ಜೆರುಸಲೆಮ್ : ಪಶ್ಚಿಮ ಏಷ್ಯಾದ ಸಂಘರ್ಷ ದಿನೇ ದಿನೇ ಹೆಚ್ಚುತ್ತಿದೆ. ಈ ವೇಳೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹತ್ಯೆ ಮಾಡಲಾಗಿದೆ ಎಂಬ ಇರಾನ್ ಹೇಳಿಕೆಯನ್ನು ಇಸ್ರೇಲ್ ಕಚೇರಿ ಅಲ್ಲೆಗಳಿದಿದೆ.
ಇಸ್ರೇಲ್ ದಾಳಿ ಬೆನ್ನಲ್ಲೇ ಇರಾನ್ ಸಹ ದಾಳಿಯನ್ನು ಮುಂದುವರೆಸಿದೆ. ಏತನ್ಮಧ್ಯೆ, ನೆತನ್ಯಾಹು ಹತ್ಯೆ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ದೃಶ್ಯವೊಂದು ಹರಿದಾಡುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಇಸ್ರೇಲ್ ಕಚೇರಿ, ಇದೆಲ್ಲ ಸುಳ್ಳು ಸುದ್ದಿ, ಪ್ರಧಾನಿ ನೆತನ್ಯಾಹು ಅವರು ಕ್ಷೇಮವಾಗಿದ್ದಾರೆ ಎಂದು ಸ್ಪಷ್ಟಪಡಿಸಿದೆ.
ಸಂಘರ್ಷ ಕುರಿತು ನೆತನ್ಯಾಹು ವಿಡಿಯೊಂದನ್ನು ಮಾಧ್ಯಮಗಳಲ್ಲಿ ಪ್ರಕಟಿಸಲಾಗಿತ್ತು. ವಿಡಿಯೋ ಆರಂಭಧಲ್ಲಿ ನೆತನ್ಯಾಹು ಅವರ ಬಲಗೈಯಲ್ಲಿ ಆರು ಬೆರಳು ಕಾಣುತ್ತಿವೆ ಎಂದು ಕೆಲವರು ಪೋಸ್ಟ್ ಮಾಡಿದರೆ, ಇದು ಎಐ ಮೂಲಕ ಸೃಜಿಸಿರಬಹುದಾದ ವಿಡಿಯೊ ಎಂದು ಇನ್ನಷ್ಟು ಮಂದಿ ಅಭಿಪ್ರಾಯಪಟ್ಟಿದ್ದರು.
ಸಾಕಷ್ಟು ನೆಟ್ಟಿಗರು ನೆತನ್ಯಾಹು ವಿಡಿಯೊದಲ್ಲಿ ಇಸ್ರೇಲ್ ಧ್ವಜಗಳು ಸ್ಥಿರವಾಗಿದೆ. ಪರದೆ ಗಾಳಿಗೆ ಅಲುಗಾಡುತ್ತಿದೆ. ಇದು ಎಐ ಸುಳ್ಳು ಸುದ್ದಿ ಎಂದಿದ್ದಾರೆ. ಆದಾಗ್ಯೂ ಹಲವರು ಖಮೇನಿ ಹತ್ಯೆಗೆ ಪ್ರತೀಕಾರವಾಗಿ ನೆತನ್ಯಾಹು ಅನ್ನು ಹತ್ಯೆ ಮಾಡಲಾಗಿದೆ ಎಂದು ಪೋಸ್ಟ್ ಮಾಡುತ್ತಿದ್ದಾರೆ. ಹೀಗಾಗಿ ನೇತನ್ಯಾಹು ಸಾವಿನ ವದಂತಿ ಹರಿದಾಡುತ್ತಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…