ದೇಶ- ವಿದೇಶ

ಜೂನ್‌.2ರಂದು ತೆಲಂಗಾಣ ರಾಜ್ಯ ರಚನಾ ದಿನ: ಇದೇ ದಿನ ರಾಜ್ಯಕ್ಕೆ ನೂತನ ರಾಜ್ಯಗೀತೆ

ಹೈದರಾಬಾದ್‌: ಖ್ಯಾತ ಕವಿ ಅಂದೇ ಅವರು ಬರೆದಿರುವ “ಜಯ ಜಯ ಹೇ ತೆಲಂಗಾಣ” ಗೀತೆಯನ್ನು ರಾಜ್ಯಗೀತೆಯನ್ನಾಗಿ ಅನುಮೋದಿಸಿ ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದೆ.

ಜೂನ್‌.2ರಂದು ರಾಜ್ಯ ರಚನಾ ದಿನವಾಗಿದ್ದು, ಈ ಸಂಬಂಧ ಅದ್ಧೂರಿ ಆಚರಣೆ ವೇಳೆ ರಾಜ್ಯಗೀತೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಗುರುವಾರ ತಡರಾತ್ರಿ ತೆಲಂಗಾಣ ಸರ್ಕಾರ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

20ವರ್ಷಗಳ ಹಿಂದೆ ಅಂದೇ ಶ್ರೀ ಅವರು ಈ ಗೀತೆಯನ್ನು ರಚನೆ ಮಾಡಿದ್ದರು. ಈ ಗೀತೆಯಲ್ಲಿ ಯಾವುದೇ ಬದಲಾವಣೆಯನ್ನು ಸಹಾ ಮಾಡದೇ ರಾಜ್ಯಗೀತೆಯನ್ನಾಗಿ ಸ್ವೀಕರಿಸಲಾಗಿದೆ. ಮತ್ತು ಈ ಹಾಡಿಗೆ ಆಸ್ಕರ್‌ ವಿಜೇತ ಎಂ.ಎಂ ಕೀರವಾಣಿ ಸಂಗೀತ ಸಂಯೋಜನೆ ಮಾಡಿದ್ದಾರೆ ಎಂದು ಹೇಳಿದೆ.

ರಾಜ್ಯಗೀತೆಯನ್ನು ಎರಡು ಆವೃತ್ತಿಗಳಲ್ಲಿ ನಿರ್ಮಿಸಲಾಗಿದೆ. ಮೊದಲ ಆವೃತ್ತಿ ಎರಡೂವರೆ ನಿಮಿಷಗಳ ವರೆಗೆ ಇರುತ್ತದೆ. ಎರಡನೇ ಆವೃತ್ತಿ ಸೇರಿದಂತೆ ಪೂರ್ಣ ಹದಿಮೂರು ನಿಮಿಷಗಳ ವರೆಗೆ ನಿರೂಪಣೆಯಿದೆ. ಮತ್ತು ಮೂರು ಚರಣಗಳನ್ನು ಹೊಂದಿರುವ ಚಿಕ್ಕ ಆವೃತ್ತಿಯನ್ನು ಅಧಿಕೃತ ಕಾರ್ಯಕ್ರಮಗಳಲ್ಲಿ ಪ್ಲೇ ಮಾಡಲಾಗುವುದು. ಎರಡು ಆವೃತ್ತಿಗಳನ್ನು ರಾಜ್ಯ ಗೀತೆಯನ್ನಾಗಿ ಪರಿಗಣಿಸಲಾಗುವುದು ಎಂದು ಸಿಎಂ ರೇವಂತ್‌ ರೆಡ್ಡಿ ಹೇಳಿದ್ದಾರೆ.

 

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

50 mins ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

54 mins ago

ಓದುಗರ ಪತ್ರ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಸ್ವಾಗತಾರ್ಹ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…

56 mins ago

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…

58 mins ago

ನಾವಿಕನೇ ಇಲ್ಲದ ಕೊಡಗು ಪ್ರವಾಸೋದ್ಯಮ ಇಲಾಖೆ..!

ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ  ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…

1 hour ago