ದೇಶ- ವಿದೇಶ

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ

ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ ನೂರಾರು ಜನ ಜೀವ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಇಂತಹ ಕರುಣಾಜನಕ ಹಾಗೂ ನೋವಿನ ಪರಿಸ್ಥಿತಿಯಲ್ಲೂ ಕೆಲವರು ತಮ್ಮ ಕ್ರೂರ ಮನಸ್ಥಿತಿಯನ್ನು ಮೆರೆದಿದ್ದಾರೆ.

ಪ್ರವಾಹದ ನೀರಿನಲ್ಲಿ ಕೊಚ್ಚಿಕೊಂಡು ಬಂದ ಮೃತದೇಹದ ಮೇಲಿದ್ದ ಆಭರಣಗಳನ್ನು ಕಳವು ಮಾಡುವ ಮೂಲಕ ಅಮಾನವೀಯತೆಯ ಪರಮಾವಧಿ ಮೆರೆದಿರುವ ಕೃತ್ಯವೊಂದು ಕ್ಯಾಮೆರಾಗೆ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ನೇಪಾಳದ ನದಿ ತೀರದಲ್ಲಿ ಪ್ರವಾಹದ ಅಬ್ಬರಕ್ಕೆ ಸಿಲುಕಿ ಮೃತಪಟ್ಟ ಮಹಿಳೆಯೊಬ್ಬರ ಮೃತದೇಹ ತೇಲಿಬಂದಿತ್ತು. ಈ ವೇಳೆ ಸ್ಥಳದಲ್ಲಿದ್ದ ಕೆಲಕಾಲ ಕರುಣೆ ತೋರುವಂತೆ ನಟಿಸಿದ ವ್ಯಕ್ತಿಗಳು, ವಾಸ್ತವದಲ್ಲಿ ಮೃತದೇಹದ ಜೊತೆ ವಿಕೃತವಾಗಿ ವರ್ತಿಸಿದ್ದಾರೆ.

ಕೂದಲು ಹಿಡಿದು ಎಳೆದ ವಿಕೃತಿ:
ಪ್ರವಾಹದಲ್ಲಿ ತೇಲಿಬಂದ ಮಹಿಳೆಯ ಮೃತದೇಹವನ್ನು ದಡಕ್ಕೆ ಸೇರಿಸುವ ನೆಪದಲ್ಲಿ, ಆಕೆಯ ತಲೆಯ ಕೂದಲನ್ನು ಹಿಡಿದು ಬಲವಂತವಾಗಿ ಎಳೆದುಕೊಂಡು ಬರಲಾಗಿದೆ.

ಆಭರಣ ಕಳವು:
ಅಸಹಾಯಕ ಸ್ಥಿತಿಯಲ್ಲಿದ್ದ ಮೃತದೇಹದ ಕಿವಿಯಲ್ಲಿದ್ದ ಸೋಂಬಿನ/ಚಿನ್ನದ ಓಲೆಗಳನ್ನು ಕೀಳಲು ಈ ನೀಚರು ಈ ಕೃತ್ಯ ಎಸೆಗಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ

ಮೂಕಪ್ರೇಕ್ಷಕರಾದ ಜನ:
ಈ ಅಮಾನವೀಯ ಕೃತ್ಯ ನಡೆಯುತ್ತಿದ್ದರೂ, ಸುತ್ತಮುತ್ತಲಿನಲ್ಲಿ ನಿಂತಿದ್ದ ಕೆಲವರು ಇದನ್ನು ತಡೆಯುವ ಬದಲು ತಮ್ಮ ಮೊಬೈಲ್ ಕ್ಯಾಮೆರಾಗಳಲ್ಲಿ ವೀಡಿಯೋ ಚಿತ್ರೀಕರಿಸುತ್ತಾ ನಿಂತಿರುವುದು ಮತ್ತಷ್ಟು ಆಘಾತಕಾರಿ ಸಂಗತಿಯಾಗಿದೆ.

ಎಚ್ಚೆತ್ತ ಪೊಲೀಸ್ ಆಡಳಿತ : ಇಬ್ಬರು ಆರೋಪಿಗಳ ಬಂಧನ
ಈ ಅಸಹ್ಯಕರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಬೆಂಕಿಯಂತೆ ಹಬ್ಬುತ್ತಿದ್ದಂತೆ ನೇಪಾಳ ಪೊಲೀಸರು ತಕ್ಷಣವೇ ಎಚ್ಚೆತ್ತುಕೊಂಡಿದ್ದಾರೆ. ವಿಡಿಯೋ ಆಧರಿಸಿ ತನಿಖೆ ಕೈಗೊಂಡ ಪೊಲೀಸರು, ಮೃತಳ ಕಿವಿಯೋಲೆ ಕಳವಿಗೆ ಯತ್ನಿಸಿದ ಪಾಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ.

ಪ್ರಕೃತಿ ವಿಕೋಪದಂತಹ ದಾರುಣ ಸಂದರ್ಭದಲ್ಲೂ ಮಾನವೀಯತೆಯನ್ನು ಮರೆತು ಸತ್ತವರ ಮೇಲೂ ಕಣ್ಣಿಡುವ ಇಂತಹ ವಿಕೃತಿಗಳಿಗೆ ಕಾನೂನಿನ ಮೂಲಕ ತಕ್ಕ ಶಾಸ್ತಿ ಮಾಡಬೇಕು ಎಂದು ಸಾರ್ವಜನಿಕ ವಲಯದಿಂದ ತೀವ್ರ ಒತ್ತಡ ಕೇಳಿಬಂದಿದೆ.

ಆಂದೋಲನ ಡೆಸ್ಕ್

Recent Posts

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

6 mins ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

58 mins ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

6 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

9 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

9 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

10 hours ago