ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27) ಅಧಿಕಾರ ಸ್ವೀಕರಿಸಿದ್ದಾರೆ.
ಗುರುವಾರ ಬಾಲೇಂದ್ರ ಶಾ ಅವರನ್ನು ರಾಷ್ಟ್ರೀಯ ಸ್ವತಂತ್ರ ಪಕ್ಷವು ತನ್ನ ಸಂಸದೀಯ ಪಕ್ಷದ ನಾಯಕನನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿತ್ತು. ಪಕ್ಷದ ಅಧ್ಯಕ್ಷೆ ರಬಿ ಲಮಿಚಾನೆ ಅವರು ಈ ಹುದ್ದೆಗೆ ಶಾ ಅವರ ಹೆಸರನ್ನು ಪ್ರಸ್ತಾಪಿಸಿದಾಗ ಸರ್ವಾನುಮತದ ಅನುಮೋದನೆ ದೊರಕಿತ್ತು.
ಇತ್ತೀಚೆಗೆ ನೇಪಾಳದ ಸಾರ್ವತ್ರಿಕ ಚುನಾವಣೆಯಲ್ಲಿ ಆರ್ ಎಸ್ ಪಿ ಪಕ್ಷವು ಒಟ್ಟು 275 ಸ್ಥಾನಗಳಲ್ಲಿ 182ರಲ್ಲಿ ಭರ್ಜರಿ ಗೆಲುವು ಸಾಧಿಸಿ ಬಹುಮತ ಪಡೆದಿತ್ತು. ನೇಪಾಳದಲ್ಲಿ ಈ ಹಿಂದಿನ ಸರ್ಕಾರಗಳ ಭ್ರಷ್ಟಾಚಾರವನ್ನು ವಿರೋಧಿಸಿ ಜೆನ್ಝೀ ಹೋರಾಟ ನಡೆಸಿತ್ತು.
ಚುನಾವಣೆಯಲ್ಲಿ ಬಾಲೇಂದ್ರ ಶಾ ಅವರು ನಾಲ್ಕು ಬಾರಿ ಪ್ರಧಾನಿಯಾಗಿದ್ದ ಕೆಪಿ ಶರ್ಮಾ ಒಲಿ ಅವರನ್ನು ಪರಾಜಯಗೊಳಿಸಿ ಗೆಲುವು ಸಾಧಿಸಿದ್ದರು. ನೇಪಾಳ ಚುನಾವಣೆಯಲ್ಲಿ ಆರ್ ಎಸ್ ಪಿ ಪ್ರಚಂಡ ಗೆಲುವು ಸಾಧಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿತ್ತು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…