ಹೈದರಾಬಾದ್: ಖ್ಯಾತ ಕವಿ ಅಂದೇ ಅವರು ಬರೆದಿರುವ “ಜಯ ಜಯ ಹೇ ತೆಲಂಗಾಣ” ಗೀತೆಯನ್ನು ರಾಜ್ಯಗೀತೆಯನ್ನಾಗಿ ಅನುಮೋದಿಸಿ ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದೆ.
ಜೂನ್.2ರಂದು ರಾಜ್ಯ ರಚನಾ ದಿನವಾಗಿದ್ದು, ಈ ಸಂಬಂಧ ಅದ್ಧೂರಿ ಆಚರಣೆ ವೇಳೆ ರಾಜ್ಯಗೀತೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಗುರುವಾರ ತಡರಾತ್ರಿ ತೆಲಂಗಾಣ ಸರ್ಕಾರ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
20ವರ್ಷಗಳ ಹಿಂದೆ ಅಂದೇ ಶ್ರೀ ಅವರು ಈ ಗೀತೆಯನ್ನು ರಚನೆ ಮಾಡಿದ್ದರು. ಈ ಗೀತೆಯಲ್ಲಿ ಯಾವುದೇ ಬದಲಾವಣೆಯನ್ನು ಸಹಾ ಮಾಡದೇ ರಾಜ್ಯಗೀತೆಯನ್ನಾಗಿ ಸ್ವೀಕರಿಸಲಾಗಿದೆ. ಮತ್ತು ಈ ಹಾಡಿಗೆ ಆಸ್ಕರ್ ವಿಜೇತ ಎಂ.ಎಂ ಕೀರವಾಣಿ ಸಂಗೀತ ಸಂಯೋಜನೆ ಮಾಡಿದ್ದಾರೆ ಎಂದು ಹೇಳಿದೆ.
ರಾಜ್ಯಗೀತೆಯನ್ನು ಎರಡು ಆವೃತ್ತಿಗಳಲ್ಲಿ ನಿರ್ಮಿಸಲಾಗಿದೆ. ಮೊದಲ ಆವೃತ್ತಿ ಎರಡೂವರೆ ನಿಮಿಷಗಳ ವರೆಗೆ ಇರುತ್ತದೆ. ಎರಡನೇ ಆವೃತ್ತಿ ಸೇರಿದಂತೆ ಪೂರ್ಣ ಹದಿಮೂರು ನಿಮಿಷಗಳ ವರೆಗೆ ನಿರೂಪಣೆಯಿದೆ. ಮತ್ತು ಮೂರು ಚರಣಗಳನ್ನು ಹೊಂದಿರುವ ಚಿಕ್ಕ ಆವೃತ್ತಿಯನ್ನು ಅಧಿಕೃತ ಕಾರ್ಯಕ್ರಮಗಳಲ್ಲಿ ಪ್ಲೇ ಮಾಡಲಾಗುವುದು. ಎರಡು ಆವೃತ್ತಿಗಳನ್ನು ರಾಜ್ಯ ಗೀತೆಯನ್ನಾಗಿ ಪರಿಗಣಿಸಲಾಗುವುದು ಎಂದು ಸಿಎಂ ರೇವಂತ್ ರೆಡ್ಡಿ ಹೇಳಿದ್ದಾರೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…