ದೇಶ- ವಿದೇಶ

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ ವಿಭಾಗದ ಸದಸ್ಯರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೇಣುಕೈ ಕೆರಿಯರ್ ಸೆಂಟರ್ (ಆರ್‌ಸಿಸಿ) ಸಂಸ್ಥಾಪಕ ಶಿವರಾಜ್ ಮೋಟೆಗಾಂವ್ಕರ್ ಅವರ ಪುತ್ರ ಸೇರಿದಂತೆ ಮೂವರು ವಿದ್ಯಾರ್ಥಿಗಳಿಗೆ ನೀಟ್ ಪತ್ರಿಕೆ ಸಿದ್ಧಪಡಿಸುವ ಪಿ.ವಿ.ಕುಲಕರ್ಣಿ ಅವರಿಂದ ರಸಾಯನಶಾಸ್ತ್ರ ಪ್ರಶ್ನೆಗಳನ್ನು ಪಡೆಯುವಲ್ಲಿ ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಮನೋಜ್ ಶಿರೂರೆ ಅವರನ್ನು ಸಿಬಿಐ ಬಂಧಿಸಿದೆ ಎಂದು ಅವರು ಹೇಳಿದರು.

ಲಾತೂರ್‌ನಲ್ಲಿ ಆರ್‌ಸಿಸಿ ನಡೆಸುತ್ತಿದ್ದ ಮೋಟೆಗಾಂವ್ಕರ್ ಅವರನ್ನು ಇತ್ತೀಚೆಗೆ ಈ ಪ್ರಕರಣದಲ್ಲಿ ಬಂಽಸಲಾಗಿದೆ. ಪುಣೆ ಮೂಲದ ಕೋಚಿಂಗ್ ಕೇಂದ್ರವಾದ ಡಾ. ಅಭಂಗ್ ಪ್ರಭು ವೈದ್ಯಕೀಯ ಅಕಾಡೆಮಿ (ಎಪಿಎಂಎ) ಯ ಭೌತಶಾಸ್ತ್ರ ಶಿಕ್ಷಕ ತೇಜಸ್ ಹರ್ಷದ್‌ಕುರ್ಮಾ ಶಾ ಅವರನ್ನು ಸಹ ಸಂಸ್ಥೆ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

೨೦೨೬ರ ನೀಟ್ ಯುಜಿ ಪರೀಕ್ಷೆಯ ಸೋರಿಕೆಯಾದ ಭೌತಶಾಸ್ತ್ರದ ಪ್ರಶ್ನೆಗಳನ್ನು ಬಂಧಿತ ಆರೋಪಿ ಮನೀಶಾ ಹವಾಲ್ದಾರ್ ಅವರಿಂದ ಪಡೆದಿದ್ದಾರೆ ಎಂದು ಅವರು ಹೇಳಿದರು.ಇದರೊಂದಿಗೆ, ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಒಟ್ಟು ಬಂಧನಗಳ ಸಂಖ್ಯೆ ೧೩ ಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣದ ಸರಪಳಿ ಮತ್ತು ಪಿತೂರಿಯನ್ನು ಬಯಲಿಗೆಳೆಯುವ ತನಿಖೆ ಮುಂದುವರಿದಿದೆ. ಸಿಬಿಐ ಇದುವರೆಗೆ ೪೯ ಸ್ಥಳಗಳಲ್ಲಿ ಶೋಧ ನಡೆಸಿದ್ದು, ಹಲವಾರು ಅಪರಾಧ ದಾಖಲೆಗಳು, ಲ್ಯಾಪ್‌ಟಾಪ್‌ಗಳು ಮತ್ತು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದೆ ಎಂದು ಸಿಬಿಐ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

10 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

10 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

11 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

11 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

12 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

12 hours ago