ದೇಶ- ವಿದೇಶ

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.

ದೇಶದ 551 ನಗರಗಳು ಮತ್ತು ವಿದೇಶದ 14 ನಗರಗಳಲ್ಲಿ ಮಧ್ಯಾಹ್ನ 2ರಿಂದ ಆರಂಭವಾಗಿ ಸಂಜೆ 5 ಗಂಟೆ 15 ನಿಮಿಷದವರೆಗೆ ಮರುಪರೀಕ್ಷೆ ನಡೆಯಿತು. ಅಂಗವಿಕಲ ಅಭ್ಯರ್ಥಿಗಳಿಗೆ ಸಂಜೆ 6.20 ರವರೆಗೆ ಪರೀಕ್ಷೆ ಬರೆಯಲು ಅವಕಾಶವಿತ್ತು. ಇಂಗ್ಲಿಷ್ ಸೇರಿದಂತೆ 12 ಭಾರತೀಯ ಭಾಷೆಗಳಲ್ಲಿ ಪರೀಕ್ಷೆ ನಡೆಯಿತು.

ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಪಾರದರ್ಶಕವಾಗಿರುವ ನೀರಿನ ಬಾಟಲಿ, ಮಧುಮೇಹ ಸಮಸ್ಯೆ ಇರುವ ಅಭ್ಯರ್ಥಿಗಳು ಮಧುಮೇಹ ಮಾತ್ರೆಗಳು, ಬಾಳೆಹಣ್ಣು, ಸೇಬು ಮತ್ತು ಕಿತ್ತಳೆ ಮುಂತಾದ ಹಣ್ಣುಗಳನ್ನು ಕೊಂಡೊಯ್ಯಲು ಅವಕಾಶ ನೀಡಲಾಗಿತ್ತು. ಒಟ್ಟು 95,000 ಪರೀಕ್ಷಾ ಕೊಠಡಿಗಳಲ್ಲಿ ಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಒಟ್ಟಾರೆ 1,38,560 ಸಿಸಿಟಿವಿ ಕ್ಯಾಮೆರಾಗಳ ಮೂಲಕ ನೇರ ಕಣ್ಗಾವಲು ಇರಿಸಿದ್ದ ಎನ್ಟಿಎ, ನಕಲು ತಡೆಗಟ್ಟಲು 51,311ಜ್ಯಾಮರ್ಗಳನ್ನು ಹಾಕಿತ್ತು.

ಪ್ರತಿ ಪರೀಕ್ಷಾ ಕೇಂದ್ರದಲ್ಲಿ 40 ರಿಂದ 50 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಪರೀಕ್ಷೆಯನ್ನು ಯಶಸ್ವಿಯಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಜಿಲ್ಲಾಡಳಿತ, ಪೊಲೀಸ್, ಅರೆಸೇನಾ ಪಡೆ, ಭಾರತೀಯ ವಾಯುಪಡೆ ಹಾಗೂ ಅಂಚೆ ಇಲಾಖೆಯ ಸಹಯೋಗವನ್ನು ಪಡೆಯಲಾಗಿತ್ತು ಎಂದು ಎನ್ಟಿಎ ತಿಳಿಸಿದೆ.

ಕಳೆದ ಮೇ 3ರಂದು ನಡೆದಿದ್ದ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ ತೀವ್ರಗೊಂಡು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೂ ಒತ್ತಾಯ ಕೇಳಿಬಂದಿತ್ತು. ತದನಂತರ ಎನ್ಟಿಎ ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಈ ಘಟನೆಗೆ ವಿಷಾದ ವ್ಯಕ್ತಪಡಿಸಿದ್ದ ಕೇಂದ್ರ ಸರ್ಕಾರ, ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ರದ್ದುಗೊಳಿಸಿ, ಮರುಪರೀಕ್ಷೆ ನಡೆಸುವ ನಿರ್ಧಾರ ಕೈಗೊಂಡಿತ್ತು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

12 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

12 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

12 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

12 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

12 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

13 hours ago