ದೇಶ- ವಿದೇಶ

ಮೂರು ರಾಜ್ಯಗಳಿಗೆ ರಾಜ್ಯಪಾಲರ ನೇಮಕ ಮಾಡಿ ರಾಷ್ಟ್ರಪತಿ ಆದೇಶ

ಹೊಸದಿಲ್ಲಿ : ಹರಿಯಾಣ ಮತ್ತು ಗೋವಾಕ್ಕೆ ಹೊಸ ರಾಜ್ಯಪಾಲರನ್ನು ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಕ್ಕೆ ಹೊಸ ಲೆಫ್ಟಿನೆಂಟ್ ಗವರ್ನರ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಆದೇಶ ಹೊರಡಿಸಿದ್ದಾರೆ.

ಪುಸಪತಿ ಅಶೋಕ್ ಗಜಪತಿ ರಾಜು ಗೋವಾ ರಾಜ್ಯಪಾಲರಾಗಿ ನೇಮಿಸಲಾಗಿದ್ದು, ಪ್ರೊ. ಆಶಿಮ್ ಕುಮಾರ್ ಘೋಷ್ ಅವರನ್ನು ಹರಿಯಾಣ ರಾಜ್ಯಪಾಲರಾಗಿ ನೇಮಿಸಲಾಗಿದೆ ಎಂದು ರಾಷ್ಟ್ರಪತಿ ಭವನದ ಹೇಳಿಕೆಯಲ್ಲಿ ತಿಳಿಸಿದೆ.

ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಬ್ರಿಗೇಡಿಯರ್ ಬಿಡಿ ಮಿಶ್ರಾ (ನಿವೃತ್ತ) ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಮಾಜಿ ಉಪಮುಖ್ಯಮಂತ್ರಿ ಕವಿಂದರ್ ಗುಪ್ತಾ ಅವರನ್ನು ಲಡಾಖ್‌ನ ಹೊಸ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿದೆ. ಎಲ್ಲಾ ನೇಮಕಾತಿಗಳು ನೇಮಕಗೊಂಡವರು ತಮ್ಮ ಕಚೇರಿಗಳ ಉಸ್ತುವಾರಿ ವಹಿಸಿಕೊಂಡ ದಿನಾಂಕದಿಂದ ಜಾರಿಗೆ ಬರುತ್ತವೆ.

ಪುಸಪತಿ ಅಶೋಕ್ ಗಜಪತಿ ರಾಜು: ಆಂಧ್ರಪ್ರದೇಶದ ವಿಜಯನಗರದ ರಾಜಮನೆತನದ ಪುಸಪತಿ ಕುಟುಂಬದಲ್ಲಿ ಜನಿಸಿದ ಪುಸಪತಿ ಅಶೋಕ್ ಗಜಪತಿ ರಾಜು ತೆಲುಗು ದೇಶಂ ಪಕ್ಷದ ಹಿರಿಯ ನಾಯಕ. ಏಳು ಬಾರಿ ಶಾಸಕರಾಗಿರುವ ಅವರು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಅಧಿಕಾರ ನಡೆಸಿದ ಅನುಭವ ಇದೆ.

2014 ರಲ್ಲಿ ವಿಜಯನಗರಂ ಲೋಕಸಭಾ ಸ್ಥಾನವನ್ನು ಗೆದ್ದ ನಂತರ, ರಾಜು ಮೊದಲ ಮೋದಿ ಸಂಪುಟದಲ್ಲಿ ಸುಮಾರು ನಾಲ್ಕು ವರ್ಷಗಳ ಕಾಲ ಕೇಂದ್ರ ನಾಗರಿಕ ವಿಮಾನಯಾನ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಆಂಧ್ರಪ್ರದೇಶದ ವಿಶೇಷ ಸ್ಥಾನಮಾನಕ್ಕೆ ಸಂಬಂಧಿಸಿದ ವಿವಾದದಿಂದಾಗಿ ಅವರು ಅಂತಿಮವಾಗಿ ರಾಜೀನಾಮೆ ನೀಡಿದ್ದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್‌ ಜಲಸಂಧಿ ಬಳಿ ಅಮೇರಿಕಾ ಅಬ್ಬರ: ಇರಾನ್‌ನ 16 ನೌಕೆಗಳು ಧ್ವಂಸ

ಟೆಹರಾನ್:‌ ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್‌ ಜಲಸಂಧಿಯ ಬಳಿ ನೌಕಾ ಮೈನ್‌ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್‌ನ 16…

20 mins ago

90 ದಿನದೊಳಗೆ ಅಂಗನವಾಡಿ ಖಾಲಿ ಹುದ್ದೆ ಭರ್ತಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೇ ಜಿಲ್ಲಾಧಿಕಾರಿಗಳು…

25 mins ago

ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ…

50 mins ago

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…

2 hours ago

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ…

2 hours ago

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

3 hours ago