ದೇಶ- ವಿದೇಶ

ನೇಪಾಳ ಸಹಜ ಸ್ಥಿತಿಗೆ ; ಕರ್ಫ್ಯೂ ತೆರವು

ಕಠ್ಮಂಡು : ರಾಜಕೀಯ ಆಸ್ಥಿರತೆಗೆ ಕಾರಣವಾಗಿದ್ದ ಭಾರತದ ನೆರೆಯ ರಾಷ್ಟ್ರ ನೇಪಾಳ ಸಹಜ ಸ್ಥಿತಿಗೆ ಮರಳುತ್ತಿದ್ದು, ಇದೀಗ ಕರ್ಫ್ಯೂವನ್ನು ತೆಗೆದುಹಾಕಲಾಗಿದೆ.

ಜೆನ್ ಝೀ ಪ್ರತಿಭಟನೆ ಹಿಂಸಾರೂಪ ಪಡೆದು ಪ್ರಧಾನಿ ರಾಜೀನಾಮೆ, ಹಲವು ಸಾವು ನೋವು ಸಂಭವಿಸಿ ಪ್ರಕ್ಷುಬ್ದ ಸ್ಥಿತಿಗೆ ತಿರುಗಿದ್ದ ನೇಪಾಳದಲ್ಲಿ ಶಾಂತಿ ನಿಧಾನವಾಗಿ ಮರಳುತ್ತಿದೆ.

ನೇಪಾಳದ ಮೊದಲ ಮಹಿಳಾ ಪ್ರಧಾನಿಯಾಗಿ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ರಾತ್ರಿ ಪ್ರಮಾಣವಚನ ಸ್ವೀಕರಿಸಿದ ನಂತರ ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಬೆಳಿಗ್ಗೆ ೫ ಗಂಟೆಯಿಂದ ಕರ್ಫ್ಯೂವನ್ನು ತೆಗೆದುಹಾಕಲಾಗಿದೆ. ಮಧ್ಯಂತರ ಸರ್ಕಾರ ರಚನೆಯಾದ ನಂತರ, ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭದ್ರತಾ ಪಡೆಗಳು ಈ ನಿರ್ಧಾರವನ್ನು ತೆಗೆದುಕೊಂಡಿವೆ. ಆದರೆ, ನೇಪಾಳದ ಬೀದಿಗಳಲ್ಲಿ ಸೈನ್ಯದ ಉಪಸ್ಥಿತಿಯು ಇನ್ನೂ ಕೆಲವು ದಿನಗಳವರೆಗೆ ಉಳಿಯುವ ನಿರೀಕ್ಷೆಯಿದೆ.

ಸುಶೀಲಾ ಕರ್ಕಿ ಅವರು ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಿಯಾದ ನಂತರ, ನೇಪಾಳದ ಜನರು ಭ್ರಷ್ಟಾಚಾರ ಮುಕ್ತ ಆಡಳಿತದ ನಿರೀಕ್ಷೆ ಮಾತ್ರವಲ್ಲದೇ, ಈ ಹಿಂದೆ ಭ್ರಷ್ಟಾಚಾರ ಆರೋಪಗಳಲ್ಲಿ ಭಾಗಿಯಾಗಿರುವ ಮಾಜಿ ಪ್ರಧಾನಿ ಸೇರಿದಂತೆ ಎಲ್ಲಾ ಸಚಿವರ ಆಸ್ತಿಯನ್ನು ತನಿಖೆ ಮಾಡುವುದರ ಜೊತೆಗೆ ನೇಪಾಳವನ್ನು ಭ್ರಷ್ಟಾಚಾರ ಮುಕ್ತವನ್ನಾಗಿಸುವ ಭರವಸೆಯಲ್ಲಿದ್ದಾರೆ.

ನೇಪಾಳ ಸಹಜ ಸ್ಥಿತಿಗೆ ; ಕರ್ಫ್ಯೂ ತೆರವು
ನೇಪಾಳದಲ್ಲಿ ಜೆನ್ ಝೀ ಯುವ ಜನರು ನಡೆಸಿದ ಪ್ರತಿಭಟನೆಗಳ ಹಿಂಸಾಚಾರದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ ೫೧ಕ್ಕೆ ಏರಿಕೆಯಾಗಿದೆ. ಇದರಲ್ಲಿ ೨೧ ಪ್ರತಿಭಟನಾಕಾರರು, ೯ ಖೈದಿಗಳು, ೩ ಪೊಲೀಸರು ಮತ್ತು ೧೮ ಇತರ ಜನರು ಸೇರಿದ್ದಾರೆ. ಇನ್ನೊಂದು ಮುಖ್ಯ ಸಂಗತಿ ಅಂದರೆ, ಈ ಹಿಂಸಾಚಾರದಿಂದಾಗಿ ನೇಪಾಳದ ಹೋಟೆಲ್ ಉದ್ಯಮದ ಮೇಲೆ ಅತಿ ದೊಡ್ಡ ಪರಿಣಾಮ ಬೀರಿದ್ದು, ವರದಿಗಳ ಪ್ರಕಾರ, ನೂರಾರು ಹೋಟೆಲ್‌ಗಳಲ್ಲಿ ನಡೆದ ವಿಧ್ವಂಸಕ ಕೃತ್ಯ, ಲೂಟಿ ಮತ್ತು ಬೆಂಕಿ ಹಚ್ಚುವಿಕೆ ಘಟನೆಗಳಿಂದಾಗಿ ಹೋಟೆಲ್ ಉದ್ಯಮವು ಸುಮಾರು ೨,೫೦೦ ಕೋಟಿ ರೂಪಾಯಿಗಳಿಗೂ ಹೆಚ್ಚು ನಷ್ಟವನ್ನು ಅನುಭವಿಸಿದೆ ಎಂದು ತಿಳಿದು ಬಂದಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

6 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

7 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

7 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

8 hours ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

16 hours ago