ಕಠ್ಮಂಡು : ರಾಜಕೀಯ ಆಸ್ಥಿರತೆಗೆ ಕಾರಣವಾಗಿದ್ದ ಭಾರತದ ನೆರೆಯ ರಾಷ್ಟ್ರ ನೇಪಾಳ ಸಹಜ ಸ್ಥಿತಿಗೆ ಮರಳುತ್ತಿದ್ದು, ಇದೀಗ ಕರ್ಫ್ಯೂವನ್ನು ತೆಗೆದುಹಾಕಲಾಗಿದೆ.
ಜೆನ್ ಝೀ ಪ್ರತಿಭಟನೆ ಹಿಂಸಾರೂಪ ಪಡೆದು ಪ್ರಧಾನಿ ರಾಜೀನಾಮೆ, ಹಲವು ಸಾವು ನೋವು ಸಂಭವಿಸಿ ಪ್ರಕ್ಷುಬ್ದ ಸ್ಥಿತಿಗೆ ತಿರುಗಿದ್ದ ನೇಪಾಳದಲ್ಲಿ ಶಾಂತಿ ನಿಧಾನವಾಗಿ ಮರಳುತ್ತಿದೆ.
ನೇಪಾಳದ ಮೊದಲ ಮಹಿಳಾ ಪ್ರಧಾನಿಯಾಗಿ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ರಾತ್ರಿ ಪ್ರಮಾಣವಚನ ಸ್ವೀಕರಿಸಿದ ನಂತರ ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಬೆಳಿಗ್ಗೆ ೫ ಗಂಟೆಯಿಂದ ಕರ್ಫ್ಯೂವನ್ನು ತೆಗೆದುಹಾಕಲಾಗಿದೆ. ಮಧ್ಯಂತರ ಸರ್ಕಾರ ರಚನೆಯಾದ ನಂತರ, ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭದ್ರತಾ ಪಡೆಗಳು ಈ ನಿರ್ಧಾರವನ್ನು ತೆಗೆದುಕೊಂಡಿವೆ. ಆದರೆ, ನೇಪಾಳದ ಬೀದಿಗಳಲ್ಲಿ ಸೈನ್ಯದ ಉಪಸ್ಥಿತಿಯು ಇನ್ನೂ ಕೆಲವು ದಿನಗಳವರೆಗೆ ಉಳಿಯುವ ನಿರೀಕ್ಷೆಯಿದೆ.
ಸುಶೀಲಾ ಕರ್ಕಿ ಅವರು ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಿಯಾದ ನಂತರ, ನೇಪಾಳದ ಜನರು ಭ್ರಷ್ಟಾಚಾರ ಮುಕ್ತ ಆಡಳಿತದ ನಿರೀಕ್ಷೆ ಮಾತ್ರವಲ್ಲದೇ, ಈ ಹಿಂದೆ ಭ್ರಷ್ಟಾಚಾರ ಆರೋಪಗಳಲ್ಲಿ ಭಾಗಿಯಾಗಿರುವ ಮಾಜಿ ಪ್ರಧಾನಿ ಸೇರಿದಂತೆ ಎಲ್ಲಾ ಸಚಿವರ ಆಸ್ತಿಯನ್ನು ತನಿಖೆ ಮಾಡುವುದರ ಜೊತೆಗೆ ನೇಪಾಳವನ್ನು ಭ್ರಷ್ಟಾಚಾರ ಮುಕ್ತವನ್ನಾಗಿಸುವ ಭರವಸೆಯಲ್ಲಿದ್ದಾರೆ.
ನೇಪಾಳ ಸಹಜ ಸ್ಥಿತಿಗೆ ; ಕರ್ಫ್ಯೂ ತೆರವು
ನೇಪಾಳದಲ್ಲಿ ಜೆನ್ ಝೀ ಯುವ ಜನರು ನಡೆಸಿದ ಪ್ರತಿಭಟನೆಗಳ ಹಿಂಸಾಚಾರದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ ೫೧ಕ್ಕೆ ಏರಿಕೆಯಾಗಿದೆ. ಇದರಲ್ಲಿ ೨೧ ಪ್ರತಿಭಟನಾಕಾರರು, ೯ ಖೈದಿಗಳು, ೩ ಪೊಲೀಸರು ಮತ್ತು ೧೮ ಇತರ ಜನರು ಸೇರಿದ್ದಾರೆ. ಇನ್ನೊಂದು ಮುಖ್ಯ ಸಂಗತಿ ಅಂದರೆ, ಈ ಹಿಂಸಾಚಾರದಿಂದಾಗಿ ನೇಪಾಳದ ಹೋಟೆಲ್ ಉದ್ಯಮದ ಮೇಲೆ ಅತಿ ದೊಡ್ಡ ಪರಿಣಾಮ ಬೀರಿದ್ದು, ವರದಿಗಳ ಪ್ರಕಾರ, ನೂರಾರು ಹೋಟೆಲ್ಗಳಲ್ಲಿ ನಡೆದ ವಿಧ್ವಂಸಕ ಕೃತ್ಯ, ಲೂಟಿ ಮತ್ತು ಬೆಂಕಿ ಹಚ್ಚುವಿಕೆ ಘಟನೆಗಳಿಂದಾಗಿ ಹೋಟೆಲ್ ಉದ್ಯಮವು ಸುಮಾರು ೨,೫೦೦ ಕೋಟಿ ರೂಪಾಯಿಗಳಿಗೂ ಹೆಚ್ಚು ನಷ್ಟವನ್ನು ಅನುಭವಿಸಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…