳಲ್ಲಿ ಮೂರು ಕಡೆ ಮತ್ತು ಕೋಲ್ಕತ್ತಾದ ಒಂದು ಸ್ಥಳಗಳಲ್ಲಿ ತೀವ್ರ ಶೋಧ ನಡೆಸಿತು.
ಈ ಮುಂಚೆ ಸಿಬಿಐ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ನ ಹಜಾರಿಬಾಗ್ ಮೂಲದ ಓಯಸಿಸ್ ಶಾಲೆಯ ಪ್ರಾಂಶುಪಾಲ ಮತ್ತು ಉಪ ಪ್ರಾಂಶುಪಾಲರನ್ನು ಬಂಧಿಸಿತ್ತು. ಇದರ ಜೊತೆಗೆ ಸುಟ್ಟ ಪ್ರಶ್ನೆ ಪತ್ರಿಕೆಗಳನ್ನು ಬಿಹಾರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ…
• ಆರೋಪ ಸಾಬೀತು ಮಾಡಲು ಕೇಂದ್ರ ವಿಫಲ • ಸುಪ್ರೀಂ ಮುಜುಗರದಿಂದ ಪಾರು? ಪರಿಸರ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಾಡಿದ…
ಮಹಾದೇಶ್ ಎಂ.ಗೌಡ ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದಿಂದ ಪ್ರಾರಂಭವಾಗಿರುವ ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 19ರವರೆಗೆ…
ಅಧಿಕಾರಿಗಳ ಮನವೊಲಿಕೆಗೆ ಸಮ್ಮತಿಸುತ್ತಿರುವ ಭೂ ಮಾಲೀಕರು ಕೆ.ಬಿ.ರಮೇಶನಾಯಕ ಮೈಸೂರು : ದಶಕಗಳಿಂದಲೂ ಬಡ-ಮಧ್ಯಮ ವರ್ಗದ ಜನರಿಗೆ ನಿವೇಶನ ಹಂಚಿಕೆ ಮಾಡಲು,…
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…