ದೇಶ- ವಿದೇಶ

ರಾಷ್ಟ್ರದಲ್ಲಿ ಯುಪಿಐ ಪೇಮೆಂಟ್ಸ್‌ ನೂತನ ದಾಖಲೆ

ನವದೆಹಲಿ: ರಾಷ್ಟ್ರದಲ್ಲಿ ನೂತನ ಆರ್ಥಿಕ ಕ್ರಾಂತಿಯನ್ನು ಬರೆದಿರುವ ಯುಪಿಐ ಪಾವತಿ ಈಗ ಮತ್ತೊಂದು ದಾಖಲೆಯನ್ನು ನಿರ್ಮಿಸಿದೆ. 2023-24ನೇ ಸಾಲಿನ ವಿತ್ತೀಯ ವರ್ಷದಲ್ಲಿ ಯುಪಿಐ ಪಾವತಿ ಪ್ರಮಾಣ ಶೇ.138ರಷ್ಟು ಏರಿಕೆಯಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಹಣಕಾಸು ಸಚಿವಾಲಯ, 2017-18ರ ವಿತ್ತೀಯ ವರ್ಷದಲ್ಲಿ 1 ಲಕ್ಷ ಕೋಟಿ ರೂ. ಗಳಷ್ಟು ಯುಪಿಐ ವಹಿವಾಟಿನ ಮೌಲ್ಯ ಆಗಿತ್ತು.

ಆದರೆ ಇದೀಗ ಅದರ ಮೌಲ್ಯ ಶೇ.138ರಷ್ಟು ಏರಿಕೆಯಾಗಿ ಸುಮಾರು 200 ಲಕ್ಷ ಕೋಟಿ ರೂ.ಗಳಿಗೆ ಏರಿಕೆಯಾಗಿದೆ ಎಂದು ತಿಳಿದು ಬಂದಿದೆ.

ಪ್ರಸ್ತುತ 2024-25ರ ಹಣಕಾಸು ವರ್ಷದ ಪ್ರಥಮ ಐದು ತಿಂಗಳುಗಳಲ್ಲಿ ಡಿಜಿಟಲ್‌ ಪಾವತಿಗಳ ಮೌಲ್ಯ 1,669 ಲಕ್ಷ ಕೋಟಿ ರೂಗೆ ಏರಿಕೆ ಕಂಡಿತ್ತು. ಆದರೆ ಈಗ ಡಿಜಿಟಲ್‌ ಪಾವತಿಗಳ ವಹಿವಾಟಿನ ಪ್ರಮಾಣ 8,659 ಕೋಟಿಯತ್ತ ಮುಖ ಮಾಡಿದೆ. ಯುಪಿಐ ವಹಿವಾಟಿನ ಮೌಲ್ಯವು 1 ಲಕ್ಷ ಕೋಟಿಯಿಂದ 200 ಲಕ್ಷ ಕೋಟಿ ಅಂದರೆ ಶೇ.138ರಷ್ಟು ಏರಿಕೆ ಕಂಡಿದೆ ಎಂದು ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಡಿಜಿಟಲ್‌ ಪಾವತಿಗಳು ಈ ವರ್ಷದ ಕಳೆದ 5 ತಿಂಗಳುಗಳಲ್ಲಿ ಒಟ್ಟು ಮೌಲ್ಯದ ಪ್ರಕಾರ 101 ಲಕ್ಷ ಕೋಟಿ ರೂ. ವಹಿವಾಟಿನ ಬೆಳವಣಿಗೆಯನ್ನು ಕಂಡಿದೆ. 2017-18ರಲ್ಲಿ 2,071 ಕೋಟಿಯಷ್ಟು ಒಟ್ಟು ಡಿಜಿಟಲ್‌ ಪಾವತಿ ವಹಿವಾಟಿನ ಸಂಖ್ಯೆಯಿದ್ದರೆ, 2023-24ರಲ್ಲಿ 18,737 ಕೋಟಿ ಏರಿಕೆಯಾಗಿದೆ ಎಂದು ಹಣಕಾಸು ಸಚಿವಾಲಯ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

 

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

4 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

8 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

10 hours ago