ಕಠ್ಮಂಡು : ರಾಜಕೀಯ ಆಸ್ಥಿರತೆಗೆ ಕಾರಣವಾಗಿದ್ದ ಭಾರತದ ನೆರೆಯ ರಾಷ್ಟ್ರ ನೇಪಾಳ ಸಹಜ ಸ್ಥಿತಿಗೆ ಮರಳುತ್ತಿದ್ದು, ಇದೀಗ ಕರ್ಫ್ಯೂವನ್ನು ತೆಗೆದುಹಾಕಲಾಗಿದೆ.
ಜೆನ್ ಝೀ ಪ್ರತಿಭಟನೆ ಹಿಂಸಾರೂಪ ಪಡೆದು ಪ್ರಧಾನಿ ರಾಜೀನಾಮೆ, ಹಲವು ಸಾವು ನೋವು ಸಂಭವಿಸಿ ಪ್ರಕ್ಷುಬ್ದ ಸ್ಥಿತಿಗೆ ತಿರುಗಿದ್ದ ನೇಪಾಳದಲ್ಲಿ ಶಾಂತಿ ನಿಧಾನವಾಗಿ ಮರಳುತ್ತಿದೆ.
ನೇಪಾಳದ ಮೊದಲ ಮಹಿಳಾ ಪ್ರಧಾನಿಯಾಗಿ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ರಾತ್ರಿ ಪ್ರಮಾಣವಚನ ಸ್ವೀಕರಿಸಿದ ನಂತರ ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಬೆಳಿಗ್ಗೆ ೫ ಗಂಟೆಯಿಂದ ಕರ್ಫ್ಯೂವನ್ನು ತೆಗೆದುಹಾಕಲಾಗಿದೆ. ಮಧ್ಯಂತರ ಸರ್ಕಾರ ರಚನೆಯಾದ ನಂತರ, ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭದ್ರತಾ ಪಡೆಗಳು ಈ ನಿರ್ಧಾರವನ್ನು ತೆಗೆದುಕೊಂಡಿವೆ. ಆದರೆ, ನೇಪಾಳದ ಬೀದಿಗಳಲ್ಲಿ ಸೈನ್ಯದ ಉಪಸ್ಥಿತಿಯು ಇನ್ನೂ ಕೆಲವು ದಿನಗಳವರೆಗೆ ಉಳಿಯುವ ನಿರೀಕ್ಷೆಯಿದೆ.
ಸುಶೀಲಾ ಕರ್ಕಿ ಅವರು ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಿಯಾದ ನಂತರ, ನೇಪಾಳದ ಜನರು ಭ್ರಷ್ಟಾಚಾರ ಮುಕ್ತ ಆಡಳಿತದ ನಿರೀಕ್ಷೆ ಮಾತ್ರವಲ್ಲದೇ, ಈ ಹಿಂದೆ ಭ್ರಷ್ಟಾಚಾರ ಆರೋಪಗಳಲ್ಲಿ ಭಾಗಿಯಾಗಿರುವ ಮಾಜಿ ಪ್ರಧಾನಿ ಸೇರಿದಂತೆ ಎಲ್ಲಾ ಸಚಿವರ ಆಸ್ತಿಯನ್ನು ತನಿಖೆ ಮಾಡುವುದರ ಜೊತೆಗೆ ನೇಪಾಳವನ್ನು ಭ್ರಷ್ಟಾಚಾರ ಮುಕ್ತವನ್ನಾಗಿಸುವ ಭರವಸೆಯಲ್ಲಿದ್ದಾರೆ.
ನೇಪಾಳ ಸಹಜ ಸ್ಥಿತಿಗೆ ; ಕರ್ಫ್ಯೂ ತೆರವು
ನೇಪಾಳದಲ್ಲಿ ಜೆನ್ ಝೀ ಯುವ ಜನರು ನಡೆಸಿದ ಪ್ರತಿಭಟನೆಗಳ ಹಿಂಸಾಚಾರದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ ೫೧ಕ್ಕೆ ಏರಿಕೆಯಾಗಿದೆ. ಇದರಲ್ಲಿ ೨೧ ಪ್ರತಿಭಟನಾಕಾರರು, ೯ ಖೈದಿಗಳು, ೩ ಪೊಲೀಸರು ಮತ್ತು ೧೮ ಇತರ ಜನರು ಸೇರಿದ್ದಾರೆ. ಇನ್ನೊಂದು ಮುಖ್ಯ ಸಂಗತಿ ಅಂದರೆ, ಈ ಹಿಂಸಾಚಾರದಿಂದಾಗಿ ನೇಪಾಳದ ಹೋಟೆಲ್ ಉದ್ಯಮದ ಮೇಲೆ ಅತಿ ದೊಡ್ಡ ಪರಿಣಾಮ ಬೀರಿದ್ದು, ವರದಿಗಳ ಪ್ರಕಾರ, ನೂರಾರು ಹೋಟೆಲ್ಗಳಲ್ಲಿ ನಡೆದ ವಿಧ್ವಂಸಕ ಕೃತ್ಯ, ಲೂಟಿ ಮತ್ತು ಬೆಂಕಿ ಹಚ್ಚುವಿಕೆ ಘಟನೆಗಳಿಂದಾಗಿ ಹೋಟೆಲ್ ಉದ್ಯಮವು ಸುಮಾರು ೨,೫೦೦ ಕೋಟಿ ರೂಪಾಯಿಗಳಿಗೂ ಹೆಚ್ಚು ನಷ್ಟವನ್ನು ಅನುಭವಿಸಿದೆ ಎಂದು ತಿಳಿದು ಬಂದಿದೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…