ದೇಶ- ವಿದೇಶ

ರಾಷ್ಟ್ರದಲ್ಲಿ ಯುಪಿಐ ಪೇಮೆಂಟ್ಸ್‌ ನೂತನ ದಾಖಲೆ

ನವದೆಹಲಿ: ರಾಷ್ಟ್ರದಲ್ಲಿ ನೂತನ ಆರ್ಥಿಕ ಕ್ರಾಂತಿಯನ್ನು ಬರೆದಿರುವ ಯುಪಿಐ ಪಾವತಿ ಈಗ ಮತ್ತೊಂದು ದಾಖಲೆಯನ್ನು ನಿರ್ಮಿಸಿದೆ. 2023-24ನೇ ಸಾಲಿನ ವಿತ್ತೀಯ ವರ್ಷದಲ್ಲಿ ಯುಪಿಐ ಪಾವತಿ ಪ್ರಮಾಣ ಶೇ.138ರಷ್ಟು ಏರಿಕೆಯಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಹಣಕಾಸು ಸಚಿವಾಲಯ, 2017-18ರ ವಿತ್ತೀಯ ವರ್ಷದಲ್ಲಿ 1 ಲಕ್ಷ ಕೋಟಿ ರೂ. ಗಳಷ್ಟು ಯುಪಿಐ ವಹಿವಾಟಿನ ಮೌಲ್ಯ ಆಗಿತ್ತು.

ಆದರೆ ಇದೀಗ ಅದರ ಮೌಲ್ಯ ಶೇ.138ರಷ್ಟು ಏರಿಕೆಯಾಗಿ ಸುಮಾರು 200 ಲಕ್ಷ ಕೋಟಿ ರೂ.ಗಳಿಗೆ ಏರಿಕೆಯಾಗಿದೆ ಎಂದು ತಿಳಿದು ಬಂದಿದೆ.

ಪ್ರಸ್ತುತ 2024-25ರ ಹಣಕಾಸು ವರ್ಷದ ಪ್ರಥಮ ಐದು ತಿಂಗಳುಗಳಲ್ಲಿ ಡಿಜಿಟಲ್‌ ಪಾವತಿಗಳ ಮೌಲ್ಯ 1,669 ಲಕ್ಷ ಕೋಟಿ ರೂಗೆ ಏರಿಕೆ ಕಂಡಿತ್ತು. ಆದರೆ ಈಗ ಡಿಜಿಟಲ್‌ ಪಾವತಿಗಳ ವಹಿವಾಟಿನ ಪ್ರಮಾಣ 8,659 ಕೋಟಿಯತ್ತ ಮುಖ ಮಾಡಿದೆ. ಯುಪಿಐ ವಹಿವಾಟಿನ ಮೌಲ್ಯವು 1 ಲಕ್ಷ ಕೋಟಿಯಿಂದ 200 ಲಕ್ಷ ಕೋಟಿ ಅಂದರೆ ಶೇ.138ರಷ್ಟು ಏರಿಕೆ ಕಂಡಿದೆ ಎಂದು ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಡಿಜಿಟಲ್‌ ಪಾವತಿಗಳು ಈ ವರ್ಷದ ಕಳೆದ 5 ತಿಂಗಳುಗಳಲ್ಲಿ ಒಟ್ಟು ಮೌಲ್ಯದ ಪ್ರಕಾರ 101 ಲಕ್ಷ ಕೋಟಿ ರೂ. ವಹಿವಾಟಿನ ಬೆಳವಣಿಗೆಯನ್ನು ಕಂಡಿದೆ. 2017-18ರಲ್ಲಿ 2,071 ಕೋಟಿಯಷ್ಟು ಒಟ್ಟು ಡಿಜಿಟಲ್‌ ಪಾವತಿ ವಹಿವಾಟಿನ ಸಂಖ್ಯೆಯಿದ್ದರೆ, 2023-24ರಲ್ಲಿ 18,737 ಕೋಟಿ ಏರಿಕೆಯಾಗಿದೆ ಎಂದು ಹಣಕಾಸು ಸಚಿವಾಲಯ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

 

ಆಂದೋಲನ ಡೆಸ್ಕ್

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago