ದೇಶ- ವಿದೇಶ

ಮೂರು ರಾಜ್ಯಗಳಿಗೆ ರಾಜ್ಯಪಾಲರ ನೇಮಕ ಮಾಡಿ ರಾಷ್ಟ್ರಪತಿ ಆದೇಶ

ಹೊಸದಿಲ್ಲಿ : ಹರಿಯಾಣ ಮತ್ತು ಗೋವಾಕ್ಕೆ ಹೊಸ ರಾಜ್ಯಪಾಲರನ್ನು ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಕ್ಕೆ ಹೊಸ ಲೆಫ್ಟಿನೆಂಟ್ ಗವರ್ನರ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಆದೇಶ ಹೊರಡಿಸಿದ್ದಾರೆ.

ಪುಸಪತಿ ಅಶೋಕ್ ಗಜಪತಿ ರಾಜು ಗೋವಾ ರಾಜ್ಯಪಾಲರಾಗಿ ನೇಮಿಸಲಾಗಿದ್ದು, ಪ್ರೊ. ಆಶಿಮ್ ಕುಮಾರ್ ಘೋಷ್ ಅವರನ್ನು ಹರಿಯಾಣ ರಾಜ್ಯಪಾಲರಾಗಿ ನೇಮಿಸಲಾಗಿದೆ ಎಂದು ರಾಷ್ಟ್ರಪತಿ ಭವನದ ಹೇಳಿಕೆಯಲ್ಲಿ ತಿಳಿಸಿದೆ.

ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಬ್ರಿಗೇಡಿಯರ್ ಬಿಡಿ ಮಿಶ್ರಾ (ನಿವೃತ್ತ) ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಮಾಜಿ ಉಪಮುಖ್ಯಮಂತ್ರಿ ಕವಿಂದರ್ ಗುಪ್ತಾ ಅವರನ್ನು ಲಡಾಖ್‌ನ ಹೊಸ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿದೆ. ಎಲ್ಲಾ ನೇಮಕಾತಿಗಳು ನೇಮಕಗೊಂಡವರು ತಮ್ಮ ಕಚೇರಿಗಳ ಉಸ್ತುವಾರಿ ವಹಿಸಿಕೊಂಡ ದಿನಾಂಕದಿಂದ ಜಾರಿಗೆ ಬರುತ್ತವೆ.

ಪುಸಪತಿ ಅಶೋಕ್ ಗಜಪತಿ ರಾಜು: ಆಂಧ್ರಪ್ರದೇಶದ ವಿಜಯನಗರದ ರಾಜಮನೆತನದ ಪುಸಪತಿ ಕುಟುಂಬದಲ್ಲಿ ಜನಿಸಿದ ಪುಸಪತಿ ಅಶೋಕ್ ಗಜಪತಿ ರಾಜು ತೆಲುಗು ದೇಶಂ ಪಕ್ಷದ ಹಿರಿಯ ನಾಯಕ. ಏಳು ಬಾರಿ ಶಾಸಕರಾಗಿರುವ ಅವರು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಅಧಿಕಾರ ನಡೆಸಿದ ಅನುಭವ ಇದೆ.

2014 ರಲ್ಲಿ ವಿಜಯನಗರಂ ಲೋಕಸಭಾ ಸ್ಥಾನವನ್ನು ಗೆದ್ದ ನಂತರ, ರಾಜು ಮೊದಲ ಮೋದಿ ಸಂಪುಟದಲ್ಲಿ ಸುಮಾರು ನಾಲ್ಕು ವರ್ಷಗಳ ಕಾಲ ಕೇಂದ್ರ ನಾಗರಿಕ ವಿಮಾನಯಾನ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಆಂಧ್ರಪ್ರದೇಶದ ವಿಶೇಷ ಸ್ಥಾನಮಾನಕ್ಕೆ ಸಂಬಂಧಿಸಿದ ವಿವಾದದಿಂದಾಗಿ ಅವರು ಅಂತಿಮವಾಗಿ ರಾಜೀನಾಮೆ ನೀಡಿದ್ದರು.

ಆಂದೋಲನ ಡೆಸ್ಕ್

Recent Posts

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

28 mins ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

53 mins ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

57 mins ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

1 hour ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

1 hour ago

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

4 hours ago