ಜೆರುಸಲೆಮ್ : ಪಶ್ಚಿಮ ಏಷ್ಯಾದ ಸಂಘರ್ಷ ದಿನೇ ದಿನೇ ಹೆಚ್ಚುತ್ತಿದೆ. ಈ ವೇಳೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹತ್ಯೆ ಮಾಡಲಾಗಿದೆ ಎಂಬ ಇರಾನ್ ಹೇಳಿಕೆಯನ್ನು ಇಸ್ರೇಲ್ ಕಚೇರಿ ಅಲ್ಲೆಗಳಿದಿದೆ.
ಇಸ್ರೇಲ್ ದಾಳಿ ಬೆನ್ನಲ್ಲೇ ಇರಾನ್ ಸಹ ದಾಳಿಯನ್ನು ಮುಂದುವರೆಸಿದೆ. ಏತನ್ಮಧ್ಯೆ, ನೆತನ್ಯಾಹು ಹತ್ಯೆ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ದೃಶ್ಯವೊಂದು ಹರಿದಾಡುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಇಸ್ರೇಲ್ ಕಚೇರಿ, ಇದೆಲ್ಲ ಸುಳ್ಳು ಸುದ್ದಿ, ಪ್ರಧಾನಿ ನೆತನ್ಯಾಹು ಅವರು ಕ್ಷೇಮವಾಗಿದ್ದಾರೆ ಎಂದು ಸ್ಪಷ್ಟಪಡಿಸಿದೆ.
ಸಂಘರ್ಷ ಕುರಿತು ನೆತನ್ಯಾಹು ವಿಡಿಯೊಂದನ್ನು ಮಾಧ್ಯಮಗಳಲ್ಲಿ ಪ್ರಕಟಿಸಲಾಗಿತ್ತು. ವಿಡಿಯೋ ಆರಂಭಧಲ್ಲಿ ನೆತನ್ಯಾಹು ಅವರ ಬಲಗೈಯಲ್ಲಿ ಆರು ಬೆರಳು ಕಾಣುತ್ತಿವೆ ಎಂದು ಕೆಲವರು ಪೋಸ್ಟ್ ಮಾಡಿದರೆ, ಇದು ಎಐ ಮೂಲಕ ಸೃಜಿಸಿರಬಹುದಾದ ವಿಡಿಯೊ ಎಂದು ಇನ್ನಷ್ಟು ಮಂದಿ ಅಭಿಪ್ರಾಯಪಟ್ಟಿದ್ದರು.
ಸಾಕಷ್ಟು ನೆಟ್ಟಿಗರು ನೆತನ್ಯಾಹು ವಿಡಿಯೊದಲ್ಲಿ ಇಸ್ರೇಲ್ ಧ್ವಜಗಳು ಸ್ಥಿರವಾಗಿದೆ. ಪರದೆ ಗಾಳಿಗೆ ಅಲುಗಾಡುತ್ತಿದೆ. ಇದು ಎಐ ಸುಳ್ಳು ಸುದ್ದಿ ಎಂದಿದ್ದಾರೆ. ಆದಾಗ್ಯೂ ಹಲವರು ಖಮೇನಿ ಹತ್ಯೆಗೆ ಪ್ರತೀಕಾರವಾಗಿ ನೆತನ್ಯಾಹು ಅನ್ನು ಹತ್ಯೆ ಮಾಡಲಾಗಿದೆ ಎಂದು ಪೋಸ್ಟ್ ಮಾಡುತ್ತಿದ್ದಾರೆ. ಹೀಗಾಗಿ ನೇತನ್ಯಾಹು ಸಾವಿನ ವದಂತಿ ಹರಿದಾಡುತ್ತಿದೆ.
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…
ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…
ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…
ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…