ದೇಶ- ವಿದೇಶ

ನೇಪಾಳ ಪ್ರವಾಹ ; ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ಮೃತರ ಸಂಖ್ಯೆ 750 ಕ್ಕೆ ಏರಿಕೆ; 3,044 ನಾಪತ್ತೆ

ಕಠ್ಮಂಡು : ನೇಪಾಳ ಮತ್ತು ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ ಹಿಮಪಾತ ಹಾಗೂ ಹಠಾತ್ ಪ್ರವಾಹದಿಂದಾಗಿ ಭಾರೀ ಸಾವು ನೋವು ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ಟಿಬೆಟ್‌ನಲ್ಲಿ ಕನಿಷ್ಠ 16 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಅಲ್ಲಿ 546 ಮಂದಿ ನಾಪತ್ತೆಯಾಗಿದ್ದಾರೆ. ಎರಡೂ ಪ್ರದೇಶಗಳನ್ನು ಒಟ್ಟುಗೂಡಿಸಿದರೆ ಸಾವಿನ ಸಂಖ್ಯೆ ಕನಿಷ್ಠ 750 ಮತ್ತು ಕಾಣೆಯಾದವರ ಸಂಖ್ಯೆ 3,044 ಆಗಿದೆ. ನೇಪಾಳ ಮತ್ತು ಟಿಬೆಟ್‌ನಲ್ಲಿ ಸುಮಾರು 3,000ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದಾರೆ.

ಆಗಸ್ಟ್ 26 ರ ಬೆಳಿಗ್ಗೆ ಹಿಮಾಲಯದ ಎತ್ತರ ಪ್ರದೇಶದಲ್ಲಿ ಹಿಮನದಿಯ ಒಂದು ದೊಡ್ಡ ಭಾಗ ಕುಸಿದು, ಹಿಮ, ಬಂಡೆ, ಮಣ್ಣು ಮತ್ತು ನೀರಿನ ಭಾರೀ ಪ್ರವಾಹವನ್ನು ಕೆಳಭಾಗದ ನದಿ ಕಣಿವೆಗಳತ್ತ ತಳ್ಳಿತು. ಈ ಪ್ರವಾಹವು ಲ್ಹೆಂಡೆ ಖೋಲಾ ಮೂಲಕ ಭೋಟೆ ಕೋಶಿ ಮತ್ತು ನಂತರ ತ್ರಿಶೂಲಿ ನದಿ ವ್ಯವಸ್ಥೆಯನ್ನು ಪ್ರವೇಶಿಸಿ, ರಸುವಾ, ನುವಾಕೋಟ್ ಮತ್ತು ಧಾದಿಂಗ್ ಜಿಲ್ಲೆಗಳಲ್ಲಿ ಭಾರೀ ವಿನಾಶ ಉಂಟುಮಾಡಿತ್ತು.

ಆಂದೋಲನ ಡೆಸ್ಕ್

Recent Posts

ಪ್ರೇಕ್ಷಕರು ಬದಲಾದಾಗ ಭಾಷೆಯಲ್ಲೂ ಬದಲಾವಣೆ ; ಭಾಗವತ್‌ ಕುರಿತು ಖರ್ಗೆ ವ್ಯಂಗ್ಯ

ಬೆಂಗಳೂರು : ಆರ್‌ಎಸ್‌ಎಸ್ ಸಂಘಟನೆಯ ಕಾರ್ಯವೈಖರಿ ಹಾಗೂ ವಿದೇಶದಲ್ಲಿನ ಅದರ ಚಟುವಟಿಕೆಗಳ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣದಲ್ಲಿ…

1 min ago

ಚಿತ್ರಕೂಟ ; ಮಂದಾಕಿನಿ ನದಿ ಪ್ರವಾಹ ಭೀತಿ

ಚಿತ್ರಕೂಟ : ಮಧ್ಯಪ್ರದೇಶ-ಉತ್ತರ ಪ್ರದೇಶ ಗಡಿಯಲ್ಲಿರುವ ಧಾರ್ಮಿಕ ಕ್ಷೇತ್ರ ಚಿತ್ರಕೂಟದಲ್ಲಿ ಮಂದಾಕಿನಿ ನದಿ ಅಪಾಯಕಾರಿಯಾಗಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ…

1 hour ago

ಕೆಪಿಎಸ್‌ಸಿ ಹಗರಣ : ಐಎಎಸ್‌ ಅಧಿಕಾರಿ ಘ್ಯಾನೇಂದ್ರ ಕುಮಾರ್‌ ಬಂಧನ

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ(ಕೆಪಿಎಸ್‌ಸಿ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಘ್ಯಾನೇಂದ್ರ ಕುಮಾರ್‌ ಗಂಗ್ವಾರ್‌ ಅವರನ್ನು ಸಿಐಡಿ…

2 hours ago

ಹನೂರು ಶೂಟ್‌ಔಟ್ ಪ್ರಕರಣ | ಸ್ಥಳ ಮಹಜರ್, ಸಾಕ್ಷಿ ವಿಚಾರಣೆ

ಹನೂರು : ಕಾವೇರಿ ವನ್ಯಜೀವಿಧಾಮದ ಹೊಲೆಮುರಿದಟ್ಟಿ ಕರಿಕಲ್ಲು ಗುಡ್ಡ ಅರಣ್ಯ ಪ್ರದೇಶದಲ್ಲಿ ಶೂಟ್‌ಔಟ್ ನಡೆದ ಸ್ಥಳಕ್ಕೆ ಪ್ರಕರಣದ ಪ್ರಮುಖ ಸಾಕ್ಷಿ…

5 hours ago

ಬಾಲ್ಯದ ಗೆಳೆಯನಿಗೆ ಡಿಕೆಶಿ ‘ಉಡುಗೊರೆ’ : ರಾಜಕೀಯಕ್ಕೆ ರವಿಚಂದ್ರನ್?

ಸಿಎಂ ಭೇಟಿಯಾಗಿ ಚರ್ಚೆ ; ಖಚಿತಪಡಿಸದ ಕಾಂಗ್ರೆಸ್ ನಾಯಕರು ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕ್ರೇಜಿಸ್ಟಾರ್…

5 hours ago

ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹಲೋತ್‌

ಸಚಿವರಾದ ಕೆಲವೇ ದಿನಗಳಲ್ಲಿ ಸಂಪುಟದಿಂದ ನಾಗೇಂದ್ರ ಹೊರಕ್ಕೆ ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್…

7 hours ago