ಜೆರುಸಲೆಮ್ : ಪಶ್ಚಿಮ ಏಷ್ಯಾದ ಸಂಘರ್ಷ ದಿನೇ ದಿನೇ ಹೆಚ್ಚುತ್ತಿದೆ. ಈ ವೇಳೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹತ್ಯೆ ಮಾಡಲಾಗಿದೆ ಎಂಬ ಇರಾನ್ ಹೇಳಿಕೆಯನ್ನು ಇಸ್ರೇಲ್ ಕಚೇರಿ ಅಲ್ಲೆಗಳಿದಿದೆ.
ಇಸ್ರೇಲ್ ದಾಳಿ ಬೆನ್ನಲ್ಲೇ ಇರಾನ್ ಸಹ ದಾಳಿಯನ್ನು ಮುಂದುವರೆಸಿದೆ. ಏತನ್ಮಧ್ಯೆ, ನೆತನ್ಯಾಹು ಹತ್ಯೆ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ದೃಶ್ಯವೊಂದು ಹರಿದಾಡುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಇಸ್ರೇಲ್ ಕಚೇರಿ, ಇದೆಲ್ಲ ಸುಳ್ಳು ಸುದ್ದಿ, ಪ್ರಧಾನಿ ನೆತನ್ಯಾಹು ಅವರು ಕ್ಷೇಮವಾಗಿದ್ದಾರೆ ಎಂದು ಸ್ಪಷ್ಟಪಡಿಸಿದೆ.
ಸಂಘರ್ಷ ಕುರಿತು ನೆತನ್ಯಾಹು ವಿಡಿಯೊಂದನ್ನು ಮಾಧ್ಯಮಗಳಲ್ಲಿ ಪ್ರಕಟಿಸಲಾಗಿತ್ತು. ವಿಡಿಯೋ ಆರಂಭಧಲ್ಲಿ ನೆತನ್ಯಾಹು ಅವರ ಬಲಗೈಯಲ್ಲಿ ಆರು ಬೆರಳು ಕಾಣುತ್ತಿವೆ ಎಂದು ಕೆಲವರು ಪೋಸ್ಟ್ ಮಾಡಿದರೆ, ಇದು ಎಐ ಮೂಲಕ ಸೃಜಿಸಿರಬಹುದಾದ ವಿಡಿಯೊ ಎಂದು ಇನ್ನಷ್ಟು ಮಂದಿ ಅಭಿಪ್ರಾಯಪಟ್ಟಿದ್ದರು.
ಸಾಕಷ್ಟು ನೆಟ್ಟಿಗರು ನೆತನ್ಯಾಹು ವಿಡಿಯೊದಲ್ಲಿ ಇಸ್ರೇಲ್ ಧ್ವಜಗಳು ಸ್ಥಿರವಾಗಿದೆ. ಪರದೆ ಗಾಳಿಗೆ ಅಲುಗಾಡುತ್ತಿದೆ. ಇದು ಎಐ ಸುಳ್ಳು ಸುದ್ದಿ ಎಂದಿದ್ದಾರೆ. ಆದಾಗ್ಯೂ ಹಲವರು ಖಮೇನಿ ಹತ್ಯೆಗೆ ಪ್ರತೀಕಾರವಾಗಿ ನೆತನ್ಯಾಹು ಅನ್ನು ಹತ್ಯೆ ಮಾಡಲಾಗಿದೆ ಎಂದು ಪೋಸ್ಟ್ ಮಾಡುತ್ತಿದ್ದಾರೆ. ಹೀಗಾಗಿ ನೇತನ್ಯಾಹು ಸಾವಿನ ವದಂತಿ ಹರಿದಾಡುತ್ತಿದೆ.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…