ಹೈದರಾಬಾದ್: ಖ್ಯಾತ ಕವಿ ಅಂದೇ ಅವರು ಬರೆದಿರುವ “ಜಯ ಜಯ ಹೇ ತೆಲಂಗಾಣ” ಗೀತೆಯನ್ನು ರಾಜ್ಯಗೀತೆಯನ್ನಾಗಿ ಅನುಮೋದಿಸಿ ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದೆ.
ಜೂನ್.2ರಂದು ರಾಜ್ಯ ರಚನಾ ದಿನವಾಗಿದ್ದು, ಈ ಸಂಬಂಧ ಅದ್ಧೂರಿ ಆಚರಣೆ ವೇಳೆ ರಾಜ್ಯಗೀತೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಗುರುವಾರ ತಡರಾತ್ರಿ ತೆಲಂಗಾಣ ಸರ್ಕಾರ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
20ವರ್ಷಗಳ ಹಿಂದೆ ಅಂದೇ ಶ್ರೀ ಅವರು ಈ ಗೀತೆಯನ್ನು ರಚನೆ ಮಾಡಿದ್ದರು. ಈ ಗೀತೆಯಲ್ಲಿ ಯಾವುದೇ ಬದಲಾವಣೆಯನ್ನು ಸಹಾ ಮಾಡದೇ ರಾಜ್ಯಗೀತೆಯನ್ನಾಗಿ ಸ್ವೀಕರಿಸಲಾಗಿದೆ. ಮತ್ತು ಈ ಹಾಡಿಗೆ ಆಸ್ಕರ್ ವಿಜೇತ ಎಂ.ಎಂ ಕೀರವಾಣಿ ಸಂಗೀತ ಸಂಯೋಜನೆ ಮಾಡಿದ್ದಾರೆ ಎಂದು ಹೇಳಿದೆ.
ರಾಜ್ಯಗೀತೆಯನ್ನು ಎರಡು ಆವೃತ್ತಿಗಳಲ್ಲಿ ನಿರ್ಮಿಸಲಾಗಿದೆ. ಮೊದಲ ಆವೃತ್ತಿ ಎರಡೂವರೆ ನಿಮಿಷಗಳ ವರೆಗೆ ಇರುತ್ತದೆ. ಎರಡನೇ ಆವೃತ್ತಿ ಸೇರಿದಂತೆ ಪೂರ್ಣ ಹದಿಮೂರು ನಿಮಿಷಗಳ ವರೆಗೆ ನಿರೂಪಣೆಯಿದೆ. ಮತ್ತು ಮೂರು ಚರಣಗಳನ್ನು ಹೊಂದಿರುವ ಚಿಕ್ಕ ಆವೃತ್ತಿಯನ್ನು ಅಧಿಕೃತ ಕಾರ್ಯಕ್ರಮಗಳಲ್ಲಿ ಪ್ಲೇ ಮಾಡಲಾಗುವುದು. ಎರಡು ಆವೃತ್ತಿಗಳನ್ನು ರಾಜ್ಯ ಗೀತೆಯನ್ನಾಗಿ ಪರಿಗಣಿಸಲಾಗುವುದು ಎಂದು ಸಿಎಂ ರೇವಂತ್ ರೆಡ್ಡಿ ಹೇಳಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…